Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ಸಂರಕ್ಷಣಾ ಸಮಿತಿಗೆ ಪತ್ರ ಬರೆದು ತಪ್ಪೊಪ್ಪಿಕೊಂಡಿದ್ದ ವಿಇಎಸ್ ಶಾಲೆಯು, ಪತ್ರಿಕಾಗೋಷ್ಠಿಯಲ್ಲಿ ಬೇರೆಯ ಆರೋಪಗಳನ್ನು ಮಾಡಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ತಪ್ಪೊಪ್ಪಿಕೊಂಡು ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿತ್ತು. ಆದರೆ ಇಂದು (ಸೋಮವಾರ) ರಾಮನಗರದಲ್ಲಿ ಶಾಲೆಯ ಆಡಳಿತ ಮಂಡಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಷಯಾಂತರ ಮಾಡಲು ಯತ್ನಿಸಲಾಯಿತು ಎಂದು ಆಕ್ರೋಶ ವ್ಯಕ್ತವಾಗಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು. ಬಳಿಕ ಶಾಲಾ ಮಂಡಳಿ ತಪ್ಪೊಪ್ಪಿಕೊಂಡು, ಸಂವಿಧಾನ ರಕ್ಷಣಾ ಸಮಿತಿಗೆ ಪತ್ರವನ್ನೂ ಬರೆದಿತ್ತು. ಆರು ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಆರು ಅಂಶಗಳು

1. ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ ‘72 years of Bharathiya Samvidana/Indian Constitution has it reached expiry date’ ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ.

2. ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ.

3. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ.

4. ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ.

5. ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ.

6. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ.

ಪತ್ರದಲ್ಲಿ ಹೇಳಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಶಾಲಾ ಮಂಡಳಿ, ಕ್ಷಮಾಪಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕ್ಷಮಾಪಣಾ ಪತ್ರದ ಬಗ್ಗೆಯೂ ಹೇಳಲಿಲ್ಲ ಎಂದು ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

“ರಾಮನಗರದಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಬಹಿರಂಗವಾಗಿ ಕ್ಷಮೆಯಾಚಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸಂಸ್ಥೆಯ ಅಧ್ಯಕ್ಷರಾದ ಅರ್ಜುನ್‌, ಕಾನೂನು ಸಲಹೆಗಾರರಾದ ಶಿವಮ್ಮ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಅದಕ್ಕೆ ಹೊರತಾಗಿ ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು” ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರತಿನಿಧಿ ರಾಣಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಸಂಸ್ಥೆಯ ವಿರುದ್ಧ ಎರಡು ವರ್ಷಗಳಿಂದ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ವಿಷಯಾಂತರ ಮಾಡಿದ್ದಾರೆ. ‘ಸಂವಿಧಾನಕ್ಕೆ 72 ವರ್ಷಗಳು’ ಎಂದು ವಿಷಯ ಕೊಡಲಾಗಿತ್ತೇ ಹೊರತು, ‘ಸಂವಿಧಾನದ ಅವಧಿ ಮುಗಿದಿದೆ’ ಎಂದು ಕೊಡಲಾಗಿರಲಿಲ್ಲ. ಆದರೆ ವಿಷಯವನ್ನು ತಿರುಚಿ ಸಂಸ್ಥೆಯ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ದೂರಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲಾಗಿದೆ. ಸಂವಿಧಾನ ರಕ್ಷಣಾ ಐಕ್ಯತಾ ಸಮಿತಿಗೆ, ಅಧಿಕಾರಿಗಳಿಗೆ ಸಂಸ್ಥೆಯ ಲೆಟರ್‌ ಹೆಡ್‌ನಲ್ಲಿ ಲಿಖಿತವಾಗಿ ನೀಡಲಾಗಿರುವ ವಿಷಯವನ್ನು ವಿಇಎಸ್‌ ಸಂಸ್ಥೆ ಮರೆಮಾಚಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಈ ಕುರಿತು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಬದಲಾದ ನಿಲುವನ್ನು ಸ್ಥಳದಲ್ಲೇ ಖಂಡಿಸಿದ್ದೇವೆ” ಎಂದು ರಾಣಿಯವರು ಮಾಹಿತಿ ನೀಡಿದರು.

(ಶಾಲೆಯ ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.)


ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಷ್ಟಕ್ಕೆ ಸಿಲುಕಿದಾಗ ಮನುವಾದಿಗಳು ಸಾಮಾನ್ಯವಾಗಿ ಏನು ಮಾಡುತ್ತಾರೋ ಇಲ್ಲೂಸಹ ಅದನ್ನೇ ಮಾಡಿದ್ದಾರೆ. ಈ ಪತ್ರಿಕಾ ಗೋಷ್ಠಿಯಲ್ಲಿ ಮನುವಾದಿಗಳನ್ನು ಸಮರ್ತಿಸಿಕೊಂಡಿರುವುದು, ಸ್ವತಃ ದಲಿತರೂ, ಅಂಬೇಡ್ಕರ್ ಅಬಿಮಾನಿಗಳೂ ಮತ್ತು ಸಮರ್ಥ ವಕೀಲರು ಆದ ನ್ಯಾಯವಾದಿ ಶಿವಮ್ಮ! ಇಲ್ಲಿಯೇ ಮನುವಾದಿಗಳ ಕುತಂತ್ರ ಮತ್ತು ಅಹಿಂದ ವರ್ಗದವರ ದುರಂತ ಅಡಗಿರುವುದು.

  2. ಲೆ ಮನುವಾದಿ ಕೋಮುವಾದಿಗಳ… ಅಂಬೇಡ್ಕರ್ ಅನ್ನುವ ಮಹಾನ್ ಚೇತನ ಎಂದೆಂದೂ ಗತಿಸಿ ಹೋಗದಂತಹ ಸೂರ್ಯ… ಅವರ ಹೆಸರಿಗೆ ಮತ್ತು ಅವರ ಗೌರವಕ್ಕೆ ಒಂದು ಸಣ್ಣ ಕಪ್ಪು ಚುಕ್ಕೆಯನ್ನು ನಿಮ್ಮಿಂದ ಇಡಲು ಸಾಧ್ಯವಿಲ್ಲ…. ಅವರಂತೆ ನೀವೆಂದೂ ಆಗಲು ಅಸಾಧ್ಯದ ಮಾತು… ಕೊನೆಪಕ್ಷ ಅವರ ಆದರ್ಶಗಳನ್ನದರು ಜೀವನದಲ್ಲಿ ಅಳವಡಿಸಿ ಕೊಳ್ಳಿ…ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...