Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...