Homeಮುಖಪುಟಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

ಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

- Advertisement -
- Advertisement -

(ಮೊದಮೊದಲು ಯಾರಿಗೂ ಈ ಕೊರೊನಾ ಎದುರಿಸುವ ನಿರ್ದಿಷ್ಟ ಬಗೆ ಗೊತ್ತಿರಲಿಲ್ಲ ಎಂಬುದು ಸರಿ. ಹಾಗಾಗಿ ಎಲ್ಲವನ್ನೂ ಪ್ರಯೋಗ ಮಾಡಿಯೇ ಕಲಿಯಬೇಕಿತ್ತು. ಆದರೆ, ಈಗ ಎಷ್ಟೋ ದೇಶಗಳ ಎಷ್ಟೋ ಬಗೆಯ ಪ್ರಯೋಗಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಪಾಠಗಳು ಸಿಕ್ಕಿವೆ. ಭಾರತದ್ದೂ ಅನುಭವ ಈಗ ದಕ್ಕಿದೆ. ಈಗಲೂ ಗೊತ್ತಿರದ ಸಂಗತಿಗಳಿದ್ದಾವಾದರೂ, ಗೊತ್ತಿರುವ ಅಂಶಗಳ ಆಧಾರದ ಮೇಲೆ ಯಾವ ಅಭಿಪ್ರಾಯಗಳಿಗೆ ಬರಲಾಯಿತು ಎಂದೂ ಹೇಳಬೇಕಾದವರು ಹೇಳುತ್ತಿಲ್ಲ. ಹಾಗಾಗಿ ಈಗ ಅನುಸರಿಸಲಾಗುತ್ತಿರುವ ದಾರಿ ಎಷ್ಟು ಸರಿ ಎಷ್ಟು ತಪ್ಪು ಎಂದೂ ಹೇಳಲಾಗುತ್ತಿಲ್ಲ.)

ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ಭಾಗಗಳ ಅನುಭವಗಳನ್ನು ಒಂದೆಡೆ ತಂದು, ಈ ಕುರಿತು ವಿವಿಧ ತಜ್ಞರು ಏನು ಹೇಳಿದ್ದಾರೆಂಬುದನ್ನೂ ನಿಕಷಕ್ಕೆ ಒಡ್ಡಿ ಖಚಿತವಾದ ಕೆಲವು ಅಭಿಪ್ರಾಯಗಳಿಗೆ ಬರಬೇಕಿದೆ. ಗಮನಿಸಿ: ನಾವು ನಮ್ಮ ತರ್ಕ ಬುದ್ಧಿಯನ್ನು ಒಂದಷ್ಟು ಬಳಸಬಹುದಾದರೂ ಅಂತಿಮವಾಗಿ ತಜ್ಞರ ಅನಿಸಿಕೆಗಳ ಆಧಾರದ ಮೇಲೆಯೇ ತೀರ್ಮಾನಿಸಬೇಕು. ನಮಗೆ ಇನ್ನೂ ಸ್ಪಷ್ಟವಾಗಿರದುದರ ಕುರಿತು ಕೆಲವು ಪ್ರಶ್ನೆಗಳನ್ನು ಇಲ್ಲಿ ಹಾಕಿಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ನೀವೂ ಭಾಗಿಯಾಗುತ್ತಾ ಹೋದರೆ, ಭಾರತವು ಕೊರೊನಾವನ್ನು ಹೇಗೆ ಎದುರಿಸಬೇಕು ಎಂಬುದು ನಿಮಗೂ ಗೊತ್ತಾಗುತ್ತದೆ. ಅಂತಿಮವಾಗಿ ಭಾರತೀಯರಾದ ನಾವು ಸಮಷ್ಟಿ ತಿಳುವಳಿಕೆಯಿಂದ ಕೊರೊನಾವನ್ನು ಎದುರಿಸಿ ಗೆಲ್ಲಲು ಸಾಧ್ಯವಾಗಬೇಕು ಎಂಬುದೇ ಈ ಅಧ್ಯಯನದ ಆಶಯ)

ದೇಶವು ಮಾರ್ಚ್ 24ರಿಂದ ಇಲ್ಲಿಯವರೆಗೆ ಮೂರು ಸಾರಿ ವಿಸ್ತರಣೆಯಾದ ಲಾಕ್‌ಡೌನ್‌ಅನ್ನು ಅನುಭವಿಸಿದೆ. ಮೇ 17ರಂದು ಅದು ಬಹಳಷ್ಟು ಸಡಿಲವಾಗಿದೆ.  ಪ್ರಧಾನಿಗಳು ‘ಹೊಸ ನಿಯಮಗಳೊಂದಿಗೆ 4ನೇ ಬಗೆಯ ಲಾಕ್‌ಡೌನ್’ ಮುಂದುವರೆಯಲಿದೆ ಎಂದು ಹೇಳಿದಾಗ, ಮುಂದಿನ ದಿನಗಳು ಹೇಗಿರುತ್ತವೆ ಎಂಬುದು ಅಸ್ಪಷ್ಟವಾಗಿ ಇತ್ತಾದರೂ, ಈಗ ಅದು ಹೆಚ್ಚಿನಂಶ ಸಡಿಲವಾಗುವ ಲಕ್ಷಣಗಳು ಕಂಡು ಬಂದಿದೆ. ಪ್ರಪಂಚದಾದ್ಯಂತ ಹಲವು ದೇಶಗಳು ವಿವಿಧ ರೀತಿಯ ಲಾಕ್‌ಡೌನ್‌ಅನ್ನು ಜಾರಿಗೊಳಿಸಿದ್ದವು. ಅಂತಿಮವಾಗಿ ಈ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬೇರೆ ಬೇರೆ ಮಟ್ಟದ ಯಶಸ್ಸಿನೊಂದಿಗೆ ಲಾಕ್‌ಡೌನ್‌ನಿಂದ ಹೊರಬರುತ್ತಿವೆ.

ಭಾರತದಲ್ಲಿ ಬಹಳಷ್ಟು ಸಂಕಷ್ಟ, ಒತ್ತಡ, ಸಾವು ಮತ್ತು ಹಸಿವನ್ನು ಈ ಅವಧಿಯಲ್ಲಿ ನಾವು ನೋಡಿದೆವು. ಅವೆಲ್ಲವೂ ವೈರಸ್‌ನಿಂದ ಆಗಿರಲಿಲ್ಲ. ಸಾವುಗಳು ಹೆಚ್ಚಾಗಿ ವೈರಸ್‌ನಿಂದ ಆಗಿರಬಹುದಾದರೂ, ಸಂಕಷ್ಟ ಮತ್ತು ಹಸಿವು ಲಾಕ್‌ಡೌನ್ ಅಳವಡಿಸಿದ ರೀತಿಯಿಂದಾಗಿತ್ತು. ಹಾಗಾಗಿ ಇಲ್ಲಿ ನಾವು ಹಾಕಿಕೊಳ್ಳುತ್ತಿರುವ ಪ್ರಶ್ನೆಗಳು ಕೊರೊನಾ ಸೋಂಕಿನ ನಿರ್ವಹಣೆಯ ಜೊತೆಗೆ ಲಾಕ್‌ಡೌನ್ ಕುರಿತಾಗಿಯೂ ಇರುತ್ತದೆ.

ನಾವು ಹಾಕಿಕೊಂಡಿರುವ ಪ್ರಶ್ನೆಗಳು ಇವು……

1. ಭಾರತವು ಸಾಕಷ್ಟು ಮುಂಚೆ ಸಮಯಸ್ಫೂರ್ತಿಯಿಂದ ಮಧ್ಯಪ್ರವೇಶಿಸಿತೇ?

2. ಕೋವಿಡ್ 19ಅನ್ನು ಭಾರತದಲ್ಲಿ ನಿಗ್ರಹಿಸಲು ಲಾಕ್‌ಡೌನ್ ಅತ್ಯುತ್ತಮ ವಿಧಾನವಾಗಿತ್ತೇ?

3. ಒಂದು ವೇಳೆ ಲಾಕ್‌ಡೌನೇ ಅಂದಿನ ಸಂದರ್ಭದಲ್ಲಿ ಸೂಕ್ತವಾಗಿತ್ತು ಎನ್ನುವುದಾದರೆ, ಭಾರತವು ಅದಕ್ಕೆ ಸೂಕ್ತವಾದ ಯೋಜನೆ ಮಾಡಿಕೊಂಡಿತ್ತೇ?

4. ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರಿಯಾಗಿತ್ತೇ?

5. ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಪರೀಕ್ಷೆಗಳ (ಟೆಸ್ಟ್) ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಯಿತೇ?

6. ಲಾಕ್‌ಡೌನ್ ಸಡಿಲಿಸಿದಾಗ ದಿಢೀರನೆ ಹೆಚ್ಚಾಗುವ ಕೊರೊನಾ ಕೇಸುಗಳನ್ನು ಎದುರಿಸಲು ವೈದ್ಯಕೀಯ ವ್ಯವಸ್ಥೆ ಸಜ್ಜಾಗಿದೆಯೇ? ಆಗಿದ್ದರೆ ಎಷ್ಟರಮಟ್ಟಿಗೆ ಆಗಿದೆ?

7. ವೈದ್ಯಕೀಯ ವ್ಯವಸ್ಥೆಯ ಸಿದ್ಧತೆಯ ವಿಚಾರದಲ್ಲಿ ಕರ್ನಾಟಕ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ?

8. ಟೆಸ್ಟ್‌ಗಳನ್ನು ಮಾಡುವ ವಿಚಾರದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಹೇಗಿದೆ?

9. ಕರ್ನಾಟಕವು ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಒಟ್ಟಾರೆ ಕ್ರಮಗಳು ಯಾವ ಪ್ರಮಾಣದ ಯಶಸ್ಸನ್ನು ತಂದಿದೆ?

10. ಇವೆಲ್ಲದರ ಆಧಾರದ ಮೇಲೆ ನಾವು ಯಾವ ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಡಬಹುದು?

ಇವೆಲ್ಲಕ್ಕೂ ಸ್ಪಷ್ಟವಾದ ವೈಜ್ಞಾನಿಕವಾದ (ಅಂದರೆ ಅಧ್ಯಯನ ಮತ್ತು ನಿರ್ದಿಷ್ಟ ಅನುಭವದಿಂದ ಸಿದ್ಧವಾದ) ಸಂಗತಿಗಳ ಮೇಲೆಯೇ ತೀರ್ಮಾನಕ್ಕೆ ಬರಬೇಕು. ಅಂತಹ ಅಧ್ಯಯನವು ಈಗಾಗಲೇ ಆರಂಭವಾಗಿದ್ದು, ಇದರಲ್ಲಿ ಕೈ ಜೋಡಿಸಬಹುದಾದವರೆಲ್ಲರಿಗೆ ಸ್ವಾಗತ.

ಆಸಕ್ತರು [email protected], [email protected] ಈ ಇಮೇಲ್‌ಗಳನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...