Homeಮುಖಪುಟಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

ಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

- Advertisement -
- Advertisement -

(ಮೊದಮೊದಲು ಯಾರಿಗೂ ಈ ಕೊರೊನಾ ಎದುರಿಸುವ ನಿರ್ದಿಷ್ಟ ಬಗೆ ಗೊತ್ತಿರಲಿಲ್ಲ ಎಂಬುದು ಸರಿ. ಹಾಗಾಗಿ ಎಲ್ಲವನ್ನೂ ಪ್ರಯೋಗ ಮಾಡಿಯೇ ಕಲಿಯಬೇಕಿತ್ತು. ಆದರೆ, ಈಗ ಎಷ್ಟೋ ದೇಶಗಳ ಎಷ್ಟೋ ಬಗೆಯ ಪ್ರಯೋಗಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಪಾಠಗಳು ಸಿಕ್ಕಿವೆ. ಭಾರತದ್ದೂ ಅನುಭವ ಈಗ ದಕ್ಕಿದೆ. ಈಗಲೂ ಗೊತ್ತಿರದ ಸಂಗತಿಗಳಿದ್ದಾವಾದರೂ, ಗೊತ್ತಿರುವ ಅಂಶಗಳ ಆಧಾರದ ಮೇಲೆ ಯಾವ ಅಭಿಪ್ರಾಯಗಳಿಗೆ ಬರಲಾಯಿತು ಎಂದೂ ಹೇಳಬೇಕಾದವರು ಹೇಳುತ್ತಿಲ್ಲ. ಹಾಗಾಗಿ ಈಗ ಅನುಸರಿಸಲಾಗುತ್ತಿರುವ ದಾರಿ ಎಷ್ಟು ಸರಿ ಎಷ್ಟು ತಪ್ಪು ಎಂದೂ ಹೇಳಲಾಗುತ್ತಿಲ್ಲ.)

ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ಭಾಗಗಳ ಅನುಭವಗಳನ್ನು ಒಂದೆಡೆ ತಂದು, ಈ ಕುರಿತು ವಿವಿಧ ತಜ್ಞರು ಏನು ಹೇಳಿದ್ದಾರೆಂಬುದನ್ನೂ ನಿಕಷಕ್ಕೆ ಒಡ್ಡಿ ಖಚಿತವಾದ ಕೆಲವು ಅಭಿಪ್ರಾಯಗಳಿಗೆ ಬರಬೇಕಿದೆ. ಗಮನಿಸಿ: ನಾವು ನಮ್ಮ ತರ್ಕ ಬುದ್ಧಿಯನ್ನು ಒಂದಷ್ಟು ಬಳಸಬಹುದಾದರೂ ಅಂತಿಮವಾಗಿ ತಜ್ಞರ ಅನಿಸಿಕೆಗಳ ಆಧಾರದ ಮೇಲೆಯೇ ತೀರ್ಮಾನಿಸಬೇಕು. ನಮಗೆ ಇನ್ನೂ ಸ್ಪಷ್ಟವಾಗಿರದುದರ ಕುರಿತು ಕೆಲವು ಪ್ರಶ್ನೆಗಳನ್ನು ಇಲ್ಲಿ ಹಾಕಿಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ನೀವೂ ಭಾಗಿಯಾಗುತ್ತಾ ಹೋದರೆ, ಭಾರತವು ಕೊರೊನಾವನ್ನು ಹೇಗೆ ಎದುರಿಸಬೇಕು ಎಂಬುದು ನಿಮಗೂ ಗೊತ್ತಾಗುತ್ತದೆ. ಅಂತಿಮವಾಗಿ ಭಾರತೀಯರಾದ ನಾವು ಸಮಷ್ಟಿ ತಿಳುವಳಿಕೆಯಿಂದ ಕೊರೊನಾವನ್ನು ಎದುರಿಸಿ ಗೆಲ್ಲಲು ಸಾಧ್ಯವಾಗಬೇಕು ಎಂಬುದೇ ಈ ಅಧ್ಯಯನದ ಆಶಯ)

ದೇಶವು ಮಾರ್ಚ್ 24ರಿಂದ ಇಲ್ಲಿಯವರೆಗೆ ಮೂರು ಸಾರಿ ವಿಸ್ತರಣೆಯಾದ ಲಾಕ್‌ಡೌನ್‌ಅನ್ನು ಅನುಭವಿಸಿದೆ. ಮೇ 17ರಂದು ಅದು ಬಹಳಷ್ಟು ಸಡಿಲವಾಗಿದೆ.  ಪ್ರಧಾನಿಗಳು ‘ಹೊಸ ನಿಯಮಗಳೊಂದಿಗೆ 4ನೇ ಬಗೆಯ ಲಾಕ್‌ಡೌನ್’ ಮುಂದುವರೆಯಲಿದೆ ಎಂದು ಹೇಳಿದಾಗ, ಮುಂದಿನ ದಿನಗಳು ಹೇಗಿರುತ್ತವೆ ಎಂಬುದು ಅಸ್ಪಷ್ಟವಾಗಿ ಇತ್ತಾದರೂ, ಈಗ ಅದು ಹೆಚ್ಚಿನಂಶ ಸಡಿಲವಾಗುವ ಲಕ್ಷಣಗಳು ಕಂಡು ಬಂದಿದೆ. ಪ್ರಪಂಚದಾದ್ಯಂತ ಹಲವು ದೇಶಗಳು ವಿವಿಧ ರೀತಿಯ ಲಾಕ್‌ಡೌನ್‌ಅನ್ನು ಜಾರಿಗೊಳಿಸಿದ್ದವು. ಅಂತಿಮವಾಗಿ ಈ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬೇರೆ ಬೇರೆ ಮಟ್ಟದ ಯಶಸ್ಸಿನೊಂದಿಗೆ ಲಾಕ್‌ಡೌನ್‌ನಿಂದ ಹೊರಬರುತ್ತಿವೆ.

ಭಾರತದಲ್ಲಿ ಬಹಳಷ್ಟು ಸಂಕಷ್ಟ, ಒತ್ತಡ, ಸಾವು ಮತ್ತು ಹಸಿವನ್ನು ಈ ಅವಧಿಯಲ್ಲಿ ನಾವು ನೋಡಿದೆವು. ಅವೆಲ್ಲವೂ ವೈರಸ್‌ನಿಂದ ಆಗಿರಲಿಲ್ಲ. ಸಾವುಗಳು ಹೆಚ್ಚಾಗಿ ವೈರಸ್‌ನಿಂದ ಆಗಿರಬಹುದಾದರೂ, ಸಂಕಷ್ಟ ಮತ್ತು ಹಸಿವು ಲಾಕ್‌ಡೌನ್ ಅಳವಡಿಸಿದ ರೀತಿಯಿಂದಾಗಿತ್ತು. ಹಾಗಾಗಿ ಇಲ್ಲಿ ನಾವು ಹಾಕಿಕೊಳ್ಳುತ್ತಿರುವ ಪ್ರಶ್ನೆಗಳು ಕೊರೊನಾ ಸೋಂಕಿನ ನಿರ್ವಹಣೆಯ ಜೊತೆಗೆ ಲಾಕ್‌ಡೌನ್ ಕುರಿತಾಗಿಯೂ ಇರುತ್ತದೆ.

ನಾವು ಹಾಕಿಕೊಂಡಿರುವ ಪ್ರಶ್ನೆಗಳು ಇವು……

1. ಭಾರತವು ಸಾಕಷ್ಟು ಮುಂಚೆ ಸಮಯಸ್ಫೂರ್ತಿಯಿಂದ ಮಧ್ಯಪ್ರವೇಶಿಸಿತೇ?

2. ಕೋವಿಡ್ 19ಅನ್ನು ಭಾರತದಲ್ಲಿ ನಿಗ್ರಹಿಸಲು ಲಾಕ್‌ಡೌನ್ ಅತ್ಯುತ್ತಮ ವಿಧಾನವಾಗಿತ್ತೇ?

3. ಒಂದು ವೇಳೆ ಲಾಕ್‌ಡೌನೇ ಅಂದಿನ ಸಂದರ್ಭದಲ್ಲಿ ಸೂಕ್ತವಾಗಿತ್ತು ಎನ್ನುವುದಾದರೆ, ಭಾರತವು ಅದಕ್ಕೆ ಸೂಕ್ತವಾದ ಯೋಜನೆ ಮಾಡಿಕೊಂಡಿತ್ತೇ?

4. ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರಿಯಾಗಿತ್ತೇ?

5. ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಪರೀಕ್ಷೆಗಳ (ಟೆಸ್ಟ್) ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಯಿತೇ?

6. ಲಾಕ್‌ಡೌನ್ ಸಡಿಲಿಸಿದಾಗ ದಿಢೀರನೆ ಹೆಚ್ಚಾಗುವ ಕೊರೊನಾ ಕೇಸುಗಳನ್ನು ಎದುರಿಸಲು ವೈದ್ಯಕೀಯ ವ್ಯವಸ್ಥೆ ಸಜ್ಜಾಗಿದೆಯೇ? ಆಗಿದ್ದರೆ ಎಷ್ಟರಮಟ್ಟಿಗೆ ಆಗಿದೆ?

7. ವೈದ್ಯಕೀಯ ವ್ಯವಸ್ಥೆಯ ಸಿದ್ಧತೆಯ ವಿಚಾರದಲ್ಲಿ ಕರ್ನಾಟಕ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ?

8. ಟೆಸ್ಟ್‌ಗಳನ್ನು ಮಾಡುವ ವಿಚಾರದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಹೇಗಿದೆ?

9. ಕರ್ನಾಟಕವು ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಒಟ್ಟಾರೆ ಕ್ರಮಗಳು ಯಾವ ಪ್ರಮಾಣದ ಯಶಸ್ಸನ್ನು ತಂದಿದೆ?

10. ಇವೆಲ್ಲದರ ಆಧಾರದ ಮೇಲೆ ನಾವು ಯಾವ ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಡಬಹುದು?

ಇವೆಲ್ಲಕ್ಕೂ ಸ್ಪಷ್ಟವಾದ ವೈಜ್ಞಾನಿಕವಾದ (ಅಂದರೆ ಅಧ್ಯಯನ ಮತ್ತು ನಿರ್ದಿಷ್ಟ ಅನುಭವದಿಂದ ಸಿದ್ಧವಾದ) ಸಂಗತಿಗಳ ಮೇಲೆಯೇ ತೀರ್ಮಾನಕ್ಕೆ ಬರಬೇಕು. ಅಂತಹ ಅಧ್ಯಯನವು ಈಗಾಗಲೇ ಆರಂಭವಾಗಿದ್ದು, ಇದರಲ್ಲಿ ಕೈ ಜೋಡಿಸಬಹುದಾದವರೆಲ್ಲರಿಗೆ ಸ್ವಾಗತ.

ಆಸಕ್ತರು [email protected], [email protected] ಈ ಇಮೇಲ್‌ಗಳನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...