Homeಕರ್ನಾಟಕಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

"ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಪರಿಹಾರ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ?"

- Advertisement -
- Advertisement -

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರಿಗೆ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ?” ಎಂದು ಕೇಳಿದ್ದಾರೆ.

ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು, ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ. ಪೊಲೀಸರ ತನಿಖಾ ವರದಿಯೂ ಬಂದಿಲ್ಲ. ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದು ಕಟುವಾಗಿ ಟೀಕಿಸಿದ್ದಾರೆ.

ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ? ಎಂದು ಕೇಳಿದ್ದಾರೆ.

ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ ‘ವಿವೇಚನೆ’ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದ್ದಾರೆ.

ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಕೇಳಿದ್ದಾರೆ.


ಇದನ್ನೂ ಓದಿರಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...