Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ಸಂರಕ್ಷಣಾ ಸಮಿತಿಗೆ ಪತ್ರ ಬರೆದು ತಪ್ಪೊಪ್ಪಿಕೊಂಡಿದ್ದ ವಿಇಎಸ್ ಶಾಲೆಯು, ಪತ್ರಿಕಾಗೋಷ್ಠಿಯಲ್ಲಿ ಬೇರೆಯ ಆರೋಪಗಳನ್ನು ಮಾಡಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ತಪ್ಪೊಪ್ಪಿಕೊಂಡು ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿತ್ತು. ಆದರೆ ಇಂದು (ಸೋಮವಾರ) ರಾಮನಗರದಲ್ಲಿ ಶಾಲೆಯ ಆಡಳಿತ ಮಂಡಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಷಯಾಂತರ ಮಾಡಲು ಯತ್ನಿಸಲಾಯಿತು ಎಂದು ಆಕ್ರೋಶ ವ್ಯಕ್ತವಾಗಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು. ಬಳಿಕ ಶಾಲಾ ಮಂಡಳಿ ತಪ್ಪೊಪ್ಪಿಕೊಂಡು, ಸಂವಿಧಾನ ರಕ್ಷಣಾ ಸಮಿತಿಗೆ ಪತ್ರವನ್ನೂ ಬರೆದಿತ್ತು. ಆರು ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಆರು ಅಂಶಗಳು

1. ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ ‘72 years of Bharathiya Samvidana/Indian Constitution has it reached expiry date’ ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ.

2. ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ.

3. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ.

4. ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ.

5. ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ.

6. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ.

ಪತ್ರದಲ್ಲಿ ಹೇಳಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಶಾಲಾ ಮಂಡಳಿ, ಕ್ಷಮಾಪಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕ್ಷಮಾಪಣಾ ಪತ್ರದ ಬಗ್ಗೆಯೂ ಹೇಳಲಿಲ್ಲ ಎಂದು ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

“ರಾಮನಗರದಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಬಹಿರಂಗವಾಗಿ ಕ್ಷಮೆಯಾಚಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸಂಸ್ಥೆಯ ಅಧ್ಯಕ್ಷರಾದ ಅರ್ಜುನ್‌, ಕಾನೂನು ಸಲಹೆಗಾರರಾದ ಶಿವಮ್ಮ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಅದಕ್ಕೆ ಹೊರತಾಗಿ ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು” ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರತಿನಿಧಿ ರಾಣಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಸಂಸ್ಥೆಯ ವಿರುದ್ಧ ಎರಡು ವರ್ಷಗಳಿಂದ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ವಿಷಯಾಂತರ ಮಾಡಿದ್ದಾರೆ. ‘ಸಂವಿಧಾನಕ್ಕೆ 72 ವರ್ಷಗಳು’ ಎಂದು ವಿಷಯ ಕೊಡಲಾಗಿತ್ತೇ ಹೊರತು, ‘ಸಂವಿಧಾನದ ಅವಧಿ ಮುಗಿದಿದೆ’ ಎಂದು ಕೊಡಲಾಗಿರಲಿಲ್ಲ. ಆದರೆ ವಿಷಯವನ್ನು ತಿರುಚಿ ಸಂಸ್ಥೆಯ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ದೂರಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲಾಗಿದೆ. ಸಂವಿಧಾನ ರಕ್ಷಣಾ ಐಕ್ಯತಾ ಸಮಿತಿಗೆ, ಅಧಿಕಾರಿಗಳಿಗೆ ಸಂಸ್ಥೆಯ ಲೆಟರ್‌ ಹೆಡ್‌ನಲ್ಲಿ ಲಿಖಿತವಾಗಿ ನೀಡಲಾಗಿರುವ ವಿಷಯವನ್ನು ವಿಇಎಸ್‌ ಸಂಸ್ಥೆ ಮರೆಮಾಚಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಈ ಕುರಿತು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಬದಲಾದ ನಿಲುವನ್ನು ಸ್ಥಳದಲ್ಲೇ ಖಂಡಿಸಿದ್ದೇವೆ” ಎಂದು ರಾಣಿಯವರು ಮಾಹಿತಿ ನೀಡಿದರು.

(ಶಾಲೆಯ ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.)


ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಷ್ಟಕ್ಕೆ ಸಿಲುಕಿದಾಗ ಮನುವಾದಿಗಳು ಸಾಮಾನ್ಯವಾಗಿ ಏನು ಮಾಡುತ್ತಾರೋ ಇಲ್ಲೂಸಹ ಅದನ್ನೇ ಮಾಡಿದ್ದಾರೆ. ಈ ಪತ್ರಿಕಾ ಗೋಷ್ಠಿಯಲ್ಲಿ ಮನುವಾದಿಗಳನ್ನು ಸಮರ್ತಿಸಿಕೊಂಡಿರುವುದು, ಸ್ವತಃ ದಲಿತರೂ, ಅಂಬೇಡ್ಕರ್ ಅಬಿಮಾನಿಗಳೂ ಮತ್ತು ಸಮರ್ಥ ವಕೀಲರು ಆದ ನ್ಯಾಯವಾದಿ ಶಿವಮ್ಮ! ಇಲ್ಲಿಯೇ ಮನುವಾದಿಗಳ ಕುತಂತ್ರ ಮತ್ತು ಅಹಿಂದ ವರ್ಗದವರ ದುರಂತ ಅಡಗಿರುವುದು.

  2. ಲೆ ಮನುವಾದಿ ಕೋಮುವಾದಿಗಳ… ಅಂಬೇಡ್ಕರ್ ಅನ್ನುವ ಮಹಾನ್ ಚೇತನ ಎಂದೆಂದೂ ಗತಿಸಿ ಹೋಗದಂತಹ ಸೂರ್ಯ… ಅವರ ಹೆಸರಿಗೆ ಮತ್ತು ಅವರ ಗೌರವಕ್ಕೆ ಒಂದು ಸಣ್ಣ ಕಪ್ಪು ಚುಕ್ಕೆಯನ್ನು ನಿಮ್ಮಿಂದ ಇಡಲು ಸಾಧ್ಯವಿಲ್ಲ…. ಅವರಂತೆ ನೀವೆಂದೂ ಆಗಲು ಅಸಾಧ್ಯದ ಮಾತು… ಕೊನೆಪಕ್ಷ ಅವರ ಆದರ್ಶಗಳನ್ನದರು ಜೀವನದಲ್ಲಿ ಅಳವಡಿಸಿ ಕೊಳ್ಳಿ…ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...