Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....