Homeಕರೋನಾ ತಲ್ಲಣಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

ಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

- Advertisement -
- Advertisement -

‘ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೇಯೇ ಹಳ್ಳ ಹಿಡಿದಿದೆ ಎಂಬುದು ಸಾಬೀತಾಗುತ್ತಿದೆ’ ಎಂದು ಅದೇ ತಾನೇ ಕೋವಿಡ್ ಕೇರ್ ಸೆಂಟರ್‌ನಿಂದ ಹೊರಬಂದ ಧಾರವಾಡದ ಸರ್ಕಾರಿ ವೈದ್ಯರೊಬ್ಬರು ತುಂಬ ಕಳವಳದಲ್ಲಿ ನಾನುಗೌರಿ.ಕಾಂಗೆ ಹೇಳಿದರು.

ಈಗ ಕೋವಿಡ್ ಎರಡನೇ ಅಲೆ ಹಳ್ಳಿಗಳಿಗೆ ದಾಳಿ ಇಟ್ಟಿದೆ. ಇದೇನೂ ಅನಿರೀಕ್ಷಿತವಲ್ಲ. ನಮ್ಮ ಪ್ರಭುತ್ವ ತೋರಿದ ಹೊಣೆಗೇಡಿತನವೇ ಇದಕ್ಕೆ ಕಾರಣ. ಉತ್ತರಪ್ರದೇಶ, ಬಿಹಾರ್ ರಾಜ್ಯಗಳ ಕೋವಿಡ್ ಶವಗಳು ಗಂಗೆಯಲ್ಲಿ ತೇಲಿ ಹೋಗಿದ್ದು ಕಣ್ಣಿಗೆ ರಾಚಿ ಹೋದ ದೃಶ್ಯಗಳಾಗಿದ್ದವು. ಪ್ರಧಾನಿ ಕೂಡ ಅತ್ತಂತೆ ಮಾಡಿದರು. ಆದರೆ ಇಲ್ಲಿ ಕರ್ನಾಟಕದ ಹಳ್ಳಿಗಳಲ್ಲಿ ಕೋವಿಡ್ ಸಾವುಗಳು ವರದಿಯಾಗದೇ ಹೋಗುತ್ತಿವೆ.

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳನ್ನು ಸುತ್ತಿದ ಪ್ರಜಾವಾಣಿ ವರದಿಗಾರ ಮನೋಜ್ ಕುಮಾರ್ ಗುದ್ದಿ, ‘ಹಳ್ಳಿಗಳಲ್ಲಿ ಪರೀಕ್ಷೆಯೇ ಆಗ್ತಿಲ್ಲ. ಲಸಿಕೆಯಂತೂ ದೂರದ ಮಾತು. ಕೋವಿಡ್‌ಗೆ ಅಪ್ಪ ಸತ್ತರೆ ಅಂತ್ಯಸಂಸ್ಕಾರ ಮಾಡಲು ಮಗನಿಲ್ಲ. ಏಕೆಂದರೆ ಆತನೂ ಕೋವಿಡ್ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಂದೇ ಕುಟುಂಬದಲ್ಲಿ 3-4 ಕೋವಿಡ್ ಸಾವು ಸಂಭವಿಸುತ್ತಿವೆ. ಪರಿಸ್ಥಿತಿ ಭೀಕರವಾಗಿದೆ’ ಎಂದು ನಾನುಗೌರಿ. ಕಾಂಗೆ ತಿಳಿಸಿದರು.

ಇತ್ತೀಚೆಗೆ ಪ್ರಮುಖ ದಿನಪತ್ರಿಕೆಯಲ್ಲಿ ಬಂದ ಸುದ್ದಿಯನ್ನು ಉಲ್ಲೇಖಿಸಿದ ಧಾರವಾಡದ ಸರ್ಕಾರಿ ವೈದ್ಯರು, ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಕಳೆದ 15 ದಿನಗಳಲ್ಲಿ 60 ಸಾವು ಸಂಭವಿಸಿವೆ. ಇದರಲ್ಲಿ ಕೇವಲ 4 ಸಾವುಗಳನ್ನು ಕೋವಿಡ್ ಸಾವುಗಳು ಎಂದು ದಾಖಲಿಸಲಾಗಿದೆ. ಇದನ್ನು ನಂಬಲಾಗುತ್ತದೆಯೇ? ಕೋವಿಡ್ ಸಂಬಂಧಕ್ಕೇ ಹೃದಯಾಘಾತ ಹೊಂದಿದವರ ಸಾವನ್ನು ಹೃದಯಾಘಾತ ಪಟ್ಟಿಯಲ್ಲಿ ಸೇರಿಸಲಾಗುತ್ತಿದೆ. ತಮ್ಮ ತಮ್ಮ ಜವಾಬ್ದಾರಿಗಳನ್ನು ಮರೆತ ವೈದ್ಯ ಸಿಬ್ದಂದಿ ಅಸಹಾಯಕವಾಗಿದೆಯೋ ಅಥವಾ ದಾರಿ ತಪ್ಪಿಸುತ್ತಿದೆಯೋ ಗೊತ್ತಾಗುತ್ತಿಲ್ಲ’ ಎನ್ನುತ್ತಾರೆ.

ಕಲಬುರ್ಗಿ ಕತೆ

ನಿತ್ಯ ದುಡಿದು ಮನೆಯನ್ನು ನಡೆಸುವ ಯುವಕರು, ಚಿಕ್ಕವರಿಗೆ ಮಾರ್ಗದರ್ಶನ ಮಾಡುತ್ತಿದ್ದ ಹಿರಿಯರು, ಮೊಮ್ಮಕ್ಕಳಿಗೆ ಚಂದಮಾಮನ ಕಥೆ ಹೇಳಿ ರಂಜಿಸುತ್ತಿದ್ದ ಅಜ್ಜ, ಅಜ್ಜಿ ಹೀಗೆ ಮನೆಗೆ, ಗ್ರಾಮಗಳಿಗೆ ಊರುಗೋಲಾಗಿದ್ದವರನ್ನೇ ಕೊರೋನಾದ ಎರಡನೇ ಅಲೆ ಆಪೋಶನ ತೆಗೆದುಕೊಂಡಿದೆ. ಅವರ ಬದುಕನ್ನು ನುಂಗಿ ನೀರು ಕುಡಿದಿದೆ ಎಂದು ಪ್ರಜಾವಾಣಿಯ ಮನೋಜ್ ಬರೆಯುತ್ತಾರೆ. ಹಲವಾರಿ ಹಳ್ಳಿಗಳನ್ನು ಸುತ್ತಿ ವಿಡಿಯೋ ವರದಿ ಮಾಡಿದ ಮನೋಜ್, ನಾನುಗೌರಿಯೊಂದಿಗೆ ಮಾತನಾಡುತ್ತ, 20ನೇ ಶತಮಾನದಲ್ಲಿ ಕಾಣಿಸಿಕೊಂಡ ಪ್ಲೇಗ್ ಮಹಾಮಾರಿ, 1970ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ‘ಡೌಗಿ’ ಬರದ ಬಳಿಕ ಕೊರೋನಾ ಹಾವಳಿಯಿಂದಾಗಿ ಇಷ್ಟೊಂದು ಸಾವುಗಳು ಸಂಭವಿಸಿದ್ದರಿಂದ ಗ್ರಾಮಗಳು ಅಕ್ಷರಶಃ ತತ್ತರಿಸಿ ಹೋಗಿವೆ’ ಎನ್ನುತ್ತಾರೆ.

ಆಳಂದ ತಾಲ್ಲೂಕಿನ ಗಡಿ ಗ್ರಾಮಗಳಾದ ಆಳಂಗಾ, ಖಜೂರಿ, ಅಫಜಲಪುರ ತಾಲ್ಲೂಕಿನ ಬಂದರವಾಡ, ಗೊಬ್ಬುರ (ಬಿ), ಚೌಡಾಪುರ, ಕಲಬುರ್ಗಿ ತಾಲ್ಲೂಕಿನ ಸಣ್ಣೂರ, ಹಾಗರಗಾ, ದಾರ್ಯ ನಾಯಕ ತಾಂಡಾ, ಖಾಜಾ ಕೋಟನೂರ, ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ, ಮಾಡಬೂಳ, ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಸೇಡಂ ತಾಲ್ಲೂಕಿನ ಮಳಖೇಡ, ರಾಜಶ್ರೀ ಸಿಮೆಂಟ್ ಕಾರ್ಖಾನೆಗೆ ಹೊಂದಿಕೊಂಡಂತಿರುವ ಹೂಡಾ (ಬಿ) ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಸಂಬಂಧಿಕರು, ನೆರೆ ಹೊರೆಯವರನ್ನು ಕಳೆದುಕೊಂಡ ದುಃಖ, ಬೇಸರ ಕುದಿ ಮೌನದ ರೂಪದಲ್ಲಿದೆ ಎಂದು ಮನೋಜ್ ನಮಗೆ ತಿಳಿಸಿದರು.

ವಿಚಿತ್ರ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೋವಿಡ್‌ನಿಂದ ಮೃತಪಟ್ಟ ತಂದೆಗೆ ಅಂತ್ಯಸಂಸ್ಕಾರ ಮಾಡಬೇಕಿದ್ದ ಮಗ ಆಸ್ಪತ್ರೆಯಲ್ಲಿ ಅದೇ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾನೆ. ಪತಿ ಸತ್ತ ಸುದ್ದಿ ಪಕ್ಕದ ಕೋವಿಡ್ ವಾರ್ಡ್ನಲ್ಲಿರುವ ಪತ್ನಿಗೂ ತಿಳಿಸಲಾಗದೇ ಅಂತ್ಯಸಂಸ್ಕಾರ ಮಾಡುವ ಅನಿವಾರ್ಯತೆ ಎದುರಾಗಿದೆ ಈಗ.
3 ಸಾವಿರ ಜನಸಂಖ್ಯೆ ಹೊಂದಿರುವ ಪುಟ್ಟ ಊರಲ್ಲಿ ಒಂದೇ ದಿನ ನಾಲ್ಕು ಜನ ತೀರಿಕೊಂಡ, ಬೆಳಿಗ್ಗೆ ತಂದೆ, ಸಂಜೆ ಮಗ ತೀರಿಕೊಂಡ, ಸ್ವತಃ ವೈದ್ಯ ಪತಿಯ ಕಣ್ಣೆದುರೇ ಉಸಿರುಗಟ್ಟಿ ಅಪಾರ ಯಾತನೆಯಿಂದ ಪತ್ನಿ ಮೃತಪಟ್ಟ ಉದಾಹರಣೆಗಳೂ ಇವೆ ಎನ್ನುತ್ತಾರೆ ಮನೋಜ್.

ಮಾರ್ಚ್ ಕೊನೆಯ ಹಾಗೂ ಏಪ್ರಿಲ್ ಮೊದಲ ವಾರದಲ್ಲಿ ಜಿಲ್ಲೆಯ ಗ್ರಾಮಗಳಿಗೆ ಹರಡಿದ ಕೊರೋನಾ ಸೋಂಕು ಸದ್ದಿಲ್ಲದೇ ಜನರ ಸಾವಿಗೆ ಕಾರಣವಾಯಿತು. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಆಳಂದ, ಅಫಜಲಪುರ ತಾಲ್ಲೂಕುಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಯಿತಾದರೂ ಕಟ್ಟುನಿಟ್ಟಿನ ತಪಾಸಣೆ ನಡೆಯಲಿಲ್ಲ. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಎಷ್ಟೋ ಸಂದರ್ಭಗಳಲ್ಲಿ ಜಿಲ್ಲೆಗೆ ಪ್ರವೇಶ ನೀಡಲಾಯಿತು.

ಅಲ್ಲಿ ಏರುಗತಿ, ಇಲ್ಲಿ ಚೆಕಿಂಗ್ ಇಲ್ಲ!

ಕಲಬುರಗಿ ಜಿಲ್ಲೆಯ ಕೆಲಭಾಗ ಮಹಾರಾಷ್ಟ್ರದ ಗಡಿಗಳಿಗೆ ಹೊಂದಿಕೊಂಡಿದೆ ಮತ್ತು ಎರಡೂ ಕಡೆ ಕೊಡಕೊಳ್ಳುವ ಸಂಬಂಧವಿದೆ. ಇಲ್ಲಿಯವರು ಅಲ್ಲಿ, ಅಲ್ಲಿನವರು ಇಲ್ಲಿ ಕೆಲಸ ಮಾಡುತ್ತಾರೆ. ಜೊತೆಗೆ ವೈವಾಹಿಕ ಸಂಬಂಧಗಳಂತೂ ಸಹಜವಾಗಿವೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಏರುಗತಿಯಲ್ಲಿದ್ದ ಸಂದರ್ಭದಲ್ಲಿಯೂ ಕಲಬುರ್ಗಿ ಜಿಲ್ಲೆಗೆ ಬರುವ ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಇಲ್ಲಿಂದ ಪ್ರಯಾಣ ಆರಂಭಿಸಿ ವಾಪಸ್ ಜಿಲ್ಲೆಗೆ ಮುಂಬೈ, ಪುಣೆಯಲ್ಲಿದ್ದ ಜನರನ್ನು ಕರೆತಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತಪಾಸಣೆ ಮಾಡಲೇ ಇಲ್ಲ.
ಆಳಂದ ತಾಲ್ಲೂಕಿನ ಗಡಿ ಗ್ರಾಮ ಖಜೂರಿ ಚೆಕ್‌ಪೋಸ್ಟ್‌ನಲ್ಲಿ ಹೇಳಿಕೊಳ್ಳುವಂಥ ಕಟ್ಟುನಿಟ್ಟು ಕಂಡು ಬರಲೇ ಇಲ್ಲ.

ಧಾರವಾಡ ಮತ್ತು ಬೆಳಗಾವಿ ಕೂಡ ಮಹಾರಾಷ್ಟ್ರದ ಜೊತೆ ಗಡಿ ಹಂಚಿಕೊಂಡಿವೆ ಮತ್ತು ಆಪ್ತ ಸಂಬಂಧಗಳನ್ನು ಹೊಂದಿವೆ ಎಂಬುದನ್ನು ಇಲ್ಲಿ ನೆನಪಿಡಬೇಕು. ಹತ್ತು ದಿನಗಳ ಹಿಂದೆ ಮುಂಬೈ ಕರ್ನಾಟಕದಲ್ಲಿ ಸುತ್ತಾಡಿ ಹೋದ ಆರೋಗ್ಯ ಸಚಿವರಿಗೆ ಈ ಖಬರು ಇಲ್ಲವೇ ಇಲ್ಲ.
ಇದು ಕೇವಲ ಧಾರವಾಡ, ಕಲಬುರಗಿ ವಿಷಯವಷ್ಟೇ ಅಲ್ಲ, ರಾಜ್ಯದ ಬಹುಪಾಲು ಜಿಲ್ಲೆಗಳ ಹಳ್ಳಿಗಳಿಗೆ ಕೋವಿಡ್ ಎರಡನೇ ಅಲೆ ದಾಳಿ ಇಟ್ಟಿದೆ. ಹಳ್ಳಿಗಳಲ್ಲಿ ಸಂಭವಿಸುತ್ತಿರುವ ಸಾವುಗಳು ಕೋವಿಡ್ ಸಾವು ಎಂದು ಕೌಂಟ್ ಆಗುತ್ತಿಲ್ಲ. ಒಮ್ಮಿಂದೊಮ್ಮೇಲೆ ಒಂದು ಹಳ್ಳಿಯಲ್ಲಿ ಸಾವಿನ ಸಂಖ್ಯೆ ಏರತೊಡಗಿದರೆ, ಅದು ಕೋವಿಡ್ಡೋ ಅಥವಾ ಇನ್ನೊಂದೋ ಆಗಿರಲಿ, ಸರ್ಕಾರದ ಆರೋಗ್ಯ ವ್ಯವಸ್ಥೆ ಗಮನ ಹರಿಸಬೇಕಲ್ಲವೇ?

ಜನರೇ ಜಾಗೃತರಾಗಬೇಕು. ಈ ಕೊಳಕು ವ್ಯವಸ್ಥೆಯಿಂದ ಮೂರನೇ ಅಲೆಯೂ ಬರಲಿದೆ, ನಮ್ಮ ಮಕ್ಕಳನ್ನಾದರೂ ಕಾಪಾಡಿಕೊಳ್ಳೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ:ಲಾಕ್‌ಡೌನ್‌ನ ನೀರವ ಮೌನ ಮತ್ತು ಸಾಂಕ್ರಾಮಿಕದ ಶೋಕ ಗೀತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...