Homeಮುಖಪುಟಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

ಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

- Advertisement -
- Advertisement -

(ಮೊದಮೊದಲು ಯಾರಿಗೂ ಈ ಕೊರೊನಾ ಎದುರಿಸುವ ನಿರ್ದಿಷ್ಟ ಬಗೆ ಗೊತ್ತಿರಲಿಲ್ಲ ಎಂಬುದು ಸರಿ. ಹಾಗಾಗಿ ಎಲ್ಲವನ್ನೂ ಪ್ರಯೋಗ ಮಾಡಿಯೇ ಕಲಿಯಬೇಕಿತ್ತು. ಆದರೆ, ಈಗ ಎಷ್ಟೋ ದೇಶಗಳ ಎಷ್ಟೋ ಬಗೆಯ ಪ್ರಯೋಗಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಪಾಠಗಳು ಸಿಕ್ಕಿವೆ. ಭಾರತದ್ದೂ ಅನುಭವ ಈಗ ದಕ್ಕಿದೆ. ಈಗಲೂ ಗೊತ್ತಿರದ ಸಂಗತಿಗಳಿದ್ದಾವಾದರೂ, ಗೊತ್ತಿರುವ ಅಂಶಗಳ ಆಧಾರದ ಮೇಲೆ ಯಾವ ಅಭಿಪ್ರಾಯಗಳಿಗೆ ಬರಲಾಯಿತು ಎಂದೂ ಹೇಳಬೇಕಾದವರು ಹೇಳುತ್ತಿಲ್ಲ. ಹಾಗಾಗಿ ಈಗ ಅನುಸರಿಸಲಾಗುತ್ತಿರುವ ದಾರಿ ಎಷ್ಟು ಸರಿ ಎಷ್ಟು ತಪ್ಪು ಎಂದೂ ಹೇಳಲಾಗುತ್ತಿಲ್ಲ.)

ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ಭಾಗಗಳ ಅನುಭವಗಳನ್ನು ಒಂದೆಡೆ ತಂದು, ಈ ಕುರಿತು ವಿವಿಧ ತಜ್ಞರು ಏನು ಹೇಳಿದ್ದಾರೆಂಬುದನ್ನೂ ನಿಕಷಕ್ಕೆ ಒಡ್ಡಿ ಖಚಿತವಾದ ಕೆಲವು ಅಭಿಪ್ರಾಯಗಳಿಗೆ ಬರಬೇಕಿದೆ. ಗಮನಿಸಿ: ನಾವು ನಮ್ಮ ತರ್ಕ ಬುದ್ಧಿಯನ್ನು ಒಂದಷ್ಟು ಬಳಸಬಹುದಾದರೂ ಅಂತಿಮವಾಗಿ ತಜ್ಞರ ಅನಿಸಿಕೆಗಳ ಆಧಾರದ ಮೇಲೆಯೇ ತೀರ್ಮಾನಿಸಬೇಕು. ನಮಗೆ ಇನ್ನೂ ಸ್ಪಷ್ಟವಾಗಿರದುದರ ಕುರಿತು ಕೆಲವು ಪ್ರಶ್ನೆಗಳನ್ನು ಇಲ್ಲಿ ಹಾಕಿಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ನೀವೂ ಭಾಗಿಯಾಗುತ್ತಾ ಹೋದರೆ, ಭಾರತವು ಕೊರೊನಾವನ್ನು ಹೇಗೆ ಎದುರಿಸಬೇಕು ಎಂಬುದು ನಿಮಗೂ ಗೊತ್ತಾಗುತ್ತದೆ. ಅಂತಿಮವಾಗಿ ಭಾರತೀಯರಾದ ನಾವು ಸಮಷ್ಟಿ ತಿಳುವಳಿಕೆಯಿಂದ ಕೊರೊನಾವನ್ನು ಎದುರಿಸಿ ಗೆಲ್ಲಲು ಸಾಧ್ಯವಾಗಬೇಕು ಎಂಬುದೇ ಈ ಅಧ್ಯಯನದ ಆಶಯ)

ದೇಶವು ಮಾರ್ಚ್ 24ರಿಂದ ಇಲ್ಲಿಯವರೆಗೆ ಮೂರು ಸಾರಿ ವಿಸ್ತರಣೆಯಾದ ಲಾಕ್‌ಡೌನ್‌ಅನ್ನು ಅನುಭವಿಸಿದೆ. ಮೇ 17ರಂದು ಅದು ಬಹಳಷ್ಟು ಸಡಿಲವಾಗಿದೆ.  ಪ್ರಧಾನಿಗಳು ‘ಹೊಸ ನಿಯಮಗಳೊಂದಿಗೆ 4ನೇ ಬಗೆಯ ಲಾಕ್‌ಡೌನ್’ ಮುಂದುವರೆಯಲಿದೆ ಎಂದು ಹೇಳಿದಾಗ, ಮುಂದಿನ ದಿನಗಳು ಹೇಗಿರುತ್ತವೆ ಎಂಬುದು ಅಸ್ಪಷ್ಟವಾಗಿ ಇತ್ತಾದರೂ, ಈಗ ಅದು ಹೆಚ್ಚಿನಂಶ ಸಡಿಲವಾಗುವ ಲಕ್ಷಣಗಳು ಕಂಡು ಬಂದಿದೆ. ಪ್ರಪಂಚದಾದ್ಯಂತ ಹಲವು ದೇಶಗಳು ವಿವಿಧ ರೀತಿಯ ಲಾಕ್‌ಡೌನ್‌ಅನ್ನು ಜಾರಿಗೊಳಿಸಿದ್ದವು. ಅಂತಿಮವಾಗಿ ಈ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬೇರೆ ಬೇರೆ ಮಟ್ಟದ ಯಶಸ್ಸಿನೊಂದಿಗೆ ಲಾಕ್‌ಡೌನ್‌ನಿಂದ ಹೊರಬರುತ್ತಿವೆ.

ಭಾರತದಲ್ಲಿ ಬಹಳಷ್ಟು ಸಂಕಷ್ಟ, ಒತ್ತಡ, ಸಾವು ಮತ್ತು ಹಸಿವನ್ನು ಈ ಅವಧಿಯಲ್ಲಿ ನಾವು ನೋಡಿದೆವು. ಅವೆಲ್ಲವೂ ವೈರಸ್‌ನಿಂದ ಆಗಿರಲಿಲ್ಲ. ಸಾವುಗಳು ಹೆಚ್ಚಾಗಿ ವೈರಸ್‌ನಿಂದ ಆಗಿರಬಹುದಾದರೂ, ಸಂಕಷ್ಟ ಮತ್ತು ಹಸಿವು ಲಾಕ್‌ಡೌನ್ ಅಳವಡಿಸಿದ ರೀತಿಯಿಂದಾಗಿತ್ತು. ಹಾಗಾಗಿ ಇಲ್ಲಿ ನಾವು ಹಾಕಿಕೊಳ್ಳುತ್ತಿರುವ ಪ್ರಶ್ನೆಗಳು ಕೊರೊನಾ ಸೋಂಕಿನ ನಿರ್ವಹಣೆಯ ಜೊತೆಗೆ ಲಾಕ್‌ಡೌನ್ ಕುರಿತಾಗಿಯೂ ಇರುತ್ತದೆ.

ನಾವು ಹಾಕಿಕೊಂಡಿರುವ ಪ್ರಶ್ನೆಗಳು ಇವು……

1. ಭಾರತವು ಸಾಕಷ್ಟು ಮುಂಚೆ ಸಮಯಸ್ಫೂರ್ತಿಯಿಂದ ಮಧ್ಯಪ್ರವೇಶಿಸಿತೇ?

2. ಕೋವಿಡ್ 19ಅನ್ನು ಭಾರತದಲ್ಲಿ ನಿಗ್ರಹಿಸಲು ಲಾಕ್‌ಡೌನ್ ಅತ್ಯುತ್ತಮ ವಿಧಾನವಾಗಿತ್ತೇ?

3. ಒಂದು ವೇಳೆ ಲಾಕ್‌ಡೌನೇ ಅಂದಿನ ಸಂದರ್ಭದಲ್ಲಿ ಸೂಕ್ತವಾಗಿತ್ತು ಎನ್ನುವುದಾದರೆ, ಭಾರತವು ಅದಕ್ಕೆ ಸೂಕ್ತವಾದ ಯೋಜನೆ ಮಾಡಿಕೊಂಡಿತ್ತೇ?

4. ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರಿಯಾಗಿತ್ತೇ?

5. ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಪರೀಕ್ಷೆಗಳ (ಟೆಸ್ಟ್) ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಯಿತೇ?

6. ಲಾಕ್‌ಡೌನ್ ಸಡಿಲಿಸಿದಾಗ ದಿಢೀರನೆ ಹೆಚ್ಚಾಗುವ ಕೊರೊನಾ ಕೇಸುಗಳನ್ನು ಎದುರಿಸಲು ವೈದ್ಯಕೀಯ ವ್ಯವಸ್ಥೆ ಸಜ್ಜಾಗಿದೆಯೇ? ಆಗಿದ್ದರೆ ಎಷ್ಟರಮಟ್ಟಿಗೆ ಆಗಿದೆ?

7. ವೈದ್ಯಕೀಯ ವ್ಯವಸ್ಥೆಯ ಸಿದ್ಧತೆಯ ವಿಚಾರದಲ್ಲಿ ಕರ್ನಾಟಕ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ?

8. ಟೆಸ್ಟ್‌ಗಳನ್ನು ಮಾಡುವ ವಿಚಾರದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಹೇಗಿದೆ?

9. ಕರ್ನಾಟಕವು ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಒಟ್ಟಾರೆ ಕ್ರಮಗಳು ಯಾವ ಪ್ರಮಾಣದ ಯಶಸ್ಸನ್ನು ತಂದಿದೆ?

10. ಇವೆಲ್ಲದರ ಆಧಾರದ ಮೇಲೆ ನಾವು ಯಾವ ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಡಬಹುದು?

ಇವೆಲ್ಲಕ್ಕೂ ಸ್ಪಷ್ಟವಾದ ವೈಜ್ಞಾನಿಕವಾದ (ಅಂದರೆ ಅಧ್ಯಯನ ಮತ್ತು ನಿರ್ದಿಷ್ಟ ಅನುಭವದಿಂದ ಸಿದ್ಧವಾದ) ಸಂಗತಿಗಳ ಮೇಲೆಯೇ ತೀರ್ಮಾನಕ್ಕೆ ಬರಬೇಕು. ಅಂತಹ ಅಧ್ಯಯನವು ಈಗಾಗಲೇ ಆರಂಭವಾಗಿದ್ದು, ಇದರಲ್ಲಿ ಕೈ ಜೋಡಿಸಬಹುದಾದವರೆಲ್ಲರಿಗೆ ಸ್ವಾಗತ.

ಆಸಕ್ತರು [email protected], [email protected] ಈ ಇಮೇಲ್‌ಗಳನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....