Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ಸಂರಕ್ಷಣಾ ಸಮಿತಿಗೆ ಪತ್ರ ಬರೆದು ತಪ್ಪೊಪ್ಪಿಕೊಂಡಿದ್ದ ವಿಇಎಸ್ ಶಾಲೆಯು, ಪತ್ರಿಕಾಗೋಷ್ಠಿಯಲ್ಲಿ ಬೇರೆಯ ಆರೋಪಗಳನ್ನು ಮಾಡಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ತಪ್ಪೊಪ್ಪಿಕೊಂಡು ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿತ್ತು. ಆದರೆ ಇಂದು (ಸೋಮವಾರ) ರಾಮನಗರದಲ್ಲಿ ಶಾಲೆಯ ಆಡಳಿತ ಮಂಡಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಷಯಾಂತರ ಮಾಡಲು ಯತ್ನಿಸಲಾಯಿತು ಎಂದು ಆಕ್ರೋಶ ವ್ಯಕ್ತವಾಗಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು. ಬಳಿಕ ಶಾಲಾ ಮಂಡಳಿ ತಪ್ಪೊಪ್ಪಿಕೊಂಡು, ಸಂವಿಧಾನ ರಕ್ಷಣಾ ಸಮಿತಿಗೆ ಪತ್ರವನ್ನೂ ಬರೆದಿತ್ತು. ಆರು ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಆರು ಅಂಶಗಳು

1. ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ ‘72 years of Bharathiya Samvidana/Indian Constitution has it reached expiry date’ ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ.

2. ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ.

3. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ.

4. ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ.

5. ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ.

6. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ.

ಪತ್ರದಲ್ಲಿ ಹೇಳಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಶಾಲಾ ಮಂಡಳಿ, ಕ್ಷಮಾಪಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕ್ಷಮಾಪಣಾ ಪತ್ರದ ಬಗ್ಗೆಯೂ ಹೇಳಲಿಲ್ಲ ಎಂದು ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

“ರಾಮನಗರದಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಬಹಿರಂಗವಾಗಿ ಕ್ಷಮೆಯಾಚಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸಂಸ್ಥೆಯ ಅಧ್ಯಕ್ಷರಾದ ಅರ್ಜುನ್‌, ಕಾನೂನು ಸಲಹೆಗಾರರಾದ ಶಿವಮ್ಮ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಅದಕ್ಕೆ ಹೊರತಾಗಿ ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು” ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರತಿನಿಧಿ ರಾಣಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಸಂಸ್ಥೆಯ ವಿರುದ್ಧ ಎರಡು ವರ್ಷಗಳಿಂದ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ವಿಷಯಾಂತರ ಮಾಡಿದ್ದಾರೆ. ‘ಸಂವಿಧಾನಕ್ಕೆ 72 ವರ್ಷಗಳು’ ಎಂದು ವಿಷಯ ಕೊಡಲಾಗಿತ್ತೇ ಹೊರತು, ‘ಸಂವಿಧಾನದ ಅವಧಿ ಮುಗಿದಿದೆ’ ಎಂದು ಕೊಡಲಾಗಿರಲಿಲ್ಲ. ಆದರೆ ವಿಷಯವನ್ನು ತಿರುಚಿ ಸಂಸ್ಥೆಯ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ದೂರಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲಾಗಿದೆ. ಸಂವಿಧಾನ ರಕ್ಷಣಾ ಐಕ್ಯತಾ ಸಮಿತಿಗೆ, ಅಧಿಕಾರಿಗಳಿಗೆ ಸಂಸ್ಥೆಯ ಲೆಟರ್‌ ಹೆಡ್‌ನಲ್ಲಿ ಲಿಖಿತವಾಗಿ ನೀಡಲಾಗಿರುವ ವಿಷಯವನ್ನು ವಿಇಎಸ್‌ ಸಂಸ್ಥೆ ಮರೆಮಾಚಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಈ ಕುರಿತು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಬದಲಾದ ನಿಲುವನ್ನು ಸ್ಥಳದಲ್ಲೇ ಖಂಡಿಸಿದ್ದೇವೆ” ಎಂದು ರಾಣಿಯವರು ಮಾಹಿತಿ ನೀಡಿದರು.

(ಶಾಲೆಯ ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.)


ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಷ್ಟಕ್ಕೆ ಸಿಲುಕಿದಾಗ ಮನುವಾದಿಗಳು ಸಾಮಾನ್ಯವಾಗಿ ಏನು ಮಾಡುತ್ತಾರೋ ಇಲ್ಲೂಸಹ ಅದನ್ನೇ ಮಾಡಿದ್ದಾರೆ. ಈ ಪತ್ರಿಕಾ ಗೋಷ್ಠಿಯಲ್ಲಿ ಮನುವಾದಿಗಳನ್ನು ಸಮರ್ತಿಸಿಕೊಂಡಿರುವುದು, ಸ್ವತಃ ದಲಿತರೂ, ಅಂಬೇಡ್ಕರ್ ಅಬಿಮಾನಿಗಳೂ ಮತ್ತು ಸಮರ್ಥ ವಕೀಲರು ಆದ ನ್ಯಾಯವಾದಿ ಶಿವಮ್ಮ! ಇಲ್ಲಿಯೇ ಮನುವಾದಿಗಳ ಕುತಂತ್ರ ಮತ್ತು ಅಹಿಂದ ವರ್ಗದವರ ದುರಂತ ಅಡಗಿರುವುದು.

  2. ಲೆ ಮನುವಾದಿ ಕೋಮುವಾದಿಗಳ… ಅಂಬೇಡ್ಕರ್ ಅನ್ನುವ ಮಹಾನ್ ಚೇತನ ಎಂದೆಂದೂ ಗತಿಸಿ ಹೋಗದಂತಹ ಸೂರ್ಯ… ಅವರ ಹೆಸರಿಗೆ ಮತ್ತು ಅವರ ಗೌರವಕ್ಕೆ ಒಂದು ಸಣ್ಣ ಕಪ್ಪು ಚುಕ್ಕೆಯನ್ನು ನಿಮ್ಮಿಂದ ಇಡಲು ಸಾಧ್ಯವಿಲ್ಲ…. ಅವರಂತೆ ನೀವೆಂದೂ ಆಗಲು ಅಸಾಧ್ಯದ ಮಾತು… ಕೊನೆಪಕ್ಷ ಅವರ ಆದರ್ಶಗಳನ್ನದರು ಜೀವನದಲ್ಲಿ ಅಳವಡಿಸಿ ಕೊಳ್ಳಿ…ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...