Homeಮುಖಪುಟಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

ಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

- Advertisement -
- Advertisement -

(ಮೊದಮೊದಲು ಯಾರಿಗೂ ಈ ಕೊರೊನಾ ಎದುರಿಸುವ ನಿರ್ದಿಷ್ಟ ಬಗೆ ಗೊತ್ತಿರಲಿಲ್ಲ ಎಂಬುದು ಸರಿ. ಹಾಗಾಗಿ ಎಲ್ಲವನ್ನೂ ಪ್ರಯೋಗ ಮಾಡಿಯೇ ಕಲಿಯಬೇಕಿತ್ತು. ಆದರೆ, ಈಗ ಎಷ್ಟೋ ದೇಶಗಳ ಎಷ್ಟೋ ಬಗೆಯ ಪ್ರಯೋಗಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಪಾಠಗಳು ಸಿಕ್ಕಿವೆ. ಭಾರತದ್ದೂ ಅನುಭವ ಈಗ ದಕ್ಕಿದೆ. ಈಗಲೂ ಗೊತ್ತಿರದ ಸಂಗತಿಗಳಿದ್ದಾವಾದರೂ, ಗೊತ್ತಿರುವ ಅಂಶಗಳ ಆಧಾರದ ಮೇಲೆ ಯಾವ ಅಭಿಪ್ರಾಯಗಳಿಗೆ ಬರಲಾಯಿತು ಎಂದೂ ಹೇಳಬೇಕಾದವರು ಹೇಳುತ್ತಿಲ್ಲ. ಹಾಗಾಗಿ ಈಗ ಅನುಸರಿಸಲಾಗುತ್ತಿರುವ ದಾರಿ ಎಷ್ಟು ಸರಿ ಎಷ್ಟು ತಪ್ಪು ಎಂದೂ ಹೇಳಲಾಗುತ್ತಿಲ್ಲ.)

ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ಭಾಗಗಳ ಅನುಭವಗಳನ್ನು ಒಂದೆಡೆ ತಂದು, ಈ ಕುರಿತು ವಿವಿಧ ತಜ್ಞರು ಏನು ಹೇಳಿದ್ದಾರೆಂಬುದನ್ನೂ ನಿಕಷಕ್ಕೆ ಒಡ್ಡಿ ಖಚಿತವಾದ ಕೆಲವು ಅಭಿಪ್ರಾಯಗಳಿಗೆ ಬರಬೇಕಿದೆ. ಗಮನಿಸಿ: ನಾವು ನಮ್ಮ ತರ್ಕ ಬುದ್ಧಿಯನ್ನು ಒಂದಷ್ಟು ಬಳಸಬಹುದಾದರೂ ಅಂತಿಮವಾಗಿ ತಜ್ಞರ ಅನಿಸಿಕೆಗಳ ಆಧಾರದ ಮೇಲೆಯೇ ತೀರ್ಮಾನಿಸಬೇಕು. ನಮಗೆ ಇನ್ನೂ ಸ್ಪಷ್ಟವಾಗಿರದುದರ ಕುರಿತು ಕೆಲವು ಪ್ರಶ್ನೆಗಳನ್ನು ಇಲ್ಲಿ ಹಾಕಿಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ನೀವೂ ಭಾಗಿಯಾಗುತ್ತಾ ಹೋದರೆ, ಭಾರತವು ಕೊರೊನಾವನ್ನು ಹೇಗೆ ಎದುರಿಸಬೇಕು ಎಂಬುದು ನಿಮಗೂ ಗೊತ್ತಾಗುತ್ತದೆ. ಅಂತಿಮವಾಗಿ ಭಾರತೀಯರಾದ ನಾವು ಸಮಷ್ಟಿ ತಿಳುವಳಿಕೆಯಿಂದ ಕೊರೊನಾವನ್ನು ಎದುರಿಸಿ ಗೆಲ್ಲಲು ಸಾಧ್ಯವಾಗಬೇಕು ಎಂಬುದೇ ಈ ಅಧ್ಯಯನದ ಆಶಯ)

ದೇಶವು ಮಾರ್ಚ್ 24ರಿಂದ ಇಲ್ಲಿಯವರೆಗೆ ಮೂರು ಸಾರಿ ವಿಸ್ತರಣೆಯಾದ ಲಾಕ್‌ಡೌನ್‌ಅನ್ನು ಅನುಭವಿಸಿದೆ. ಮೇ 17ರಂದು ಅದು ಬಹಳಷ್ಟು ಸಡಿಲವಾಗಿದೆ.  ಪ್ರಧಾನಿಗಳು ‘ಹೊಸ ನಿಯಮಗಳೊಂದಿಗೆ 4ನೇ ಬಗೆಯ ಲಾಕ್‌ಡೌನ್’ ಮುಂದುವರೆಯಲಿದೆ ಎಂದು ಹೇಳಿದಾಗ, ಮುಂದಿನ ದಿನಗಳು ಹೇಗಿರುತ್ತವೆ ಎಂಬುದು ಅಸ್ಪಷ್ಟವಾಗಿ ಇತ್ತಾದರೂ, ಈಗ ಅದು ಹೆಚ್ಚಿನಂಶ ಸಡಿಲವಾಗುವ ಲಕ್ಷಣಗಳು ಕಂಡು ಬಂದಿದೆ. ಪ್ರಪಂಚದಾದ್ಯಂತ ಹಲವು ದೇಶಗಳು ವಿವಿಧ ರೀತಿಯ ಲಾಕ್‌ಡೌನ್‌ಅನ್ನು ಜಾರಿಗೊಳಿಸಿದ್ದವು. ಅಂತಿಮವಾಗಿ ಈ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬೇರೆ ಬೇರೆ ಮಟ್ಟದ ಯಶಸ್ಸಿನೊಂದಿಗೆ ಲಾಕ್‌ಡೌನ್‌ನಿಂದ ಹೊರಬರುತ್ತಿವೆ.

ಭಾರತದಲ್ಲಿ ಬಹಳಷ್ಟು ಸಂಕಷ್ಟ, ಒತ್ತಡ, ಸಾವು ಮತ್ತು ಹಸಿವನ್ನು ಈ ಅವಧಿಯಲ್ಲಿ ನಾವು ನೋಡಿದೆವು. ಅವೆಲ್ಲವೂ ವೈರಸ್‌ನಿಂದ ಆಗಿರಲಿಲ್ಲ. ಸಾವುಗಳು ಹೆಚ್ಚಾಗಿ ವೈರಸ್‌ನಿಂದ ಆಗಿರಬಹುದಾದರೂ, ಸಂಕಷ್ಟ ಮತ್ತು ಹಸಿವು ಲಾಕ್‌ಡೌನ್ ಅಳವಡಿಸಿದ ರೀತಿಯಿಂದಾಗಿತ್ತು. ಹಾಗಾಗಿ ಇಲ್ಲಿ ನಾವು ಹಾಕಿಕೊಳ್ಳುತ್ತಿರುವ ಪ್ರಶ್ನೆಗಳು ಕೊರೊನಾ ಸೋಂಕಿನ ನಿರ್ವಹಣೆಯ ಜೊತೆಗೆ ಲಾಕ್‌ಡೌನ್ ಕುರಿತಾಗಿಯೂ ಇರುತ್ತದೆ.

ನಾವು ಹಾಕಿಕೊಂಡಿರುವ ಪ್ರಶ್ನೆಗಳು ಇವು……

1. ಭಾರತವು ಸಾಕಷ್ಟು ಮುಂಚೆ ಸಮಯಸ್ಫೂರ್ತಿಯಿಂದ ಮಧ್ಯಪ್ರವೇಶಿಸಿತೇ?

2. ಕೋವಿಡ್ 19ಅನ್ನು ಭಾರತದಲ್ಲಿ ನಿಗ್ರಹಿಸಲು ಲಾಕ್‌ಡೌನ್ ಅತ್ಯುತ್ತಮ ವಿಧಾನವಾಗಿತ್ತೇ?

3. ಒಂದು ವೇಳೆ ಲಾಕ್‌ಡೌನೇ ಅಂದಿನ ಸಂದರ್ಭದಲ್ಲಿ ಸೂಕ್ತವಾಗಿತ್ತು ಎನ್ನುವುದಾದರೆ, ಭಾರತವು ಅದಕ್ಕೆ ಸೂಕ್ತವಾದ ಯೋಜನೆ ಮಾಡಿಕೊಂಡಿತ್ತೇ?

4. ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರಿಯಾಗಿತ್ತೇ?

5. ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಪರೀಕ್ಷೆಗಳ (ಟೆಸ್ಟ್) ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಯಿತೇ?

6. ಲಾಕ್‌ಡೌನ್ ಸಡಿಲಿಸಿದಾಗ ದಿಢೀರನೆ ಹೆಚ್ಚಾಗುವ ಕೊರೊನಾ ಕೇಸುಗಳನ್ನು ಎದುರಿಸಲು ವೈದ್ಯಕೀಯ ವ್ಯವಸ್ಥೆ ಸಜ್ಜಾಗಿದೆಯೇ? ಆಗಿದ್ದರೆ ಎಷ್ಟರಮಟ್ಟಿಗೆ ಆಗಿದೆ?

7. ವೈದ್ಯಕೀಯ ವ್ಯವಸ್ಥೆಯ ಸಿದ್ಧತೆಯ ವಿಚಾರದಲ್ಲಿ ಕರ್ನಾಟಕ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ?

8. ಟೆಸ್ಟ್‌ಗಳನ್ನು ಮಾಡುವ ವಿಚಾರದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಹೇಗಿದೆ?

9. ಕರ್ನಾಟಕವು ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಒಟ್ಟಾರೆ ಕ್ರಮಗಳು ಯಾವ ಪ್ರಮಾಣದ ಯಶಸ್ಸನ್ನು ತಂದಿದೆ?

10. ಇವೆಲ್ಲದರ ಆಧಾರದ ಮೇಲೆ ನಾವು ಯಾವ ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಡಬಹುದು?

ಇವೆಲ್ಲಕ್ಕೂ ಸ್ಪಷ್ಟವಾದ ವೈಜ್ಞಾನಿಕವಾದ (ಅಂದರೆ ಅಧ್ಯಯನ ಮತ್ತು ನಿರ್ದಿಷ್ಟ ಅನುಭವದಿಂದ ಸಿದ್ಧವಾದ) ಸಂಗತಿಗಳ ಮೇಲೆಯೇ ತೀರ್ಮಾನಕ್ಕೆ ಬರಬೇಕು. ಅಂತಹ ಅಧ್ಯಯನವು ಈಗಾಗಲೇ ಆರಂಭವಾಗಿದ್ದು, ಇದರಲ್ಲಿ ಕೈ ಜೋಡಿಸಬಹುದಾದವರೆಲ್ಲರಿಗೆ ಸ್ವಾಗತ.

ಆಸಕ್ತರು [email protected], [email protected] ಈ ಇಮೇಲ್‌ಗಳನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...