Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...