Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...