Homeಮುಖಪುಟಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

ಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

- Advertisement -
- Advertisement -

(ಮೊದಮೊದಲು ಯಾರಿಗೂ ಈ ಕೊರೊನಾ ಎದುರಿಸುವ ನಿರ್ದಿಷ್ಟ ಬಗೆ ಗೊತ್ತಿರಲಿಲ್ಲ ಎಂಬುದು ಸರಿ. ಹಾಗಾಗಿ ಎಲ್ಲವನ್ನೂ ಪ್ರಯೋಗ ಮಾಡಿಯೇ ಕಲಿಯಬೇಕಿತ್ತು. ಆದರೆ, ಈಗ ಎಷ್ಟೋ ದೇಶಗಳ ಎಷ್ಟೋ ಬಗೆಯ ಪ್ರಯೋಗಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಪಾಠಗಳು ಸಿಕ್ಕಿವೆ. ಭಾರತದ್ದೂ ಅನುಭವ ಈಗ ದಕ್ಕಿದೆ. ಈಗಲೂ ಗೊತ್ತಿರದ ಸಂಗತಿಗಳಿದ್ದಾವಾದರೂ, ಗೊತ್ತಿರುವ ಅಂಶಗಳ ಆಧಾರದ ಮೇಲೆ ಯಾವ ಅಭಿಪ್ರಾಯಗಳಿಗೆ ಬರಲಾಯಿತು ಎಂದೂ ಹೇಳಬೇಕಾದವರು ಹೇಳುತ್ತಿಲ್ಲ. ಹಾಗಾಗಿ ಈಗ ಅನುಸರಿಸಲಾಗುತ್ತಿರುವ ದಾರಿ ಎಷ್ಟು ಸರಿ ಎಷ್ಟು ತಪ್ಪು ಎಂದೂ ಹೇಳಲಾಗುತ್ತಿಲ್ಲ.)

ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ಭಾಗಗಳ ಅನುಭವಗಳನ್ನು ಒಂದೆಡೆ ತಂದು, ಈ ಕುರಿತು ವಿವಿಧ ತಜ್ಞರು ಏನು ಹೇಳಿದ್ದಾರೆಂಬುದನ್ನೂ ನಿಕಷಕ್ಕೆ ಒಡ್ಡಿ ಖಚಿತವಾದ ಕೆಲವು ಅಭಿಪ್ರಾಯಗಳಿಗೆ ಬರಬೇಕಿದೆ. ಗಮನಿಸಿ: ನಾವು ನಮ್ಮ ತರ್ಕ ಬುದ್ಧಿಯನ್ನು ಒಂದಷ್ಟು ಬಳಸಬಹುದಾದರೂ ಅಂತಿಮವಾಗಿ ತಜ್ಞರ ಅನಿಸಿಕೆಗಳ ಆಧಾರದ ಮೇಲೆಯೇ ತೀರ್ಮಾನಿಸಬೇಕು. ನಮಗೆ ಇನ್ನೂ ಸ್ಪಷ್ಟವಾಗಿರದುದರ ಕುರಿತು ಕೆಲವು ಪ್ರಶ್ನೆಗಳನ್ನು ಇಲ್ಲಿ ಹಾಕಿಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ನೀವೂ ಭಾಗಿಯಾಗುತ್ತಾ ಹೋದರೆ, ಭಾರತವು ಕೊರೊನಾವನ್ನು ಹೇಗೆ ಎದುರಿಸಬೇಕು ಎಂಬುದು ನಿಮಗೂ ಗೊತ್ತಾಗುತ್ತದೆ. ಅಂತಿಮವಾಗಿ ಭಾರತೀಯರಾದ ನಾವು ಸಮಷ್ಟಿ ತಿಳುವಳಿಕೆಯಿಂದ ಕೊರೊನಾವನ್ನು ಎದುರಿಸಿ ಗೆಲ್ಲಲು ಸಾಧ್ಯವಾಗಬೇಕು ಎಂಬುದೇ ಈ ಅಧ್ಯಯನದ ಆಶಯ)

ದೇಶವು ಮಾರ್ಚ್ 24ರಿಂದ ಇಲ್ಲಿಯವರೆಗೆ ಮೂರು ಸಾರಿ ವಿಸ್ತರಣೆಯಾದ ಲಾಕ್‌ಡೌನ್‌ಅನ್ನು ಅನುಭವಿಸಿದೆ. ಮೇ 17ರಂದು ಅದು ಬಹಳಷ್ಟು ಸಡಿಲವಾಗಿದೆ.  ಪ್ರಧಾನಿಗಳು ‘ಹೊಸ ನಿಯಮಗಳೊಂದಿಗೆ 4ನೇ ಬಗೆಯ ಲಾಕ್‌ಡೌನ್’ ಮುಂದುವರೆಯಲಿದೆ ಎಂದು ಹೇಳಿದಾಗ, ಮುಂದಿನ ದಿನಗಳು ಹೇಗಿರುತ್ತವೆ ಎಂಬುದು ಅಸ್ಪಷ್ಟವಾಗಿ ಇತ್ತಾದರೂ, ಈಗ ಅದು ಹೆಚ್ಚಿನಂಶ ಸಡಿಲವಾಗುವ ಲಕ್ಷಣಗಳು ಕಂಡು ಬಂದಿದೆ. ಪ್ರಪಂಚದಾದ್ಯಂತ ಹಲವು ದೇಶಗಳು ವಿವಿಧ ರೀತಿಯ ಲಾಕ್‌ಡೌನ್‌ಅನ್ನು ಜಾರಿಗೊಳಿಸಿದ್ದವು. ಅಂತಿಮವಾಗಿ ಈ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬೇರೆ ಬೇರೆ ಮಟ್ಟದ ಯಶಸ್ಸಿನೊಂದಿಗೆ ಲಾಕ್‌ಡೌನ್‌ನಿಂದ ಹೊರಬರುತ್ತಿವೆ.

ಭಾರತದಲ್ಲಿ ಬಹಳಷ್ಟು ಸಂಕಷ್ಟ, ಒತ್ತಡ, ಸಾವು ಮತ್ತು ಹಸಿವನ್ನು ಈ ಅವಧಿಯಲ್ಲಿ ನಾವು ನೋಡಿದೆವು. ಅವೆಲ್ಲವೂ ವೈರಸ್‌ನಿಂದ ಆಗಿರಲಿಲ್ಲ. ಸಾವುಗಳು ಹೆಚ್ಚಾಗಿ ವೈರಸ್‌ನಿಂದ ಆಗಿರಬಹುದಾದರೂ, ಸಂಕಷ್ಟ ಮತ್ತು ಹಸಿವು ಲಾಕ್‌ಡೌನ್ ಅಳವಡಿಸಿದ ರೀತಿಯಿಂದಾಗಿತ್ತು. ಹಾಗಾಗಿ ಇಲ್ಲಿ ನಾವು ಹಾಕಿಕೊಳ್ಳುತ್ತಿರುವ ಪ್ರಶ್ನೆಗಳು ಕೊರೊನಾ ಸೋಂಕಿನ ನಿರ್ವಹಣೆಯ ಜೊತೆಗೆ ಲಾಕ್‌ಡೌನ್ ಕುರಿತಾಗಿಯೂ ಇರುತ್ತದೆ.

ನಾವು ಹಾಕಿಕೊಂಡಿರುವ ಪ್ರಶ್ನೆಗಳು ಇವು……

1. ಭಾರತವು ಸಾಕಷ್ಟು ಮುಂಚೆ ಸಮಯಸ್ಫೂರ್ತಿಯಿಂದ ಮಧ್ಯಪ್ರವೇಶಿಸಿತೇ?

2. ಕೋವಿಡ್ 19ಅನ್ನು ಭಾರತದಲ್ಲಿ ನಿಗ್ರಹಿಸಲು ಲಾಕ್‌ಡೌನ್ ಅತ್ಯುತ್ತಮ ವಿಧಾನವಾಗಿತ್ತೇ?

3. ಒಂದು ವೇಳೆ ಲಾಕ್‌ಡೌನೇ ಅಂದಿನ ಸಂದರ್ಭದಲ್ಲಿ ಸೂಕ್ತವಾಗಿತ್ತು ಎನ್ನುವುದಾದರೆ, ಭಾರತವು ಅದಕ್ಕೆ ಸೂಕ್ತವಾದ ಯೋಜನೆ ಮಾಡಿಕೊಂಡಿತ್ತೇ?

4. ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರಿಯಾಗಿತ್ತೇ?

5. ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಪರೀಕ್ಷೆಗಳ (ಟೆಸ್ಟ್) ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಯಿತೇ?

6. ಲಾಕ್‌ಡೌನ್ ಸಡಿಲಿಸಿದಾಗ ದಿಢೀರನೆ ಹೆಚ್ಚಾಗುವ ಕೊರೊನಾ ಕೇಸುಗಳನ್ನು ಎದುರಿಸಲು ವೈದ್ಯಕೀಯ ವ್ಯವಸ್ಥೆ ಸಜ್ಜಾಗಿದೆಯೇ? ಆಗಿದ್ದರೆ ಎಷ್ಟರಮಟ್ಟಿಗೆ ಆಗಿದೆ?

7. ವೈದ್ಯಕೀಯ ವ್ಯವಸ್ಥೆಯ ಸಿದ್ಧತೆಯ ವಿಚಾರದಲ್ಲಿ ಕರ್ನಾಟಕ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ?

8. ಟೆಸ್ಟ್‌ಗಳನ್ನು ಮಾಡುವ ವಿಚಾರದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಹೇಗಿದೆ?

9. ಕರ್ನಾಟಕವು ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಒಟ್ಟಾರೆ ಕ್ರಮಗಳು ಯಾವ ಪ್ರಮಾಣದ ಯಶಸ್ಸನ್ನು ತಂದಿದೆ?

10. ಇವೆಲ್ಲದರ ಆಧಾರದ ಮೇಲೆ ನಾವು ಯಾವ ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಡಬಹುದು?

ಇವೆಲ್ಲಕ್ಕೂ ಸ್ಪಷ್ಟವಾದ ವೈಜ್ಞಾನಿಕವಾದ (ಅಂದರೆ ಅಧ್ಯಯನ ಮತ್ತು ನಿರ್ದಿಷ್ಟ ಅನುಭವದಿಂದ ಸಿದ್ಧವಾದ) ಸಂಗತಿಗಳ ಮೇಲೆಯೇ ತೀರ್ಮಾನಕ್ಕೆ ಬರಬೇಕು. ಅಂತಹ ಅಧ್ಯಯನವು ಈಗಾಗಲೇ ಆರಂಭವಾಗಿದ್ದು, ಇದರಲ್ಲಿ ಕೈ ಜೋಡಿಸಬಹುದಾದವರೆಲ್ಲರಿಗೆ ಸ್ವಾಗತ.

ಆಸಕ್ತರು [email protected], [email protected] ಈ ಇಮೇಲ್‌ಗಳನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...