Homeಅಂಕಣಗಳುಗೌರಿ ಕಾರ್ನರ್; ’ಅಂಡರ್ ಗ್ರೌಂಡ್’: ತಲ್ಲಣಗೊಳಿಸುವ ಚಿತ್ರವೊಂದರ ಕತೆ..

ಗೌರಿ ಕಾರ್ನರ್; ’ಅಂಡರ್ ಗ್ರೌಂಡ್’: ತಲ್ಲಣಗೊಳಿಸುವ ಚಿತ್ರವೊಂದರ ಕತೆ..

- Advertisement -
- Advertisement -

ಅವರಿಬ್ಬರೂ ಆತ್ಮೀಯ ಸ್ನೇಹಿತರು. ಕದಿಯುವುದರಲ್ಲಿ, ಮಜಾ ಉಡಾಯಿಸುವುದರಲ್ಲಿ, ಕುಡಿದು ಕುಪ್ಪಳಿಸುವುದರಲ್ಲಿ ನಿಷ್ಣಾತರು. ಒಬ್ಬ ಮಾರ್ಕೋ, ಮಗದೊಬ್ಬ ಬ್ಲಾಕಿ. ಜೋಕರ್‌ಗಳ ತರಹ ವರ್ತಿಸುವ ಇವರಿಬ್ಬರೂ ಒಂದು ರೀತಿಯಲ್ಲಿ ಬ್ಲ್ಯಾಕ್ ಕಾಮಿಡಿಯೊಂದರ ಹೀರೋಗಳು. ಅವರಿರುವ ಯುಗೋಸ್ಲಾವಿಯಾ ದೇಶದಲ್ಲಿ ಆಗ ತಾನೇ ಕಮ್ಯುನಿಸ್ಟರು ಸಂಘಟಿತರಾಗುತ್ತಿದ್ದಾರೆ. ಆ ಚಳವಳಿಯನ್ನು ಸೇರಿಕೊಳ್ಳುವ ಮಾರ್ಕೋ ತನ್ನೊಂದಿಗೆ ಬ್ಲಾಕಿಯನ್ನು ಕರೆತರುತ್ತಾನೆ. ಅದೇ ಸಮಯಕ್ಕೆ ಎರಡನೇ ಮಹಾಯುದ್ಧ ಪ್ರಾರಂಭವಾಗಿ ಹಿಟ್ಲರ್‌ನ ಸೈನ್ಯ ಯುಗೋಸ್ಲಾವಿಯಾ ದೇಶದ ಮೇಲೆ ದಾಳಿ ಇಡುತ್ತದೆ. ಹೇಗಾದರೂ ಸರಿಯೇ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟರನ್ನು’ ಸೋಲಿಸಬೇಕು ಎಂದು ತೀರ್ಮಾನಿಸುವ ಮಾರ್ಕೋ ಮತ್ತು ಬ್ಲಾಕಿ ತಮ್ಮ ಚಾಣಾಕ್ಷತೆಯನ್ನು ಉಪಯೋಗಿಸಿ ಶಸ್ತ್ರಾಸ್ತ್ರಗಳನ್ನು ಕದ್ದು ಕಮ್ಯುನಿಸ್ಟರಿಗೆ ಸರಬರಾಜು ಮಾಡುವುದರಲ್ಲಿ ನಿರತರಾಗುತ್ತಾರೆ. ಯುದ್ಧದಲ್ಲಿ ಮಾರ್ಕೋ ಸಹೋದರನ ಮೃಗಾಲಯ ನಾಶಗೊಂಡರೆ ಬ್ಲಾಕಿಯ ಪ್ರೇಯಸಿ ಹಿಟ್ಲರ್‌ನ ಸೈನ್ಯಾಧಿಕಾರಿಯೊಬ್ಬನ ವಶಕ್ಕೆ ಬೀಳುವ ಅಂಚಿನಲ್ಲಿದ್ದಾಳೆ. ಆನಂತರ ಹಿಟ್ಲರ್‌ನ ಸೈನ್ಯ ನಾಶಮಾಡದೇ ಇದ್ದುದ್ದನ್ನು ಮೈತ್ರಿಕೂಟ ನೆಲಸಮ ಮಾಡುತ್ತದೆ.

ಇಂತಹ ಪರಿಸ್ಥಿತಿಯಲ್ಲಿ ಬದುಕುಳಿಯಲು ಬ್ಲಾಕಿ, ಆತನ ಹೆಂಡತಿಗೆ ಹುಟ್ಟಿದ ಹಸಿಗೂಸು, ಮಾರ್ಕೋನ ಸಹೋದರ ಎಲ್ಲರೂ ಮನೆಯೊಂದರ ನೆಲಮಾಳಿಗೆಯಲ್ಲಿ ಅವಿತುಕೊಳ್ಳುತ್ತಾರೆ. ಬ್ಲಾಕಿಯ ಪ್ರೇಯಸಿಯ ಮೇಲೆ ಕಣ್ಣಿಟ್ಟಿರುವ ಮಾರ್ಕೋ ಹೊರಗಡೆ ಬಂದು ಒಂದೇ ಏಟಿಗೆ ಎಲ್ಲವನ್ನೂ ತನ್ನದಾಗಿಸಿಕೊಳ್ಳುವ ಸಂಚನ್ನು ರೂಪಿಸುತ್ತಾನೆ. ಬ್ಲಾಕಿಯ ಪ್ರೇಯಸಿಯನ್ನು ವರಿಸುತ್ತಲೇ, ಬ್ಲಾಕಿ ನೆಲಮಾಳಿಗೆಯಲ್ಲೇ ಶಾಶ್ವತವಾಗಿ ಉಳಿಯುವಂತೆ ಮಾಡುತ್ತಾನೆ. ಹೊರ ಪ್ರಪಂಚದಲ್ಲಿ ಏನಾಗುತ್ತಿದೆ ಎಂದು ಅರಿಯದ ಬ್ಲಾಕಿ ಮತ್ತು ಇತರರು ಸೋತು ಸುಣ್ಣವಾಗಿರುವ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್’ ಜರ್ಮನಿಯ ವಿರುದ್ಧ ಇನ್ನೂ ಯುದ್ಧ ನಡೆಯುತ್ತಿದೆ ಎಂಬ ಭ್ರಮೆಯಲ್ಲೇ 20 ವರ್ಷಗಳ ಕಾಲ ಜೀವಿಸುತ್ತಾರೆ. ಆದರೆ ವಾಸ್ತವವಾಗಿ ಬ್ಲಾಕಿಯ ಪ್ರೇಯಸಿಯನ್ನು ಮದುವೆಯಾಗಿರುವ ಮಾರ್ಕೋ, ಅಧಿಕಾರಕ್ಕೆ ಬಂದಿರುವ ಟೀಟೋನ ಸಂಪುಟದಲ್ಲಿ ಸಚಿವನಾಗಿರುತ್ತಾನೆ; ಬ್ಲಾಕಿ ತಂಡ ನೆಲಮಾಳಿಗೆಯಲ್ಲಿ ತಯಾರಿಸುತ್ತಿರುವ ಆಯುಧಗಳನ್ನು ಕಾಳಸಂತೆಯಲ್ಲಿ ಮಾರಿ ಆಗರ್ಭ ಶ್ರೀಮಂತನಾಗಿರುತ್ತಾನೆ.

PC : FilmAffinity

ಕೊನೆಗೂ ಒಂದು ದಿನ ಬ್ಲಾಕಿ ತನ್ನ ಮಗನೊಂದಿಗೆ ನೆಲಮಾಳಿಗೆಯಿಂದ ಹೊರಬಂದು ನೇರವಾಗಿ ಯುದ್ಧದಲ್ಲಿ ತೊಡಗುವುದಾಗಿ ನಿರ್ಧರಿಸುತ್ತಾನೆ. ಈಗ 20 ವರ್ಷದ ಯುವಕನಾಗಿರುವ ಬ್ಲಾಕಿಯ ಮಗ ಇದೇ ಮೊದಲನೆ ಬಾರಿ ಹೊರ ಪ್ರಪಂಚವನ್ನು ನೋಡುತ್ತಿದ್ದಾನೆ. ರಾತ್ರಿಯ ಆಕಾಶದಲ್ಲಿ ಚಂದಿರನನ್ನು ಕಂಡು “ಅಪ್ಪ ನೋಡು ಸೂರ್ಯ ಎಂದು ಬೆರಗಾಗುತ್ತಾನೆ. ಮಾರನೆ ದಿನ ಸೂರ್ಯ ಉದಯವಾಗುವುದನ್ನು ಕಂಡು “ಈ ಜಗತ್ತು ಎಷ್ಟು ಸುಂದರ!” ಎಂದು ಉದ್ಗಾರವೆತ್ತುತ್ತಾನೆ. ಆದರೆ ತಂದೆ-ಮಗನನ್ನು ದಂಗೆಕೋರರೆಂದು ಭಾವಿಸಿ ಸರ್ಕಾರದ ಸೈನಿಕರೇ ಅವರನ್ನು ಕೊಲ್ಲಲೆತ್ನಿಸುತ್ತಾರೆ. ಈ ಘಟನೆಯಲ್ಲಿ ಬ್ಲಾಕಿಯ ಮಗ ನೀರುಪಾಲಾಗಿ ಸಾವನ್ನಪ್ಪುತ್ತಾನೆ.

ಬ್ಲಾಕಿ ಹೊರಬಂದ ನಂತರ ತನಗೆ ಇನ್ನು ಯಾವುದೇ ಮಾರ್ಗವಿಲ್ಲ ಎಂದು ಭಾವಿಸಿ ಮಾರ್ಕೋ ಭೂಗತನಾಗುತ್ತಾನೆ. ಇದೆಲ್ಲದರ ಮಧ್ಯೆ ಮಾರ್ಕೋನ ತಮ್ಮ ನೆಲಮಾಳಿಗೆಯಿಂದ ತಪ್ಪಿಸಿಕೊಂಡಿರುವ ತನ್ನ ಕೋತಿಯನ್ನು ಹುಡುಕುತ್ತಾ ಅದೇ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್’ರ ದೇಶವಾದ ಜರ್ಮನಿಗೆ ಬರುತ್ತಾನೆ. ಆದರೆ ಯುದ್ಧ ಮುಗಿದು ಅದೆಷ್ಟೋ ಕಾಲವಾಗಿ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ತನ್ನ ಅಣ್ಣ ಮಾರ್ಕೋನೇ ತನ್ನನ್ನು ಮತ್ತು ಇತರರನ್ನು ನೆಲಮಾಳಿಗೆಯಲ್ಲಿ ಬಂಧಿಸಿಟ್ಟಿದ್ದ ಎಂದು ಅವನಿಗೆ ಗೊತ್ತಾಗಿ ದುಃಖಿಸುತ್ತಾನೆ. ಆತ ಯುಗೋಸ್ಲಾವಿಯಾಗೆ ಹಿಂದಿರುಗಿದಾಗ, ಅಲ್ಲಿ ಆಂತರಿಕ ಯುದ್ಧ ಪ್ರಾರಂಭವಾಗಿದೆ. ಮಾರ್ಕೋ ಭೂಗತನಾದ ನಂತರ ಸರ್ವಾಧಿಕಾರಿ ಟೀಟೋ ಸತ್ತು ಹೋಗಿದ್ದಾನೆ. ಯುಗೋಸ್ಲಾವಿಯಾ ದೇಶವೇ ಛಿದ್ರಗೊಂಡು, ಕ್ರೋಏಶಿಯನ್ನರು, ಬೋಸ್ನಿಯನ್ನರು ಮತ್ತು ಸರ್ಬಿಯನ್ನರು ಪರಸ್ಪರ ಯುದ್ಧದಲ್ಲಿ ಮುಳುಗಿದ್ದಾರೆ. ಇಂತಹ ಸಂದರ್ಭದಲ್ಲೂ ಮಾರ್ಕೋ ತನ್ನ ಶಸ್ತ್ರಾಸ್ತ್ರಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದಾನೆ. ಗುಂಡೇಟಿನಿಂದ ಕುಂಟನಾಗಿರುವ ಮಾರ್ಕೋ ಒಮ್ಮೆ ತನ್ನ ವೀಲ್‌ಚೇರ್‌ನಲ್ಲಿ ಹೋಗುತ್ತಿರುವುದನ್ನು ನೋಡುವ ಅವನ ಸಹೋದರ ಬಂದು ಮಾರ್ಕೋನನ್ನು ಇನ್ನಿಲ್ಲದಂತೆ ಹೊಡೆಯುತ್ತಾನೆ. ಆದರೂ ಮಾರ್ಕೋ ತನಗೆ ಏನೂ ಆಗಿಲ್ಲವೆಂಬಂತೆ ಕೂತಿರುವುದನ್ನು ಕಂಡು ರೋಸಿ ಹೋಗುವ ಸಹೋದರ ಹತ್ತಿರದಲ್ಲಿರುವ ಚರ್ಚ್ ಒಂದರಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪುತ್ತಾನೆ.

ಇದೇ ಹೊತ್ತಿಗೆ ಬ್ಲಾಕಿ ಯುದ್ಧದಲ್ಲಿ ಹೋರಾಡುತ್ತಿರುವ ಪಂಗಡವೊಂದರ ನಾಯಕನಾಗಿ ’ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್’ಗಳ ವಿರುದ್ಧ ಇನ್ನೂ ಕೆಂಡಕಾರುತ್ತಿದ್ದಾನೆ. ಮಾರ್ಕೋನನ್ನು ಹಿಡಿಯುವ ಬ್ಲಾಕಿಯ ಅಧೀನ ಅಧಿಕಾರಿಯೊಬ್ಬ “ಶಸ್ತ್ರಾಸ್ತ್ರಗಳ ಕಳ್ಳ ವ್ಯವಹಾರಿ ಮತ್ತು ಆತನ ಹೆಂಡತಿ ಸೆರೆ ಸಿಕ್ಕಿದ್ದಾರೆ, ಅವರನ್ನು ಏನು ಮಾಡಲಿ?” ಎಂದು ಕೇಳುತ್ತಾನೆ. ಮರುಚಿಂತೆ ಮಾಡದೆ “ಅವರಿಬ್ಬರನ್ನು ತಕ್ಷಣವೇ ಕೊಂದು ಹಾಕು” ಎಂದು ಬ್ಲಾಕಿ ಆದೇಶಿಸುತ್ತಾನೆ. ಅಗ್ನಿಗೆ ಬಲಿಯಾದ ಅವರಿಬ್ಬರ ಪಾಸ್‌ಪೋರ್ಟ್‌ಗಳನ್ನು ನೋಡಿದ ನಂತರವೇ ತಾನು ತನ್ನ ಸ್ನೇಹಿತ ಮತ್ತು ಮಾಜಿ ಪ್ರೇಯಸಿಯನ್ನು ಕೊಲ್ಲಿಸಿದ್ದೇನೆ ಎಂದು ಬ್ಲಾಕಿಗೆ ಗೊತ್ತಾಗುತ್ತದೆ.

ಯುದ್ಧ ಆತನಲ್ಲಿ ಭ್ರಮನಿರಸನವನ್ನುಂಟು ಮಾಡುತ್ತದೆ. ಆತ ದ್ವೇಷಿಸುತ್ತಿದ್ದ “ಹಾದರಕ್ಕೆ ಹುಟ್ಟಿದ ಫ್ಯಾಸಿಸ್ಟ್” ವೈರಿಗಳು ಬದಲಾಗುತ್ತಾ ಹೋಗುತ್ತಾರೆಯೇ ಹೊರತು ಯುದ್ಧ ಮಾತ್ರ ನಿರಂತರವಾಗಿ ಸಾಗುತ್ತದೆ ಎಂದು ಬ್ಲಾಕಿಗೆ ಗೊತ್ತಾಗುತ್ತದೆ. ತನ್ನ ದೇಶ, ಚಳವಳಿ, ಕನಸು, ಸ್ನೇಹಿತ, ಪ್ರೇಯಸಿ, ಮಗ…. ಎಲ್ಲವನ್ನು ಕಳೆದುಕೊಂಡ ಬ್ಲಾಕಿ ಮತ್ತೆ ಅದೇ ನೆಲಮಾಳಿಗೆಯಲ್ಲಿ ಸ್ವಬಂಧನವನ್ನು ಅರಸುತ್ತಾನೆ.

ಎಲ್ಲರೂ ಸತ್ತಿದ್ದಾರೆ, ಎಲ್ಲವೂ ನಾಶಗೊಂಡಿದೆ, ದೇಶ ಛಿದ್ರಗೊಂಡಿದೆ. ಹೋರಾಡಲು, ಪ್ರೀತಿಸಲು, ಆಶ್ರಯಿಸಲು, ಬೆಂಬಲಿಸಲು ಈಗ ಏನೂ ಉಳಿದಿಲ್ಲ. ಒಂದು ಸ್ತರದಲ್ಲಿ ಕಾಮಿಡಿ ರೀತಿಯಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುವ ಈ ಕತೆ ಇನ್ನೊಂದು ಸ್ತರದಲ್ಲಿ ಅಸಂಗತ ನಾಟಕದಂತೆಯೂ, ವಾಸ್ತವದ ವಿಮರ್ಶೆಯಾಗಿಯೂ ಸಾಗುತ್ತದೆ. ಕೊನೆ ದೃಶ್ಯದಲ್ಲಿ ಸತ್ತಿರುವ ಎಲ್ಲರೂ ಸಮುದ್ರದ ದಡದಲ್ಲಿ ಸೇರಿದ್ದಾರೆ. ಅಲ್ಲಿ ಸಂಗೀತ, ನೃತ್ಯದಲ್ಲಿ ಎಲ್ಲಾ ದ್ವೇಷಾಸೂಯೆಗಳನ್ನು ಮರೆತು ಸಂತೋಷದ ಅಮಲಿನಲ್ಲಿ ತೇಲಾಡುತ್ತಿದ್ದಾರೆ. ನಿಧಾನವಾಗಿ ನೆಲದಲ್ಲಿ ಬಿರುಕೊಂದು ಮೂಡಿ ಸಮುದ್ರದ ದಡವೇ ಪ್ರತ್ಯೇಕ ದ್ವೀಪವಾಗಿ ದೂರಕ್ಕೆ ಚಲಿಸಲಾರಂಭಿಸುತ್ತದೆ….. ಆಗ ಮಾರ್ಕೋನ ಸಹೋದರ ನಮ್ಮತ್ತ ದಿಟ್ಟಿಸುತ್ತಾ; “ಮುಂದೊಂದು ದಿನ ನಮ್ಮ ಮಕ್ಕಳಿಗೆ ಹೀಗೊಂದು ಕತೆ ಹೇಳಬಹುದು: ಒಂದಾನೊಂದು ಕಾಲದಲ್ಲಿ ಒಂದು ದೇಶ ಇತ್ತು…..”

ಇದು ಎಮಿರ್ ಕುಸ್ಟಿರಿಕಾ ಎಂಬಾತ ನಿರ್ದೇಶಿಸಿರುವ ’ಅಂಡರ್‌ಗ್ರೌಂಡ್’ ಸಾರಾಂಶ. ಯುಗೋಸ್ಲಾವಿಯಾ ಎಂಬ ದೇಶದ ದುರಂತವನ್ನು ಸೆರೆ ಹಿಡಿದಿರುವ ’ಅಂಡರ್‌ಗ್ರೌಂಡ್’ ಚಿತ್ರಕ್ಕೆ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಗೋಲ್ಡನ್ ಪಾಮ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ.

PC : Elle, (ಎಮಿರ್ ಕುಸ್ಟಿರಿಕಾ)

ಇಲ್ಲಿ ಯುಗೋಸ್ಲಾವಿಯಾ ಬದಲಿಗೆ ಭಾರತವನ್ನೇ ಚಿತ್ರಿಸಿಕೊಳ್ಳಿ. ಎರಡನೇ ಮಹಾಯುದ್ಧದ ನಂತರ ದೇಶದ ವಿಭಜನೆ, ಆನಂತರ ಪಾಕಿಸ್ತಾನ ಮತ್ತು ಭಾರತದ ನಡುವಿನ ನಾಲ್ಕು ಯುದ್ಧಗಳು, ಅಲ್ಲಿನ ಕ್ರೋಏಶಿಯರು, ಸರ್ಬಿಯನ್ನರು ಮತ್ತು ಬೋಸ್ನಿಯಾದವರ ನಡುವಿನ ಕಾಳಗದಂತೆ ಇಲ್ಲಿನ ಹಿಂದೂ ಮತ್ತು ಮುಸ್ಲಿಮರ ನಡುವಿನ ಕೋಮುಗಲಭೆಗಳು…. ’ಅಂಡರ್ ಗ್ರೌಂಡ್’ ಚಿತ್ರದಲ್ಲಿ ಒಂದು ಸಾಲಿದೆ. ತನ್ನ ತಮ್ಮನಿಂದ ಏಟುಗಳನ್ನು ತಿನ್ನುತ್ತಿರುವ ಮಾರ್ಕೋ ಹೇಳುತ್ತಾನೆ: “ಸಹೋದರರು ಒಬ್ಬರನ್ನೊಬ್ಬರು ಸಾಯಿಸುವವರೆಗೂ ಯಾವ ಯುದ್ಧವೂ ಸಂಪೂರ್ಣವಾದ ಯುದ್ಧವಾಗುವುದಿಲ್ಲ. ಇದು ಇವತ್ತಿನ ಭಾರತಕ್ಕೂ ಅನ್ವಯಿಸುತ್ತದಲ್ಲವೇ?

ಅಂದಹಾಗೆ, ಛಿದ್ರಗೊಂಡ ಯುಗೋಸ್ಲಾವಿಯಾದಲ್ಲಿನ ಯುದ್ಧವನ್ನು ಕಂಡು ಯಾರೋ ಒಬ್ಬರು “ವಿವಿಧ ಬುಡಕಟ್ಟು ಮತ್ತು ಧರ್ಮೀಯರ ನಡುವೆ ಭಾರತದಲ್ಲೇನಾದರೂ ಯುದ್ಧ ಶುರುವಾದರೆ ಇವತ್ತು ಯುಗೋಸ್ಲಾವಿಯಾದಲ್ಲಾಗುತ್ತಿರುವುದು ಒಂದು ಪುಟ್ಟ ಪಿಕ್‌ನಿಕ್‌ನಂತೆ ಕಾಣಿಸುತ್ತದೆ” ಎಂದಿದ್ದರು.

ಈ ಚಿತ್ರವನ್ನು ನೋಡುತ್ತಿದ್ದಾಗ ಅವರು ಆಡಿದ್ದ ಭವಿಷ್ಯವಾಣಿ ನೆನಪಾಯಿತು.

(ಗೌರಿ ಲಂಕೇಶ್ ಅವರ ಕಂಡಹಾಗೆ ಅಂಕಣವೊಂದರ ಮರುಪ್ರಕಟಣೆ ಇದು)


ಇದನ್ನೂ ಓದಿ: ಗೌರಿ ಕಾರ್ನರ್; ಲಿವ್ ಅಂಡ್ ಬಿಕಮ್ ಸಿನಿಮ: ಪ್ರೀತಿಗಿರುವಷ್ಟು ಶಕ್ತಿ ಇನ್ಯಾವುದಕ್ಕಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....