Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...