Homeಕರೋನಾ ತಲ್ಲಣಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

ಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

- Advertisement -
- Advertisement -

‘ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೇಯೇ ಹಳ್ಳ ಹಿಡಿದಿದೆ ಎಂಬುದು ಸಾಬೀತಾಗುತ್ತಿದೆ’ ಎಂದು ಅದೇ ತಾನೇ ಕೋವಿಡ್ ಕೇರ್ ಸೆಂಟರ್‌ನಿಂದ ಹೊರಬಂದ ಧಾರವಾಡದ ಸರ್ಕಾರಿ ವೈದ್ಯರೊಬ್ಬರು ತುಂಬ ಕಳವಳದಲ್ಲಿ ನಾನುಗೌರಿ.ಕಾಂಗೆ ಹೇಳಿದರು.

ಈಗ ಕೋವಿಡ್ ಎರಡನೇ ಅಲೆ ಹಳ್ಳಿಗಳಿಗೆ ದಾಳಿ ಇಟ್ಟಿದೆ. ಇದೇನೂ ಅನಿರೀಕ್ಷಿತವಲ್ಲ. ನಮ್ಮ ಪ್ರಭುತ್ವ ತೋರಿದ ಹೊಣೆಗೇಡಿತನವೇ ಇದಕ್ಕೆ ಕಾರಣ. ಉತ್ತರಪ್ರದೇಶ, ಬಿಹಾರ್ ರಾಜ್ಯಗಳ ಕೋವಿಡ್ ಶವಗಳು ಗಂಗೆಯಲ್ಲಿ ತೇಲಿ ಹೋಗಿದ್ದು ಕಣ್ಣಿಗೆ ರಾಚಿ ಹೋದ ದೃಶ್ಯಗಳಾಗಿದ್ದವು. ಪ್ರಧಾನಿ ಕೂಡ ಅತ್ತಂತೆ ಮಾಡಿದರು. ಆದರೆ ಇಲ್ಲಿ ಕರ್ನಾಟಕದ ಹಳ್ಳಿಗಳಲ್ಲಿ ಕೋವಿಡ್ ಸಾವುಗಳು ವರದಿಯಾಗದೇ ಹೋಗುತ್ತಿವೆ.

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳನ್ನು ಸುತ್ತಿದ ಪ್ರಜಾವಾಣಿ ವರದಿಗಾರ ಮನೋಜ್ ಕುಮಾರ್ ಗುದ್ದಿ, ‘ಹಳ್ಳಿಗಳಲ್ಲಿ ಪರೀಕ್ಷೆಯೇ ಆಗ್ತಿಲ್ಲ. ಲಸಿಕೆಯಂತೂ ದೂರದ ಮಾತು. ಕೋವಿಡ್‌ಗೆ ಅಪ್ಪ ಸತ್ತರೆ ಅಂತ್ಯಸಂಸ್ಕಾರ ಮಾಡಲು ಮಗನಿಲ್ಲ. ಏಕೆಂದರೆ ಆತನೂ ಕೋವಿಡ್ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಂದೇ ಕುಟುಂಬದಲ್ಲಿ 3-4 ಕೋವಿಡ್ ಸಾವು ಸಂಭವಿಸುತ್ತಿವೆ. ಪರಿಸ್ಥಿತಿ ಭೀಕರವಾಗಿದೆ’ ಎಂದು ನಾನುಗೌರಿ. ಕಾಂಗೆ ತಿಳಿಸಿದರು.

ಇತ್ತೀಚೆಗೆ ಪ್ರಮುಖ ದಿನಪತ್ರಿಕೆಯಲ್ಲಿ ಬಂದ ಸುದ್ದಿಯನ್ನು ಉಲ್ಲೇಖಿಸಿದ ಧಾರವಾಡದ ಸರ್ಕಾರಿ ವೈದ್ಯರು, ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಕಳೆದ 15 ದಿನಗಳಲ್ಲಿ 60 ಸಾವು ಸಂಭವಿಸಿವೆ. ಇದರಲ್ಲಿ ಕೇವಲ 4 ಸಾವುಗಳನ್ನು ಕೋವಿಡ್ ಸಾವುಗಳು ಎಂದು ದಾಖಲಿಸಲಾಗಿದೆ. ಇದನ್ನು ನಂಬಲಾಗುತ್ತದೆಯೇ? ಕೋವಿಡ್ ಸಂಬಂಧಕ್ಕೇ ಹೃದಯಾಘಾತ ಹೊಂದಿದವರ ಸಾವನ್ನು ಹೃದಯಾಘಾತ ಪಟ್ಟಿಯಲ್ಲಿ ಸೇರಿಸಲಾಗುತ್ತಿದೆ. ತಮ್ಮ ತಮ್ಮ ಜವಾಬ್ದಾರಿಗಳನ್ನು ಮರೆತ ವೈದ್ಯ ಸಿಬ್ದಂದಿ ಅಸಹಾಯಕವಾಗಿದೆಯೋ ಅಥವಾ ದಾರಿ ತಪ್ಪಿಸುತ್ತಿದೆಯೋ ಗೊತ್ತಾಗುತ್ತಿಲ್ಲ’ ಎನ್ನುತ್ತಾರೆ.

ಕಲಬುರ್ಗಿ ಕತೆ

ನಿತ್ಯ ದುಡಿದು ಮನೆಯನ್ನು ನಡೆಸುವ ಯುವಕರು, ಚಿಕ್ಕವರಿಗೆ ಮಾರ್ಗದರ್ಶನ ಮಾಡುತ್ತಿದ್ದ ಹಿರಿಯರು, ಮೊಮ್ಮಕ್ಕಳಿಗೆ ಚಂದಮಾಮನ ಕಥೆ ಹೇಳಿ ರಂಜಿಸುತ್ತಿದ್ದ ಅಜ್ಜ, ಅಜ್ಜಿ ಹೀಗೆ ಮನೆಗೆ, ಗ್ರಾಮಗಳಿಗೆ ಊರುಗೋಲಾಗಿದ್ದವರನ್ನೇ ಕೊರೋನಾದ ಎರಡನೇ ಅಲೆ ಆಪೋಶನ ತೆಗೆದುಕೊಂಡಿದೆ. ಅವರ ಬದುಕನ್ನು ನುಂಗಿ ನೀರು ಕುಡಿದಿದೆ ಎಂದು ಪ್ರಜಾವಾಣಿಯ ಮನೋಜ್ ಬರೆಯುತ್ತಾರೆ. ಹಲವಾರಿ ಹಳ್ಳಿಗಳನ್ನು ಸುತ್ತಿ ವಿಡಿಯೋ ವರದಿ ಮಾಡಿದ ಮನೋಜ್, ನಾನುಗೌರಿಯೊಂದಿಗೆ ಮಾತನಾಡುತ್ತ, 20ನೇ ಶತಮಾನದಲ್ಲಿ ಕಾಣಿಸಿಕೊಂಡ ಪ್ಲೇಗ್ ಮಹಾಮಾರಿ, 1970ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ‘ಡೌಗಿ’ ಬರದ ಬಳಿಕ ಕೊರೋನಾ ಹಾವಳಿಯಿಂದಾಗಿ ಇಷ್ಟೊಂದು ಸಾವುಗಳು ಸಂಭವಿಸಿದ್ದರಿಂದ ಗ್ರಾಮಗಳು ಅಕ್ಷರಶಃ ತತ್ತರಿಸಿ ಹೋಗಿವೆ’ ಎನ್ನುತ್ತಾರೆ.

ಆಳಂದ ತಾಲ್ಲೂಕಿನ ಗಡಿ ಗ್ರಾಮಗಳಾದ ಆಳಂಗಾ, ಖಜೂರಿ, ಅಫಜಲಪುರ ತಾಲ್ಲೂಕಿನ ಬಂದರವಾಡ, ಗೊಬ್ಬುರ (ಬಿ), ಚೌಡಾಪುರ, ಕಲಬುರ್ಗಿ ತಾಲ್ಲೂಕಿನ ಸಣ್ಣೂರ, ಹಾಗರಗಾ, ದಾರ್ಯ ನಾಯಕ ತಾಂಡಾ, ಖಾಜಾ ಕೋಟನೂರ, ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ, ಮಾಡಬೂಳ, ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಸೇಡಂ ತಾಲ್ಲೂಕಿನ ಮಳಖೇಡ, ರಾಜಶ್ರೀ ಸಿಮೆಂಟ್ ಕಾರ್ಖಾನೆಗೆ ಹೊಂದಿಕೊಂಡಂತಿರುವ ಹೂಡಾ (ಬಿ) ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಸಂಬಂಧಿಕರು, ನೆರೆ ಹೊರೆಯವರನ್ನು ಕಳೆದುಕೊಂಡ ದುಃಖ, ಬೇಸರ ಕುದಿ ಮೌನದ ರೂಪದಲ್ಲಿದೆ ಎಂದು ಮನೋಜ್ ನಮಗೆ ತಿಳಿಸಿದರು.

ವಿಚಿತ್ರ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೋವಿಡ್‌ನಿಂದ ಮೃತಪಟ್ಟ ತಂದೆಗೆ ಅಂತ್ಯಸಂಸ್ಕಾರ ಮಾಡಬೇಕಿದ್ದ ಮಗ ಆಸ್ಪತ್ರೆಯಲ್ಲಿ ಅದೇ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾನೆ. ಪತಿ ಸತ್ತ ಸುದ್ದಿ ಪಕ್ಕದ ಕೋವಿಡ್ ವಾರ್ಡ್ನಲ್ಲಿರುವ ಪತ್ನಿಗೂ ತಿಳಿಸಲಾಗದೇ ಅಂತ್ಯಸಂಸ್ಕಾರ ಮಾಡುವ ಅನಿವಾರ್ಯತೆ ಎದುರಾಗಿದೆ ಈಗ.
3 ಸಾವಿರ ಜನಸಂಖ್ಯೆ ಹೊಂದಿರುವ ಪುಟ್ಟ ಊರಲ್ಲಿ ಒಂದೇ ದಿನ ನಾಲ್ಕು ಜನ ತೀರಿಕೊಂಡ, ಬೆಳಿಗ್ಗೆ ತಂದೆ, ಸಂಜೆ ಮಗ ತೀರಿಕೊಂಡ, ಸ್ವತಃ ವೈದ್ಯ ಪತಿಯ ಕಣ್ಣೆದುರೇ ಉಸಿರುಗಟ್ಟಿ ಅಪಾರ ಯಾತನೆಯಿಂದ ಪತ್ನಿ ಮೃತಪಟ್ಟ ಉದಾಹರಣೆಗಳೂ ಇವೆ ಎನ್ನುತ್ತಾರೆ ಮನೋಜ್.

ಮಾರ್ಚ್ ಕೊನೆಯ ಹಾಗೂ ಏಪ್ರಿಲ್ ಮೊದಲ ವಾರದಲ್ಲಿ ಜಿಲ್ಲೆಯ ಗ್ರಾಮಗಳಿಗೆ ಹರಡಿದ ಕೊರೋನಾ ಸೋಂಕು ಸದ್ದಿಲ್ಲದೇ ಜನರ ಸಾವಿಗೆ ಕಾರಣವಾಯಿತು. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಆಳಂದ, ಅಫಜಲಪುರ ತಾಲ್ಲೂಕುಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಯಿತಾದರೂ ಕಟ್ಟುನಿಟ್ಟಿನ ತಪಾಸಣೆ ನಡೆಯಲಿಲ್ಲ. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಎಷ್ಟೋ ಸಂದರ್ಭಗಳಲ್ಲಿ ಜಿಲ್ಲೆಗೆ ಪ್ರವೇಶ ನೀಡಲಾಯಿತು.

ಅಲ್ಲಿ ಏರುಗತಿ, ಇಲ್ಲಿ ಚೆಕಿಂಗ್ ಇಲ್ಲ!

ಕಲಬುರಗಿ ಜಿಲ್ಲೆಯ ಕೆಲಭಾಗ ಮಹಾರಾಷ್ಟ್ರದ ಗಡಿಗಳಿಗೆ ಹೊಂದಿಕೊಂಡಿದೆ ಮತ್ತು ಎರಡೂ ಕಡೆ ಕೊಡಕೊಳ್ಳುವ ಸಂಬಂಧವಿದೆ. ಇಲ್ಲಿಯವರು ಅಲ್ಲಿ, ಅಲ್ಲಿನವರು ಇಲ್ಲಿ ಕೆಲಸ ಮಾಡುತ್ತಾರೆ. ಜೊತೆಗೆ ವೈವಾಹಿಕ ಸಂಬಂಧಗಳಂತೂ ಸಹಜವಾಗಿವೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಏರುಗತಿಯಲ್ಲಿದ್ದ ಸಂದರ್ಭದಲ್ಲಿಯೂ ಕಲಬುರ್ಗಿ ಜಿಲ್ಲೆಗೆ ಬರುವ ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಇಲ್ಲಿಂದ ಪ್ರಯಾಣ ಆರಂಭಿಸಿ ವಾಪಸ್ ಜಿಲ್ಲೆಗೆ ಮುಂಬೈ, ಪುಣೆಯಲ್ಲಿದ್ದ ಜನರನ್ನು ಕರೆತಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತಪಾಸಣೆ ಮಾಡಲೇ ಇಲ್ಲ.
ಆಳಂದ ತಾಲ್ಲೂಕಿನ ಗಡಿ ಗ್ರಾಮ ಖಜೂರಿ ಚೆಕ್‌ಪೋಸ್ಟ್‌ನಲ್ಲಿ ಹೇಳಿಕೊಳ್ಳುವಂಥ ಕಟ್ಟುನಿಟ್ಟು ಕಂಡು ಬರಲೇ ಇಲ್ಲ.

ಧಾರವಾಡ ಮತ್ತು ಬೆಳಗಾವಿ ಕೂಡ ಮಹಾರಾಷ್ಟ್ರದ ಜೊತೆ ಗಡಿ ಹಂಚಿಕೊಂಡಿವೆ ಮತ್ತು ಆಪ್ತ ಸಂಬಂಧಗಳನ್ನು ಹೊಂದಿವೆ ಎಂಬುದನ್ನು ಇಲ್ಲಿ ನೆನಪಿಡಬೇಕು. ಹತ್ತು ದಿನಗಳ ಹಿಂದೆ ಮುಂಬೈ ಕರ್ನಾಟಕದಲ್ಲಿ ಸುತ್ತಾಡಿ ಹೋದ ಆರೋಗ್ಯ ಸಚಿವರಿಗೆ ಈ ಖಬರು ಇಲ್ಲವೇ ಇಲ್ಲ.
ಇದು ಕೇವಲ ಧಾರವಾಡ, ಕಲಬುರಗಿ ವಿಷಯವಷ್ಟೇ ಅಲ್ಲ, ರಾಜ್ಯದ ಬಹುಪಾಲು ಜಿಲ್ಲೆಗಳ ಹಳ್ಳಿಗಳಿಗೆ ಕೋವಿಡ್ ಎರಡನೇ ಅಲೆ ದಾಳಿ ಇಟ್ಟಿದೆ. ಹಳ್ಳಿಗಳಲ್ಲಿ ಸಂಭವಿಸುತ್ತಿರುವ ಸಾವುಗಳು ಕೋವಿಡ್ ಸಾವು ಎಂದು ಕೌಂಟ್ ಆಗುತ್ತಿಲ್ಲ. ಒಮ್ಮಿಂದೊಮ್ಮೇಲೆ ಒಂದು ಹಳ್ಳಿಯಲ್ಲಿ ಸಾವಿನ ಸಂಖ್ಯೆ ಏರತೊಡಗಿದರೆ, ಅದು ಕೋವಿಡ್ಡೋ ಅಥವಾ ಇನ್ನೊಂದೋ ಆಗಿರಲಿ, ಸರ್ಕಾರದ ಆರೋಗ್ಯ ವ್ಯವಸ್ಥೆ ಗಮನ ಹರಿಸಬೇಕಲ್ಲವೇ?

ಜನರೇ ಜಾಗೃತರಾಗಬೇಕು. ಈ ಕೊಳಕು ವ್ಯವಸ್ಥೆಯಿಂದ ಮೂರನೇ ಅಲೆಯೂ ಬರಲಿದೆ, ನಮ್ಮ ಮಕ್ಕಳನ್ನಾದರೂ ಕಾಪಾಡಿಕೊಳ್ಳೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ:ಲಾಕ್‌ಡೌನ್‌ನ ನೀರವ ಮೌನ ಮತ್ತು ಸಾಂಕ್ರಾಮಿಕದ ಶೋಕ ಗೀತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...