Homeಮುಖಪುಟಕಳೆದ 11 ವರ್ಷಗಳಿಂದ ದೇಶದಲ್ಲಿ 'ಅಘೋಷಿತ ತುರ್ತು ಪರಿಸ್ಥಿತಿ'ಯಿದೆ: ಕಾಂಗ್ರೆಸ್

ಕಳೆದ 11 ವರ್ಷಗಳಿಂದ ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯಿದೆ: ಕಾಂಗ್ರೆಸ್

- Advertisement -
- Advertisement -

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಕೇಂದ್ರ ಸರ್ಕಾರ ‘ಸಂವಿಧಾನ ಹತ್ಯೆ ದಿನ’ ಆಚರಿಸುತ್ತಿದೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, “ದೇಶದಲ್ಲಿ ಕಳೆದ 11 ವರ್ಷಗಳಿಂದ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಭಾರತದ ಪ್ರಜಾಪ್ರಭುತ್ವದ ಮೇಲೆ ಆಡಳಿತವು (ಕೇಂದ್ರ ಸರಕಾರ) ನಿರಂತರ ಮತ್ತು ಅಪಾಯಕಾರಿ ದಾಳಿಯನ್ನು ನಡೆಸುತ್ತಿದೆ” ಎಂದು ಹೇಳಿದೆ.

ಪ್ರಸ್ತುತ ಆಡಳಿತದಲ್ಲಿ ನಾಗರಿಕ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗುತ್ತಿದೆ ಮತ್ತು ದ್ವೇಷ ಭಾಷಣವು ಅತಿರೇಕವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿಕೆ ನೀಡಿ, “ಸರ್ಕಾರದ ಟೀಕಾಕಾರರನ್ನು ನಿರಂತರವಾಗಿ ರಾಕ್ಷಸೀಕರಿಸಲಾಗುತ್ತಿದೆ. ಅಧಿಕಾರದಲ್ಲಿರುವವರು ದ್ವೇಷ ಮತ್ತು ಧರ್ಮಾಂಧತೆಯನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ. ಪ್ರತಿಭಟನಾ ನಿರತ ರೈತರನ್ನು ‘ಖಲಿಸ್ತಾನಿಗಳು’ ಎಂದು ಬ್ರಾಂಡ್ ಮಾಡಲಾಗಿದೆ. ಜಾತಿ ಜನಗಣತಿಯ ಬೆಂಬಲಿಗರನ್ನು ‘ನಗರ ನಕ್ಸಲರು’ ಎನ್ನಲಾಗಿದೆ ಎಂದಿದ್ದಾರೆ.

“ಮಹಾತ್ಮ ಗಾಂಧಿಯ ಹಂತಕರನ್ನು ವೈಭವೀಕರಿಸುವ ವ್ಯಕ್ತಿಗಳನ್ನು ಕೊಂಡಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳು ಭಯದಲ್ಲಿ ಬದುಕುತ್ತಿವೆ. ದುರ್ಬಲ ವರ್ಗದವರು, ವಿಶೇಷವಾಗಿ ದಲಿತರು ಅಸಮಾನತೆಗೆ  ಗುರಿಯಾಗುತ್ತಿದ್ದಾರೆ. ಆಘಾತಕಾರಿಯಾಗಿ, ದ್ವೇಷದ ಹೇಳಿಕೆಗಳನ್ನು ನೀಡುವ ಸಚಿವರಿಗೆ ಬಡ್ತಿ ನೀಡಲಾಗುತ್ತಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಕಳೆದ ಹನ್ನೊಂದು ವರ್ಷಗಳು ಮತ್ತು ಮೂವತ್ತು ದಿನಗಳಲ್ಲಿ, ಭಾರತೀಯ ಪ್ರಜಾಪ್ರಭುತ್ವದ ಮೇಲಿನ ವ್ಯವಸ್ಥಿತ ಮತ್ತು ಅಪಾಯಕಾರಿ ದಾಳಿಯು ಐದು ಪಟ್ಟು ಹೆಚ್ಚಾಗಿದೆ. ಇದನ್ನು ಅಘೋಷಿತ ತುರ್ತು ಪರಿಸ್ಥಿತಿ@11 ಎಂದು ಉತ್ತಮವಾಗಿ ವಿವರಿಸಬಹುದು” ಎಂದು ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಸಂವಿಧಾನದ ಮೇಲಿನ ದಾಳಿಗಳು, ತೆರಿಗೆ ಭಯೋತ್ಪಾದನೆ, ವ್ಯವಹಾರಗಳು ಮತ್ತು ಸಂಸ್ಥೆಗಳ ಮೇಲಿನ ಬೆದರಿಕೆ, ಮಾಧ್ಯಮಗಳ ಮೇಲಿನ ನಿಯಂತ್ರಣ ಮತ್ತು ತನಿಖಾ ಸಂಸ್ಥೆಗಳ ದುರುಪಯೋಗ” ವನ್ನು ಉಲ್ಲೇಖಿಸಿ “ಅಘೋಷಿತ ತುರ್ತು ಪರಿಸ್ಥಿತಿ” ಜಾರಿಯಲ್ಲಿದೆ ಎಂದು ಜೈರಾಮ್ ರಮೇಶ್ ಹೇಳಿಕೆ ನೀಡಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಬದಲಾಯಿಸಲು ಮತ್ತು ಬಿ.ಆರ್ ಅಂಬೇಡ್ಕರ್ ಅವರ ಪರಂಪರೆಯನ್ನು ದುರ್ಬಲಗೊಳಿಸಲು “400 ಪಾರ್” ಜನಾದೇಶವನ್ನು ಬಯಸಿದ್ದರು. ಆದರೆ, ಅವರ ಬಯಕೆಯನ್ನು ಭಾರತದ ಜನರು ನಿರ್ಣಾಯಕವಾಗಿ ತಿರಸ್ಕರಿಸಿದರು. ಜನರು ಪ್ರಸ್ತುತ ಅಸ್ತಿತ್ವದಲ್ಲಿರುವ ಸಂವಿಧಾನ ಮತ್ತು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ನ್ಯಾಯದ ಮೌಲ್ಯಗಳನ್ನು ರಕ್ಷಿಸಲು ಮತ್ತು ಬಲಪಡಿಸಲು ಮತ ಚಲಾಯಿಸಿದರು” ಎಂದು ಹೇಳಿದ್ದಾರೆ.

ಸಾರ್ವಜನಿಕ ಸಮಸ್ಯೆಗಳನ್ನು ಎತ್ತಿದ್ದಕ್ಕಾಗಿ ಸಂಸದರನ್ನು ಅಮಾನತುಗೊಳಿಸುವ ಮೂಲಕ, ಸಂಸದೀಯ ಸಮಿತಿಗಳನ್ನು ಬೈಪಾಸ್ ಮಾಡುವ ಮೂಲಕ ಮತ್ತು ಚರ್ಚೆಯಿಲ್ಲದೆ ಪ್ರಮುಖ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಮೋದಿ ಸರ್ಕಾರ ಸಂಸತ್ತನ್ನು ದುರ್ಬಲಗೊಳಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳು ಸವೆದು ಹೋಗುತ್ತಿವೆ ಎಂದು ಆರೋಪಿಸಿರುವ ಜೈರಾಮ್ ರಮೇಶ್, “ಸಿಎಜಿ ಅಪ್ರಸ್ತುತವಾಗಿದೆ, ಚುನಾವಣಾ ಆಯೋಗದ ಸಮಗ್ರತೆಗೆ ಧಕ್ಕೆಯಾಗಿದೆ ಮತ್ತು ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಚುನಾವಣಾ ವೇಳಾಪಟ್ಟಿಯನ್ನು ರೂಪಿಸಲಾಗಿದೆ” ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನೇತೃತ್ವದ ರಾಜ್ಯ ಸರ್ಕಾರಗಳನ್ನು ಉರುಳಿಸಲು ಹಣಬಲವನ್ನು ಬಳಸಿಕೊಳ್ಳಲಾಗಿದೆ. ರಾಜ್ಯದ ಮಸೂದೆಗಳನ್ನು ತಡೆಯಲು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹಸ್ತಕ್ಷೇಪ ಮಾಡಲು ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ರಾಜ್ಯಗಳಿಗೆ ನ್ಯಾಯಯುತ ಆದಾಯದ ಪಾಲನ್ನು ನಿರಾಕರಿಸಲು ಸೆಸ್‌ಗಳನ್ನು ಅತಿಯಾಗಿ ಬಳಸಲಾಗಿದೆ ಎಂದು ರಮೇಶ್ ಆರೋಪಿಸಿದ್ದಾರೆ.

ಮಾಧ್ಯಮ ಸಂಸ್ಥೆಗಳು ದೊಡ್ಡ ಮಟ್ಟದ ಒತ್ತಡಕ್ಕೆ ಒಳಗಾಗಿವೆ. ಪ್ರಮುಖ ಪತ್ರಕರ್ತರು ಬಂಧನಗಳು ಮತ್ತು ದಾಳಿಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಮಾಧ್ಯಮಗಳು ಪ್ರಚಾರ ಸಾಧನಗಳಾಗಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯನ್ನು ಪೊಳ್ಳಾಗಿಸಲಾಗಿಸಲಾಗಿದೆ. ಇಡಿ, ಸಿಬಿಐ ಮತ್ತು ಐಟಿ ಇಲಾಖೆಯಂತಹ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಗುರಿಯಾಗಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 8,000 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

“ಬಿಜೆಪಿಗೆ ಸೇರುವವರು ಇಡಿ, ಸಿಬಿಐ ಪ್ರಕರಣಗಳಿಂದ ಮುಕ್ತರು” ಎಂದು ಅವರು ಹೇಳಿದ್ದಾರೆ.

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. What Jairam Ramesh has revealed is 100 percent true
    Since 2014 there is an Undeclared Emergency is attributing
    There is no doubt in Democracy has been destroyed in a systamatic manner

  2. If anyone opened their lips against the wrong doing they will becomes anti Indian, they are going to punish in one or the other way by the Ruling Government
    This is why the Publics voted to the wrong persons
    This is to be changed immediately

LEAVE A REPLY

Please enter your comment!
Please enter your name here

- Advertisment -

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...