Homeಅಂತರಾಷ್ಟ್ರೀಯಅನಿಶ್ಚಿತ ಆರ್ಥಿಕತೆ: 18,000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆಜಾನ್

ಅನಿಶ್ಚಿತ ಆರ್ಥಿಕತೆ: 18,000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆಜಾನ್

- Advertisement -
- Advertisement -

ಆನ್‌ಲೈನ್ ಮಾರುಕಟ್ಟೆಯ ದೈತ್ಯ ಸಂಸ್ಥೆ ಅಮೆಜಾನ್ ಅನಿಶ್ಚಿತ ಆರ್ಥಿಕತೆಯ ಕಾರಣ ನೀಡಿ ಮತ್ತೆ 18,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ಮುಂದಾಗಿದೆ.

ನವೆಂಬರ್ ತಿಂಗಳಿನಲ್ಲಿ 10,000 ಉದ್ಯೋಗಿಗಳನ್ನು ಮನೆಗೆ ಕಳಿಸಿದ್ದ ಅಮೆಜಾನ್ ಕಂಪನಿಯು ಈಗ ಮತ್ತೆ 18,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಇದು ಜಾಗತಿಕ ಆರ್ಥಿಕ ಕುಸಿತದ ಕರಾಳ ಪರಿಣಾಮವಾಗಿದ್ದು ಲಕ್ಷಾಂತರ ಜನರ ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ.

“ನಾವು ಕೇವಲ 18,000 ಉದ್ಯೋಗಿಗಳನ್ನು ತೆಗೆದುಹಾಕಲು ಯೋಜಿಸಿದ್ದೇವೆ” ಎಂದು ಅಮೆಜಾನ್ ಸಿಇಒ ಆಂಡಿ ಜಸ್ಸಿ ತಮ್ಮ ಸಿಬ್ಬಂದಿಗೆ ಕಳಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ರೀತಿಯ ಉದ್ಯೋಗ ಕಡಿತ ಜನರಿಗೆ ಕಷ್ಟಕರವಾಗಲಿದೆ ಎಂಬುದು ನಮಗೆ ಆಳವಾಗಿ ತಿಳಿದಿದೆ. ನಾವು ಈ ನಿರ್ಧಾರಗಳನ್ನು ಲಘುವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಕೆಲಸ ಕಳೆದುಕೊಂಡವರಿಗೆ ಬೇರ್ಪಡಿಕೆಯ ಪಾವತಿ, ಆರೋಗ್ಯ ವಿಮೆ ಮತ್ತು ಪರ್ಯಾಯ ಕೆಲಸಕ್ಕೆ ಸಹಾಯ ಮಾಡುವ ಪ್ಯಾಕೇಜ್‌ ಅನ್ನು ನೀಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಅಮೆಜಾನ್‌ ಕಂಪನಿಗೆ ಆರ್ಥಿಕ ಹಿಂಜರಿತದ ಹೊಡೆತ ಬಿದ್ದಿದ್ದು, ಅದು ಈಗಲೂ ಮುಂದುವರೆಯುತ್ತಿದೆ. ಮುಂದಿನ ಅನಿಶ್ಚಿತ ಆರ್ಥಿಕತೆಯ ದೃ‍ಷ್ಟಿಯಿಂದ ಈ ಕ್ರಮಗಳು ಅನಿವಾರ್ಯವಾಗಿದೆ. ಜನವರಿ 18 ರಿಂದ ಕೆಲಸ ಕಡಿತ ಯೋಜನೆ ಜಾರಿಗೊಳ್ಳಲ್ಲಿದೆ. ನಮ್ಮ ಕಂಪನಿಯ ಉದ್ಯೋಗಿಯೊಬ್ಬರು ಈ ವಿಷಯವನ್ನು ಬಹಿರಂಗಗೊಳಿಸಿರುವುದರಿಂದ ನಾವು ದಿಢೀರ್ ಎಂದು ಘೋಷಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಆಂಡಿ ಜಸ್ಸಿ ತಿಳಿಸಿದ್ದಾರೆ.

ಸುಮಾರು 15 ಲಕ್ಷ ಉದ್ಯೋಗಿಗಳನ್ನು ಹೊಂದಿದ್ದೇವೆ ಎಂದು ಹೇಳಿಕೊಂಡಿರುವ ಅಮೆಜಾನ್ ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ ಸಂದರ್ಭದಲ್ಲಿ ಅಮೆಜಾನ್ ಅತಿ ಹೆಚ್ಚು ಕೆಲಸಗಾರರನ್ನು ನೇಮಿಸಿಕೊಂಡಿತ್ತು. ಆಗಿನ ಜನರ ಬೇಡಿಕೆಗೆ ಕೆಲಸಗಾರರ ಅಗತ್ಯವಿತ್ತು. ಆದರೆ ಎರಡು ವರ್ಷಗಳ ನಂತರ ಆನ್‌ಲೈನ್ ಬೇಡಿಕೆ ಕುಗ್ಗಿದಂತೆ ಕೆಲಸಗಾರರನ್ನು ತೆಗೆಯುವ ಪರಿಪಾಠ ಆರಂಭವಾಗಿದೆ. ಅಮೆಜಾನ್ ಮಾತ್ರವಲ್ಲದೆ ಹಲವಾರು ಕಂಪನಿಗಳು ಸಹ ಉದ್ಯೋಗಿಗಳ ವಜಾದಲ್ಲಿ ನಿರತವಾಗಿವೆ. ಹಾಗಾಗಿ ಮುಂದಿನ ದಿನಗಳಲ್ಲಿ ನಿರುದ್ಯೋಗದ ಪ್ರಮಾಣ ತೀವ್ರತರದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ; ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...