Homeಮುಖಪುಟಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

- Advertisement -
- Advertisement -

ಗೋಪಾಲ್‌ಗಂಜ್ (ಬಿಹಾರ): ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ, ಗೋವುಗಳನ್ನು ಸಾಕಣೆಗಾಗಿ ಸಾಗಿಸುತ್ತಿದ್ದ ವೃದ್ಧ ಮುಸ್ಲಿಂ ದಂಪತಿಯನ್ನು ಹಿಂದೂ ಸಂಘಟನೆಯೊಂದರ ನಾಯಕರು ತಡೆದು ನಿಲ್ಲಿಸಿ, ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದಿ ಅಬ್ಸರ್ವರ್ ಪೋಸ್ಟ್‌ ವರದಿ ಮಾಡಿದೆ.

ಘಟನೆಯು ಪಂಚದೇವರಿಯ ಗ್ರಾಮದಲ್ಲಿ ನಡೆದಿದ್ದು, ದಂಪತಿಯು ತಾವು ಸಾಕಲು ಖರೀದಿಸಿದ್ದ ಎರಡು ಹಸುಗಳನ್ನು ಹುಲ್ಲುಗಾವಲು ಮೈದಾನಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ, ಹಿಂದೂ ಸಂಘಟನೆಯ ನಾಯಕ ಪ್ರದೀಪ್ ಮೌರ್ಯ ತನ್ನ ಸಹಚರರೊಂದಿಗೆ ದಂಪತಿಯನ್ನು ಅಡ್ಡಗಟ್ಟಿ, “ಗೋ ಕಳ್ಳಸಾಗಣೆದಾರರು” ಎಂದು ಆರೋಪಿಸಿದ್ದಾನೆ. ಆರೋಪಿಗಳಾದ ಮೌರ್ಯ ಮತ್ತು ಆತನ ಸಂಗಡಿಗರು ಯಾವುದೇ ದಾಖಲೆಗಳನ್ನು ಪರಿಶೀಲಿಸಲು ಮುಂದಾಗದೆ, ದಂಪತಿಯ ಹೇಳಿಕೆಯನ್ನೂ ನಂಬಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ದಂಪತಿಯ ನಿರಂತರ ಮನವಿ

ದಂಪತಿಯಲ್ಲಿನ ವೃದ್ಧ ವ್ಯಕ್ತಿ ತಮ್ಮನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದು, “ನಾನು ಈ ಹಸುಗಳನ್ನು ಸಾಕಲು ತೆಗೆದುಕೊಂಡು ಹೋಗುತ್ತಿದ್ದೇನೆ. ಇದು ನಮ್ಮ ಕುಟುಂಬದ ವ್ಯಾಪಾರ. ಹಾಲು ಮತ್ತು ಇತರ ವ್ಯವಹಾರಗಳಿಗಾಗಿ ನಾವು ಯಾವಾಗಲೂ ಎರಡು-ಮೂರು ಹಸುಗಳನ್ನು ಸಾಕುತ್ತೇವೆ. ನಾನು ಮಾಡುತ್ತಿರುವುದು ಕಾನೂನುಬಾಹಿರವಾದುದಲ್ಲ” ಎಂದು ಹೇಳಿದ್ದಾರೆ. ಅವರ ಪತ್ನಿಯೂ, “ನಾವು ಈ ಹಸುಗಳನ್ನು ಪ್ರೀತಿಯಿಂದ ನೋಡಿಕೊಳ್ಳಲು ಖರೀದಿಸಿದ್ದೇವೆ. ನಮ್ಮನ್ನು ಯಾಕೆ ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ?” ಎಂದು ಕಣ್ಣೀರು ಹಾಕಿದ್ದಾರೆ.

ಬೆದರಿಕೆ ಹಾಕಿದ ಆರೋಪಿ

ದಂಪತಿಯ ಮನವಿಗೆ ಕಿವಿಗೊಡದ ಮೌರ್ಯ, ಅವರಿಗೆ ಬೆದರಿಕೆ ಹಾಕಿರುವುದು ವೈರಲ್ ಆದ ವಿಡಿಯೋದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. “ನೀವು ಪ್ರತಿದಿನ ಹಸುಗಳನ್ನು ಸಾಗಿಸುವುದನ್ನು ನಾನು ನೋಡಿದ್ದೇನೆ. ಮುಂದಿನ ಬಾರಿ ನೀವು ನನ್ನ ಕಣ್ಣಿಗೆ ಬಿದ್ದರೆ, ನಾನು ನಿಮ್ಮನ್ನು ಇಲ್ಲಿಯೇ ಕಟ್ಟಿಹಾಕುತ್ತೇನೆ ಮತ್ತು ಪೊಲೀಸರಿಗೆ ಕರೆ ಮಾಡುತ್ತೇನೆ” ಎಂದು ಆತ ಗದರಿಸಿದ್ದಾನೆ. ಈ ಬೆದರಿಕೆ ದಂಪತಿಯನ್ನು ಇನ್ನಷ್ಟು ಆತಂಕಕ್ಕೆ ದಳ್ಳಿದೆ.

ಸ್ಥಳೀಯರ ಆಕ್ಷೇಪ

ಘಟನೆಯ ಬಗ್ಗೆ ಸ್ಥಳೀಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಸರನ್ನು ಬಹಿರಂಗಪಡಿಸಲು ಇಚ್ಛಿಸದ ಒಬ್ಬ ಸ್ಥಳೀಯ ನಿವಾಸಿ, “ಗ್ರಾಮಗಳ ನಡುವೆ ಹಸು ಅಥವಾ ಎಮ್ಮೆಗಳನ್ನು ಖರೀದಿಸುವುದು ಮತ್ತು ಸಾಗಿಸುವುದು ಇಲ್ಲಿನ ರೈತರಿಗೆ ಸಾಮಾನ್ಯ ಅಭ್ಯಾಸ. ಇದು ಹಾಲು ಮತ್ತು ಜಾನುವಾರು ಸಾಕಣೆಗೆ ಅಗತ್ಯವಾಗಿದೆ. ಇದರಲ್ಲಿ ಯಾವುದೇ ಕಾನೂನು ಉಲ್ಲಂಘನೆ ಇಲ್ಲ” ಎಂದು ಹೇಳಿದ್ದಾರೆ. ದಂಪತಿಯನ್ನು ಅನಗತ್ಯವಾಗಿ ಗುರಿಯಾಗಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆಯು ಬಿಹಾರದ ಗ್ರಾಮೀಣ ಪ್ರದೇಶಗಳಲ್ಲಿ ಧಾರ್ಮಿಕ ಆಧಾರದ ಮೇಲೆ ನಡೆಯುತ್ತಿರುವ ದ್ವೇಷ ಮತ್ತು ಬೆದರಿಕೆಗಳ ಬಗ್ಗೆ ಗಂಭೀರ ಕಳವಳ ಮೂಡಿಸಿದೆ. ಕಾನೂನು ತಜ್ಞರು, ಗೋವು ಸಾಕಣೆ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಲ್ಲ ಮತ್ತು ಕೇವಲ ಧರ್ಮದ ಆಧಾರದ ಮೇಲೆ ಜನರನ್ನು ಬೆದರಿಸುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹೇಳಿದ್ದಾರೆ.

ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹಂಚಿಕೆಯಾಗುತ್ತಿದ್ದಂತೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಲವರು “ಕಾನೂನುಬದ್ಧ ವ್ಯಾಪಾರವನ್ನು ಮಾಡುವುದಕ್ಕೆ ಯಾರನ್ನೂ ಬೆದರಿಸಬಾರದು” ಎಂದು ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ, ಗೋಪಾಲ್‌ಗಂಜ್ ಜಿಲ್ಲಾಡಳಿತ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಜುನೈದ್ ಖಾನ್ ಹತ್ಯೆ ಪ್ರಕರಣ: ಪ್ರಧಾನ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...