Homeಮುಖಪುಟಕಳೆದ 11 ವರ್ಷಗಳಿಂದ ದೇಶದಲ್ಲಿ 'ಅಘೋಷಿತ ತುರ್ತು ಪರಿಸ್ಥಿತಿ'ಯಿದೆ: ಕಾಂಗ್ರೆಸ್

ಕಳೆದ 11 ವರ್ಷಗಳಿಂದ ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯಿದೆ: ಕಾಂಗ್ರೆಸ್

- Advertisement -
- Advertisement -

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಕೇಂದ್ರ ಸರ್ಕಾರ ‘ಸಂವಿಧಾನ ಹತ್ಯೆ ದಿನ’ ಆಚರಿಸುತ್ತಿದೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, “ದೇಶದಲ್ಲಿ ಕಳೆದ 11 ವರ್ಷಗಳಿಂದ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಭಾರತದ ಪ್ರಜಾಪ್ರಭುತ್ವದ ಮೇಲೆ ಆಡಳಿತವು (ಕೇಂದ್ರ ಸರಕಾರ) ನಿರಂತರ ಮತ್ತು ಅಪಾಯಕಾರಿ ದಾಳಿಯನ್ನು ನಡೆಸುತ್ತಿದೆ” ಎಂದು ಹೇಳಿದೆ.

ಪ್ರಸ್ತುತ ಆಡಳಿತದಲ್ಲಿ ನಾಗರಿಕ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗುತ್ತಿದೆ ಮತ್ತು ದ್ವೇಷ ಭಾಷಣವು ಅತಿರೇಕವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿಕೆ ನೀಡಿ, “ಸರ್ಕಾರದ ಟೀಕಾಕಾರರನ್ನು ನಿರಂತರವಾಗಿ ರಾಕ್ಷಸೀಕರಿಸಲಾಗುತ್ತಿದೆ. ಅಧಿಕಾರದಲ್ಲಿರುವವರು ದ್ವೇಷ ಮತ್ತು ಧರ್ಮಾಂಧತೆಯನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ. ಪ್ರತಿಭಟನಾ ನಿರತ ರೈತರನ್ನು ‘ಖಲಿಸ್ತಾನಿಗಳು’ ಎಂದು ಬ್ರಾಂಡ್ ಮಾಡಲಾಗಿದೆ. ಜಾತಿ ಜನಗಣತಿಯ ಬೆಂಬಲಿಗರನ್ನು ‘ನಗರ ನಕ್ಸಲರು’ ಎನ್ನಲಾಗಿದೆ ಎಂದಿದ್ದಾರೆ.

“ಮಹಾತ್ಮ ಗಾಂಧಿಯ ಹಂತಕರನ್ನು ವೈಭವೀಕರಿಸುವ ವ್ಯಕ್ತಿಗಳನ್ನು ಕೊಂಡಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳು ಭಯದಲ್ಲಿ ಬದುಕುತ್ತಿವೆ. ದುರ್ಬಲ ವರ್ಗದವರು, ವಿಶೇಷವಾಗಿ ದಲಿತರು ಅಸಮಾನತೆಗೆ  ಗುರಿಯಾಗುತ್ತಿದ್ದಾರೆ. ಆಘಾತಕಾರಿಯಾಗಿ, ದ್ವೇಷದ ಹೇಳಿಕೆಗಳನ್ನು ನೀಡುವ ಸಚಿವರಿಗೆ ಬಡ್ತಿ ನೀಡಲಾಗುತ್ತಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಕಳೆದ ಹನ್ನೊಂದು ವರ್ಷಗಳು ಮತ್ತು ಮೂವತ್ತು ದಿನಗಳಲ್ಲಿ, ಭಾರತೀಯ ಪ್ರಜಾಪ್ರಭುತ್ವದ ಮೇಲಿನ ವ್ಯವಸ್ಥಿತ ಮತ್ತು ಅಪಾಯಕಾರಿ ದಾಳಿಯು ಐದು ಪಟ್ಟು ಹೆಚ್ಚಾಗಿದೆ. ಇದನ್ನು ಅಘೋಷಿತ ತುರ್ತು ಪರಿಸ್ಥಿತಿ@11 ಎಂದು ಉತ್ತಮವಾಗಿ ವಿವರಿಸಬಹುದು” ಎಂದು ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಸಂವಿಧಾನದ ಮೇಲಿನ ದಾಳಿಗಳು, ತೆರಿಗೆ ಭಯೋತ್ಪಾದನೆ, ವ್ಯವಹಾರಗಳು ಮತ್ತು ಸಂಸ್ಥೆಗಳ ಮೇಲಿನ ಬೆದರಿಕೆ, ಮಾಧ್ಯಮಗಳ ಮೇಲಿನ ನಿಯಂತ್ರಣ ಮತ್ತು ತನಿಖಾ ಸಂಸ್ಥೆಗಳ ದುರುಪಯೋಗ” ವನ್ನು ಉಲ್ಲೇಖಿಸಿ “ಅಘೋಷಿತ ತುರ್ತು ಪರಿಸ್ಥಿತಿ” ಜಾರಿಯಲ್ಲಿದೆ ಎಂದು ಜೈರಾಮ್ ರಮೇಶ್ ಹೇಳಿಕೆ ನೀಡಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಬದಲಾಯಿಸಲು ಮತ್ತು ಬಿ.ಆರ್ ಅಂಬೇಡ್ಕರ್ ಅವರ ಪರಂಪರೆಯನ್ನು ದುರ್ಬಲಗೊಳಿಸಲು “400 ಪಾರ್” ಜನಾದೇಶವನ್ನು ಬಯಸಿದ್ದರು. ಆದರೆ, ಅವರ ಬಯಕೆಯನ್ನು ಭಾರತದ ಜನರು ನಿರ್ಣಾಯಕವಾಗಿ ತಿರಸ್ಕರಿಸಿದರು. ಜನರು ಪ್ರಸ್ತುತ ಅಸ್ತಿತ್ವದಲ್ಲಿರುವ ಸಂವಿಧಾನ ಮತ್ತು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ನ್ಯಾಯದ ಮೌಲ್ಯಗಳನ್ನು ರಕ್ಷಿಸಲು ಮತ್ತು ಬಲಪಡಿಸಲು ಮತ ಚಲಾಯಿಸಿದರು” ಎಂದು ಹೇಳಿದ್ದಾರೆ.

ಸಾರ್ವಜನಿಕ ಸಮಸ್ಯೆಗಳನ್ನು ಎತ್ತಿದ್ದಕ್ಕಾಗಿ ಸಂಸದರನ್ನು ಅಮಾನತುಗೊಳಿಸುವ ಮೂಲಕ, ಸಂಸದೀಯ ಸಮಿತಿಗಳನ್ನು ಬೈಪಾಸ್ ಮಾಡುವ ಮೂಲಕ ಮತ್ತು ಚರ್ಚೆಯಿಲ್ಲದೆ ಪ್ರಮುಖ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಮೋದಿ ಸರ್ಕಾರ ಸಂಸತ್ತನ್ನು ದುರ್ಬಲಗೊಳಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳು ಸವೆದು ಹೋಗುತ್ತಿವೆ ಎಂದು ಆರೋಪಿಸಿರುವ ಜೈರಾಮ್ ರಮೇಶ್, “ಸಿಎಜಿ ಅಪ್ರಸ್ತುತವಾಗಿದೆ, ಚುನಾವಣಾ ಆಯೋಗದ ಸಮಗ್ರತೆಗೆ ಧಕ್ಕೆಯಾಗಿದೆ ಮತ್ತು ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಚುನಾವಣಾ ವೇಳಾಪಟ್ಟಿಯನ್ನು ರೂಪಿಸಲಾಗಿದೆ” ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನೇತೃತ್ವದ ರಾಜ್ಯ ಸರ್ಕಾರಗಳನ್ನು ಉರುಳಿಸಲು ಹಣಬಲವನ್ನು ಬಳಸಿಕೊಳ್ಳಲಾಗಿದೆ. ರಾಜ್ಯದ ಮಸೂದೆಗಳನ್ನು ತಡೆಯಲು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹಸ್ತಕ್ಷೇಪ ಮಾಡಲು ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ರಾಜ್ಯಗಳಿಗೆ ನ್ಯಾಯಯುತ ಆದಾಯದ ಪಾಲನ್ನು ನಿರಾಕರಿಸಲು ಸೆಸ್‌ಗಳನ್ನು ಅತಿಯಾಗಿ ಬಳಸಲಾಗಿದೆ ಎಂದು ರಮೇಶ್ ಆರೋಪಿಸಿದ್ದಾರೆ.

ಮಾಧ್ಯಮ ಸಂಸ್ಥೆಗಳು ದೊಡ್ಡ ಮಟ್ಟದ ಒತ್ತಡಕ್ಕೆ ಒಳಗಾಗಿವೆ. ಪ್ರಮುಖ ಪತ್ರಕರ್ತರು ಬಂಧನಗಳು ಮತ್ತು ದಾಳಿಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಮಾಧ್ಯಮಗಳು ಪ್ರಚಾರ ಸಾಧನಗಳಾಗಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯನ್ನು ಪೊಳ್ಳಾಗಿಸಲಾಗಿಸಲಾಗಿದೆ. ಇಡಿ, ಸಿಬಿಐ ಮತ್ತು ಐಟಿ ಇಲಾಖೆಯಂತಹ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಗುರಿಯಾಗಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 8,000 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

“ಬಿಜೆಪಿಗೆ ಸೇರುವವರು ಇಡಿ, ಸಿಬಿಐ ಪ್ರಕರಣಗಳಿಂದ ಮುಕ್ತರು” ಎಂದು ಅವರು ಹೇಳಿದ್ದಾರೆ.

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. What Jairam Ramesh has revealed is 100 percent true
    Since 2014 there is an Undeclared Emergency is attributing
    There is no doubt in Democracy has been destroyed in a systamatic manner

  2. If anyone opened their lips against the wrong doing they will becomes anti Indian, they are going to punish in one or the other way by the Ruling Government
    This is why the Publics voted to the wrong persons
    This is to be changed immediately

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...