Homeಅಂಕಣಗಳುಗೌರಿ ಕಾರ್ನರ್; ’ಅಂಡರ್ ಗ್ರೌಂಡ್’: ತಲ್ಲಣಗೊಳಿಸುವ ಚಿತ್ರವೊಂದರ ಕತೆ..

ಗೌರಿ ಕಾರ್ನರ್; ’ಅಂಡರ್ ಗ್ರೌಂಡ್’: ತಲ್ಲಣಗೊಳಿಸುವ ಚಿತ್ರವೊಂದರ ಕತೆ..

- Advertisement -
- Advertisement -

ಅವರಿಬ್ಬರೂ ಆತ್ಮೀಯ ಸ್ನೇಹಿತರು. ಕದಿಯುವುದರಲ್ಲಿ, ಮಜಾ ಉಡಾಯಿಸುವುದರಲ್ಲಿ, ಕುಡಿದು ಕುಪ್ಪಳಿಸುವುದರಲ್ಲಿ ನಿಷ್ಣಾತರು. ಒಬ್ಬ ಮಾರ್ಕೋ, ಮಗದೊಬ್ಬ ಬ್ಲಾಕಿ. ಜೋಕರ್‌ಗಳ ತರಹ ವರ್ತಿಸುವ ಇವರಿಬ್ಬರೂ ಒಂದು ರೀತಿಯಲ್ಲಿ ಬ್ಲ್ಯಾಕ್ ಕಾಮಿಡಿಯೊಂದರ ಹೀರೋಗಳು. ಅವರಿರುವ ಯುಗೋಸ್ಲಾವಿಯಾ ದೇಶದಲ್ಲಿ ಆಗ ತಾನೇ ಕಮ್ಯುನಿಸ್ಟರು ಸಂಘಟಿತರಾಗುತ್ತಿದ್ದಾರೆ. ಆ ಚಳವಳಿಯನ್ನು ಸೇರಿಕೊಳ್ಳುವ ಮಾರ್ಕೋ ತನ್ನೊಂದಿಗೆ ಬ್ಲಾಕಿಯನ್ನು ಕರೆತರುತ್ತಾನೆ. ಅದೇ ಸಮಯಕ್ಕೆ ಎರಡನೇ ಮಹಾಯುದ್ಧ ಪ್ರಾರಂಭವಾಗಿ ಹಿಟ್ಲರ್‌ನ ಸೈನ್ಯ ಯುಗೋಸ್ಲಾವಿಯಾ ದೇಶದ ಮೇಲೆ ದಾಳಿ ಇಡುತ್ತದೆ. ಹೇಗಾದರೂ ಸರಿಯೇ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟರನ್ನು’ ಸೋಲಿಸಬೇಕು ಎಂದು ತೀರ್ಮಾನಿಸುವ ಮಾರ್ಕೋ ಮತ್ತು ಬ್ಲಾಕಿ ತಮ್ಮ ಚಾಣಾಕ್ಷತೆಯನ್ನು ಉಪಯೋಗಿಸಿ ಶಸ್ತ್ರಾಸ್ತ್ರಗಳನ್ನು ಕದ್ದು ಕಮ್ಯುನಿಸ್ಟರಿಗೆ ಸರಬರಾಜು ಮಾಡುವುದರಲ್ಲಿ ನಿರತರಾಗುತ್ತಾರೆ. ಯುದ್ಧದಲ್ಲಿ ಮಾರ್ಕೋ ಸಹೋದರನ ಮೃಗಾಲಯ ನಾಶಗೊಂಡರೆ ಬ್ಲಾಕಿಯ ಪ್ರೇಯಸಿ ಹಿಟ್ಲರ್‌ನ ಸೈನ್ಯಾಧಿಕಾರಿಯೊಬ್ಬನ ವಶಕ್ಕೆ ಬೀಳುವ ಅಂಚಿನಲ್ಲಿದ್ದಾಳೆ. ಆನಂತರ ಹಿಟ್ಲರ್‌ನ ಸೈನ್ಯ ನಾಶಮಾಡದೇ ಇದ್ದುದ್ದನ್ನು ಮೈತ್ರಿಕೂಟ ನೆಲಸಮ ಮಾಡುತ್ತದೆ.

ಇಂತಹ ಪರಿಸ್ಥಿತಿಯಲ್ಲಿ ಬದುಕುಳಿಯಲು ಬ್ಲಾಕಿ, ಆತನ ಹೆಂಡತಿಗೆ ಹುಟ್ಟಿದ ಹಸಿಗೂಸು, ಮಾರ್ಕೋನ ಸಹೋದರ ಎಲ್ಲರೂ ಮನೆಯೊಂದರ ನೆಲಮಾಳಿಗೆಯಲ್ಲಿ ಅವಿತುಕೊಳ್ಳುತ್ತಾರೆ. ಬ್ಲಾಕಿಯ ಪ್ರೇಯಸಿಯ ಮೇಲೆ ಕಣ್ಣಿಟ್ಟಿರುವ ಮಾರ್ಕೋ ಹೊರಗಡೆ ಬಂದು ಒಂದೇ ಏಟಿಗೆ ಎಲ್ಲವನ್ನೂ ತನ್ನದಾಗಿಸಿಕೊಳ್ಳುವ ಸಂಚನ್ನು ರೂಪಿಸುತ್ತಾನೆ. ಬ್ಲಾಕಿಯ ಪ್ರೇಯಸಿಯನ್ನು ವರಿಸುತ್ತಲೇ, ಬ್ಲಾಕಿ ನೆಲಮಾಳಿಗೆಯಲ್ಲೇ ಶಾಶ್ವತವಾಗಿ ಉಳಿಯುವಂತೆ ಮಾಡುತ್ತಾನೆ. ಹೊರ ಪ್ರಪಂಚದಲ್ಲಿ ಏನಾಗುತ್ತಿದೆ ಎಂದು ಅರಿಯದ ಬ್ಲಾಕಿ ಮತ್ತು ಇತರರು ಸೋತು ಸುಣ್ಣವಾಗಿರುವ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್’ ಜರ್ಮನಿಯ ವಿರುದ್ಧ ಇನ್ನೂ ಯುದ್ಧ ನಡೆಯುತ್ತಿದೆ ಎಂಬ ಭ್ರಮೆಯಲ್ಲೇ 20 ವರ್ಷಗಳ ಕಾಲ ಜೀವಿಸುತ್ತಾರೆ. ಆದರೆ ವಾಸ್ತವವಾಗಿ ಬ್ಲಾಕಿಯ ಪ್ರೇಯಸಿಯನ್ನು ಮದುವೆಯಾಗಿರುವ ಮಾರ್ಕೋ, ಅಧಿಕಾರಕ್ಕೆ ಬಂದಿರುವ ಟೀಟೋನ ಸಂಪುಟದಲ್ಲಿ ಸಚಿವನಾಗಿರುತ್ತಾನೆ; ಬ್ಲಾಕಿ ತಂಡ ನೆಲಮಾಳಿಗೆಯಲ್ಲಿ ತಯಾರಿಸುತ್ತಿರುವ ಆಯುಧಗಳನ್ನು ಕಾಳಸಂತೆಯಲ್ಲಿ ಮಾರಿ ಆಗರ್ಭ ಶ್ರೀಮಂತನಾಗಿರುತ್ತಾನೆ.

PC : FilmAffinity

ಕೊನೆಗೂ ಒಂದು ದಿನ ಬ್ಲಾಕಿ ತನ್ನ ಮಗನೊಂದಿಗೆ ನೆಲಮಾಳಿಗೆಯಿಂದ ಹೊರಬಂದು ನೇರವಾಗಿ ಯುದ್ಧದಲ್ಲಿ ತೊಡಗುವುದಾಗಿ ನಿರ್ಧರಿಸುತ್ತಾನೆ. ಈಗ 20 ವರ್ಷದ ಯುವಕನಾಗಿರುವ ಬ್ಲಾಕಿಯ ಮಗ ಇದೇ ಮೊದಲನೆ ಬಾರಿ ಹೊರ ಪ್ರಪಂಚವನ್ನು ನೋಡುತ್ತಿದ್ದಾನೆ. ರಾತ್ರಿಯ ಆಕಾಶದಲ್ಲಿ ಚಂದಿರನನ್ನು ಕಂಡು “ಅಪ್ಪ ನೋಡು ಸೂರ್ಯ ಎಂದು ಬೆರಗಾಗುತ್ತಾನೆ. ಮಾರನೆ ದಿನ ಸೂರ್ಯ ಉದಯವಾಗುವುದನ್ನು ಕಂಡು “ಈ ಜಗತ್ತು ಎಷ್ಟು ಸುಂದರ!” ಎಂದು ಉದ್ಗಾರವೆತ್ತುತ್ತಾನೆ. ಆದರೆ ತಂದೆ-ಮಗನನ್ನು ದಂಗೆಕೋರರೆಂದು ಭಾವಿಸಿ ಸರ್ಕಾರದ ಸೈನಿಕರೇ ಅವರನ್ನು ಕೊಲ್ಲಲೆತ್ನಿಸುತ್ತಾರೆ. ಈ ಘಟನೆಯಲ್ಲಿ ಬ್ಲಾಕಿಯ ಮಗ ನೀರುಪಾಲಾಗಿ ಸಾವನ್ನಪ್ಪುತ್ತಾನೆ.

ಬ್ಲಾಕಿ ಹೊರಬಂದ ನಂತರ ತನಗೆ ಇನ್ನು ಯಾವುದೇ ಮಾರ್ಗವಿಲ್ಲ ಎಂದು ಭಾವಿಸಿ ಮಾರ್ಕೋ ಭೂಗತನಾಗುತ್ತಾನೆ. ಇದೆಲ್ಲದರ ಮಧ್ಯೆ ಮಾರ್ಕೋನ ತಮ್ಮ ನೆಲಮಾಳಿಗೆಯಿಂದ ತಪ್ಪಿಸಿಕೊಂಡಿರುವ ತನ್ನ ಕೋತಿಯನ್ನು ಹುಡುಕುತ್ತಾ ಅದೇ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್’ರ ದೇಶವಾದ ಜರ್ಮನಿಗೆ ಬರುತ್ತಾನೆ. ಆದರೆ ಯುದ್ಧ ಮುಗಿದು ಅದೆಷ್ಟೋ ಕಾಲವಾಗಿ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ತನ್ನ ಅಣ್ಣ ಮಾರ್ಕೋನೇ ತನ್ನನ್ನು ಮತ್ತು ಇತರರನ್ನು ನೆಲಮಾಳಿಗೆಯಲ್ಲಿ ಬಂಧಿಸಿಟ್ಟಿದ್ದ ಎಂದು ಅವನಿಗೆ ಗೊತ್ತಾಗಿ ದುಃಖಿಸುತ್ತಾನೆ. ಆತ ಯುಗೋಸ್ಲಾವಿಯಾಗೆ ಹಿಂದಿರುಗಿದಾಗ, ಅಲ್ಲಿ ಆಂತರಿಕ ಯುದ್ಧ ಪ್ರಾರಂಭವಾಗಿದೆ. ಮಾರ್ಕೋ ಭೂಗತನಾದ ನಂತರ ಸರ್ವಾಧಿಕಾರಿ ಟೀಟೋ ಸತ್ತು ಹೋಗಿದ್ದಾನೆ. ಯುಗೋಸ್ಲಾವಿಯಾ ದೇಶವೇ ಛಿದ್ರಗೊಂಡು, ಕ್ರೋಏಶಿಯನ್ನರು, ಬೋಸ್ನಿಯನ್ನರು ಮತ್ತು ಸರ್ಬಿಯನ್ನರು ಪರಸ್ಪರ ಯುದ್ಧದಲ್ಲಿ ಮುಳುಗಿದ್ದಾರೆ. ಇಂತಹ ಸಂದರ್ಭದಲ್ಲೂ ಮಾರ್ಕೋ ತನ್ನ ಶಸ್ತ್ರಾಸ್ತ್ರಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದಾನೆ. ಗುಂಡೇಟಿನಿಂದ ಕುಂಟನಾಗಿರುವ ಮಾರ್ಕೋ ಒಮ್ಮೆ ತನ್ನ ವೀಲ್‌ಚೇರ್‌ನಲ್ಲಿ ಹೋಗುತ್ತಿರುವುದನ್ನು ನೋಡುವ ಅವನ ಸಹೋದರ ಬಂದು ಮಾರ್ಕೋನನ್ನು ಇನ್ನಿಲ್ಲದಂತೆ ಹೊಡೆಯುತ್ತಾನೆ. ಆದರೂ ಮಾರ್ಕೋ ತನಗೆ ಏನೂ ಆಗಿಲ್ಲವೆಂಬಂತೆ ಕೂತಿರುವುದನ್ನು ಕಂಡು ರೋಸಿ ಹೋಗುವ ಸಹೋದರ ಹತ್ತಿರದಲ್ಲಿರುವ ಚರ್ಚ್ ಒಂದರಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪುತ್ತಾನೆ.

ಇದೇ ಹೊತ್ತಿಗೆ ಬ್ಲಾಕಿ ಯುದ್ಧದಲ್ಲಿ ಹೋರಾಡುತ್ತಿರುವ ಪಂಗಡವೊಂದರ ನಾಯಕನಾಗಿ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್’ಗಳ ವಿರುದ್ಧ ಇನ್ನೂ ಕೆಂಡಕಾರುತ್ತಿದ್ದಾನೆ. ಮಾರ್ಕೋನನ್ನು ಹಿಡಿಯುವ ಬ್ಲಾಕಿಯ ಅಧೀನ ಅಧಿಕಾರಿಯೊಬ್ಬ “ಶಸ್ತ್ರಾಸ್ತ್ರಗಳ ಕಳ್ಳ ವ್ಯವಹಾರಿ ಮತ್ತು ಆತನ ಹೆಂಡತಿ ಸೆರೆ ಸಿಕ್ಕಿದ್ದಾರೆ, ಅವರನ್ನು ಏನು ಮಾಡಲಿ?” ಎಂದು ಕೇಳುತ್ತಾನೆ. ಮರುಚಿಂತೆ ಮಾಡದೆ “ಅವರಿಬ್ಬರನ್ನು ತಕ್ಷಣವೇ ಕೊಂದು ಹಾಕು” ಎಂದು ಬ್ಲಾಕಿ ಆದೇಶಿಸುತ್ತಾನೆ. ಅಗ್ನಿಗೆ ಬಲಿಯಾದ ಅವರಿಬ್ಬರ ಪಾಸ್‌ಪೋರ್ಟ್‌ಗಳನ್ನು ನೋಡಿದ ನಂತರವೇ ತಾನು ತನ್ನ ಸ್ನೇಹಿತ ಮತ್ತು ಮಾಜಿ ಪ್ರೇಯಸಿಯನ್ನು ಕೊಲ್ಲಿಸಿದ್ದೇನೆ ಎಂದು ಬ್ಲಾಕಿಗೆ ಗೊತ್ತಾಗುತ್ತದೆ.

ಯುದ್ಧ ಆತನಲ್ಲಿ ಭ್ರಮನಿರಸನವನ್ನುಂಟು ಮಾಡುತ್ತದೆ. ಆತ ದ್ವೇಷಿಸುತ್ತಿದ್ದ “ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್” ವೈರಿಗಳು ಬದಲಾಗುತ್ತಾ ಹೋಗುತ್ತಾರೆಯೇ ಹೊರತು ಯುದ್ಧ ಮಾತ್ರ ನಿರಂತರವಾಗಿ ಸಾಗುತ್ತದೆ ಎಂದು ಬ್ಲಾಕಿಗೆ ಗೊತ್ತಾಗುತ್ತದೆ. ತನ್ನ ದೇಶ, ಚಳವಳಿ, ಕನಸು, ಸ್ನೇಹಿತ, ಪ್ರೇಯಸಿ, ಮಗ…. ಎಲ್ಲವನ್ನು ಕಳೆದುಕೊಂಡ ಬ್ಲಾಕಿ ಮತ್ತೆ ಅದೇ ನೆಲಮಾಳಿಗೆಯಲ್ಲಿ ಸ್ವಬಂಧನವನ್ನು ಅರಸುತ್ತಾನೆ.

ಎಲ್ಲರೂ ಸತ್ತಿದ್ದಾರೆ, ಎಲ್ಲವೂ ನಾಶಗೊಂಡಿದೆ, ದೇಶ ಛಿದ್ರಗೊಂಡಿದೆ. ಹೋರಾಡಲು, ಪ್ರೀತಿಸಲು, ಆಶ್ರಯಿಸಲು, ಬೆಂಬಲಿಸಲು ಈಗ ಏನೂ ಉಳಿದಿಲ್ಲ. ಒಂದು ಸ್ತರದಲ್ಲಿ ಕಾಮಿಡಿ ರೀತಿಯಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುವ ಈ ಕತೆ ಇನ್ನೊಂದು ಸ್ತರದಲ್ಲಿ ಅಸಂಗತ ನಾಟಕದಂತೆಯೂ, ವಾಸ್ತವದ ವಿಮರ್ಶೆಯಾಗಿಯೂ ಸಾಗುತ್ತದೆ. ಕೊನೆ ದೃಶ್ಯದಲ್ಲಿ ಸತ್ತಿರುವ ಎಲ್ಲರೂ ಸಮುದ್ರದ ದಡದಲ್ಲಿ ಸೇರಿದ್ದಾರೆ. ಅಲ್ಲಿ ಸಂಗೀತ, ನೃತ್ಯದಲ್ಲಿ ಎಲ್ಲಾ ದ್ವೇಷಾಸೂಯೆಗಳನ್ನು ಮರೆತು ಸಂತೋಷದ ಅಮಲಿನಲ್ಲಿ ತೇಲಾಡುತ್ತಿದ್ದಾರೆ. ನಿಧಾನವಾಗಿ ನೆಲದಲ್ಲಿ ಬಿರುಕೊಂದು ಮೂಡಿ ಸಮುದ್ರದ ದಡವೇ ಪ್ರತ್ಯೇಕ ದ್ವೀಪವಾಗಿ ದೂರಕ್ಕೆ ಚಲಿಸಲಾರಂಭಿಸುತ್ತದೆ….. ಆಗ ಮಾರ್ಕೋನ ಸಹೋದರ ನಮ್ಮತ್ತ ದಿಟ್ಟಿಸುತ್ತಾ; “ಮುಂದೊಂದು ದಿನ ನಮ್ಮ ಮಕ್ಕಳಿಗೆ ಹೀಗೊಂದು ಕತೆ ಹೇಳಬಹುದು: ಒಂದಾನೊಂದು ಕಾಲದಲ್ಲಿ ಒಂದು ದೇಶ ಇತ್ತು…..”

ಇದು ಎಮಿರ್ ಕುಸ್ಟಿರಿಕಾ ಎಂಬಾತ ನಿರ್ದೇಶಿಸಿರುವ ’ಅಂಡರ್‌ಗ್ರೌಂಡ್’ ಸಾರಾಂಶ. ಯುಗೋಸ್ಲಾವಿಯಾ ಎಂಬ ದೇಶದ ದುರಂತವನ್ನು ಸೆರೆ ಹಿಡಿದಿರುವ ’ಅಂಡರ್‌ಗ್ರೌಂಡ್’ ಚಿತ್ರಕ್ಕೆ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಗೋಲ್ಡನ್ ಪಾಮ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ.

PC : Elle, (ಎಮಿರ್ ಕುಸ್ಟಿರಿಕಾ)

ಇಲ್ಲಿ ಯುಗೋಸ್ಲಾವಿಯಾ ಬದಲಿಗೆ ಭಾರತವನ್ನೇ ಚಿತ್ರಿಸಿಕೊಳ್ಳಿ. ಎರಡನೇ ಮಹಾಯುದ್ಧದ ನಂತರ ದೇಶದ ವಿಭಜನೆ, ಆನಂತರ ಪಾಕಿಸ್ತಾನ ಮತ್ತು ಭಾರತದ ನಡುವಿನ ನಾಲ್ಕು ಯುದ್ಧಗಳು, ಅಲ್ಲಿನ ಕ್ರೋಏಶಿಯರು, ಸರ್ಬಿಯನ್ನರು ಮತ್ತು ಬೋಸ್ನಿಯಾದವರ ನಡುವಿನ ಕಾಳಗದಂತೆ ಇಲ್ಲಿನ ಹಿಂದೂ ಮತ್ತು ಮುಸ್ಲಿಮರ ನಡುವಿನ ಕೋಮುಗಲಭೆಗಳು…. ’ಅಂಡರ್ ಗ್ರೌಂಡ್’ ಚಿತ್ರದಲ್ಲಿ ಒಂದು ಸಾಲಿದೆ. ತನ್ನ ತಮ್ಮನಿಂದ ಏಟುಗಳನ್ನು ತಿನ್ನುತ್ತಿರುವ ಮಾರ್ಕೋ ಹೇಳುತ್ತಾನೆ: “ಸಹೋದರರು ಒಬ್ಬರನ್ನೊಬ್ಬರು ಸಾಯಿಸುವವರೆಗೂ ಯಾವ ಯುದ್ಧವೂ ಸಂಪೂರ್ಣವಾದ ಯುದ್ಧವಾಗುವುದಿಲ್ಲ. ಇದು ಇವತ್ತಿನ ಭಾರತಕ್ಕೂ ಅನ್ವಯಿಸುತ್ತದಲ್ಲವೇ?

ಅಂದಹಾಗೆ, ಛಿದ್ರಗೊಂಡ ಯುಗೋಸ್ಲಾವಿಯಾದಲ್ಲಿನ ಯುದ್ಧವನ್ನು ಕಂಡು ಯಾರೋ ಒಬ್ಬರು “ವಿವಿಧ ಬುಡಕಟ್ಟು ಮತ್ತು ಧರ್ಮೀಯರ ನಡುವೆ ಭಾರತದಲ್ಲೇನಾದರೂ ಯುದ್ಧ ಶುರುವಾದರೆ ಇವತ್ತು ಯುಗೋಸ್ಲಾವಿಯಾದಲ್ಲಾಗುತ್ತಿರುವುದು ಒಂದು ಪುಟ್ಟ ಪಿಕ್‌ನಿಕ್‌ನಂತೆ ಕಾಣಿಸುತ್ತದೆ” ಎಂದಿದ್ದರು.

ಈ ಚಿತ್ರವನ್ನು ನೋಡುತ್ತಿದ್ದಾಗ ಅವರು ಆಡಿದ್ದ ಭವಿಷ್ಯವಾಣಿ ನೆನಪಾಯಿತು.

(ಗೌರಿ ಲಂಕೇಶ್ ಅವರ ಕಂಡಹಾಗೆ ಅಂಕಣವೊಂದರ ಮರುಪ್ರಕಟಣೆ ಇದು)


ಇದನ್ನೂ ಓದಿ: ಗೌರಿ ಕಾರ್ನರ್; ಲಿವ್ ಅಂಡ್ ಬಿಕಮ್ ಸಿನಿಮ: ಪ್ರೀತಿಗಿರುವಷ್ಟು ಶಕ್ತಿ ಇನ್ಯಾವುದಕ್ಕಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...