Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...