Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ಸಂರಕ್ಷಣಾ ಸಮಿತಿಗೆ ಪತ್ರ ಬರೆದು ತಪ್ಪೊಪ್ಪಿಕೊಂಡಿದ್ದ ವಿಇಎಸ್ ಶಾಲೆಯು, ಪತ್ರಿಕಾಗೋಷ್ಠಿಯಲ್ಲಿ ಬೇರೆಯ ಆರೋಪಗಳನ್ನು ಮಾಡಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ತಪ್ಪೊಪ್ಪಿಕೊಂಡು ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿತ್ತು. ಆದರೆ ಇಂದು (ಸೋಮವಾರ) ರಾಮನಗರದಲ್ಲಿ ಶಾಲೆಯ ಆಡಳಿತ ಮಂಡಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಷಯಾಂತರ ಮಾಡಲು ಯತ್ನಿಸಲಾಯಿತು ಎಂದು ಆಕ್ರೋಶ ವ್ಯಕ್ತವಾಗಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು. ಬಳಿಕ ಶಾಲಾ ಮಂಡಳಿ ತಪ್ಪೊಪ್ಪಿಕೊಂಡು, ಸಂವಿಧಾನ ರಕ್ಷಣಾ ಸಮಿತಿಗೆ ಪತ್ರವನ್ನೂ ಬರೆದಿತ್ತು. ಆರು ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಆರು ಅಂಶಗಳು

1. ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ ‘72 years of Bharathiya Samvidana/Indian Constitution has it reached expiry date’ ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ.

2. ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ.

3. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ.

4. ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ.

5. ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ.

6. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ.

ಪತ್ರದಲ್ಲಿ ಹೇಳಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಶಾಲಾ ಮಂಡಳಿ, ಕ್ಷಮಾಪಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕ್ಷಮಾಪಣಾ ಪತ್ರದ ಬಗ್ಗೆಯೂ ಹೇಳಲಿಲ್ಲ ಎಂದು ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

“ರಾಮನಗರದಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಬಹಿರಂಗವಾಗಿ ಕ್ಷಮೆಯಾಚಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸಂಸ್ಥೆಯ ಅಧ್ಯಕ್ಷರಾದ ಅರ್ಜುನ್‌, ಕಾನೂನು ಸಲಹೆಗಾರರಾದ ಶಿವಮ್ಮ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಅದಕ್ಕೆ ಹೊರತಾಗಿ ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು” ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರತಿನಿಧಿ ರಾಣಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಸಂಸ್ಥೆಯ ವಿರುದ್ಧ ಎರಡು ವರ್ಷಗಳಿಂದ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ವಿಷಯಾಂತರ ಮಾಡಿದ್ದಾರೆ. ‘ಸಂವಿಧಾನಕ್ಕೆ 72 ವರ್ಷಗಳು’ ಎಂದು ವಿಷಯ ಕೊಡಲಾಗಿತ್ತೇ ಹೊರತು, ‘ಸಂವಿಧಾನದ ಅವಧಿ ಮುಗಿದಿದೆ’ ಎಂದು ಕೊಡಲಾಗಿರಲಿಲ್ಲ. ಆದರೆ ವಿಷಯವನ್ನು ತಿರುಚಿ ಸಂಸ್ಥೆಯ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ದೂರಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲಾಗಿದೆ. ಸಂವಿಧಾನ ರಕ್ಷಣಾ ಐಕ್ಯತಾ ಸಮಿತಿಗೆ, ಅಧಿಕಾರಿಗಳಿಗೆ ಸಂಸ್ಥೆಯ ಲೆಟರ್‌ ಹೆಡ್‌ನಲ್ಲಿ ಲಿಖಿತವಾಗಿ ನೀಡಲಾಗಿರುವ ವಿಷಯವನ್ನು ವಿಇಎಸ್‌ ಸಂಸ್ಥೆ ಮರೆಮಾಚಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಈ ಕುರಿತು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಬದಲಾದ ನಿಲುವನ್ನು ಸ್ಥಳದಲ್ಲೇ ಖಂಡಿಸಿದ್ದೇವೆ” ಎಂದು ರಾಣಿಯವರು ಮಾಹಿತಿ ನೀಡಿದರು.

(ಶಾಲೆಯ ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.)


ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಷ್ಟಕ್ಕೆ ಸಿಲುಕಿದಾಗ ಮನುವಾದಿಗಳು ಸಾಮಾನ್ಯವಾಗಿ ಏನು ಮಾಡುತ್ತಾರೋ ಇಲ್ಲೂಸಹ ಅದನ್ನೇ ಮಾಡಿದ್ದಾರೆ. ಈ ಪತ್ರಿಕಾ ಗೋಷ್ಠಿಯಲ್ಲಿ ಮನುವಾದಿಗಳನ್ನು ಸಮರ್ತಿಸಿಕೊಂಡಿರುವುದು, ಸ್ವತಃ ದಲಿತರೂ, ಅಂಬೇಡ್ಕರ್ ಅಬಿಮಾನಿಗಳೂ ಮತ್ತು ಸಮರ್ಥ ವಕೀಲರು ಆದ ನ್ಯಾಯವಾದಿ ಶಿವಮ್ಮ! ಇಲ್ಲಿಯೇ ಮನುವಾದಿಗಳ ಕುತಂತ್ರ ಮತ್ತು ಅಹಿಂದ ವರ್ಗದವರ ದುರಂತ ಅಡಗಿರುವುದು.

  2. ಲೆ ಮನುವಾದಿ ಕೋಮುವಾದಿಗಳ… ಅಂಬೇಡ್ಕರ್ ಅನ್ನುವ ಮಹಾನ್ ಚೇತನ ಎಂದೆಂದೂ ಗತಿಸಿ ಹೋಗದಂತಹ ಸೂರ್ಯ… ಅವರ ಹೆಸರಿಗೆ ಮತ್ತು ಅವರ ಗೌರವಕ್ಕೆ ಒಂದು ಸಣ್ಣ ಕಪ್ಪು ಚುಕ್ಕೆಯನ್ನು ನಿಮ್ಮಿಂದ ಇಡಲು ಸಾಧ್ಯವಿಲ್ಲ…. ಅವರಂತೆ ನೀವೆಂದೂ ಆಗಲು ಅಸಾಧ್ಯದ ಮಾತು… ಕೊನೆಪಕ್ಷ ಅವರ ಆದರ್ಶಗಳನ್ನದರು ಜೀವನದಲ್ಲಿ ಅಳವಡಿಸಿ ಕೊಳ್ಳಿ…ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...