Homeಕರ್ನಾಟಕಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

"ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಪರಿಹಾರ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ?"

- Advertisement -
- Advertisement -

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರಿಗೆ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ?” ಎಂದು ಕೇಳಿದ್ದಾರೆ.

ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು, ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ. ಪೊಲೀಸರ ತನಿಖಾ ವರದಿಯೂ ಬಂದಿಲ್ಲ. ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದು ಕಟುವಾಗಿ ಟೀಕಿಸಿದ್ದಾರೆ.

ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ? ಎಂದು ಕೇಳಿದ್ದಾರೆ.

ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ ‘ವಿವೇಚನೆ’ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದ್ದಾರೆ.

ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಕೇಳಿದ್ದಾರೆ.


ಇದನ್ನೂ ಓದಿರಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....