Homeಕರೋನಾ ತಲ್ಲಣಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

ಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

- Advertisement -
- Advertisement -

‘ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೇಯೇ ಹಳ್ಳ ಹಿಡಿದಿದೆ ಎಂಬುದು ಸಾಬೀತಾಗುತ್ತಿದೆ’ ಎಂದು ಅದೇ ತಾನೇ ಕೋವಿಡ್ ಕೇರ್ ಸೆಂಟರ್‌ನಿಂದ ಹೊರಬಂದ ಧಾರವಾಡದ ಸರ್ಕಾರಿ ವೈದ್ಯರೊಬ್ಬರು ತುಂಬ ಕಳವಳದಲ್ಲಿ ನಾನುಗೌರಿ.ಕಾಂಗೆ ಹೇಳಿದರು.

ಈಗ ಕೋವಿಡ್ ಎರಡನೇ ಅಲೆ ಹಳ್ಳಿಗಳಿಗೆ ದಾಳಿ ಇಟ್ಟಿದೆ. ಇದೇನೂ ಅನಿರೀಕ್ಷಿತವಲ್ಲ. ನಮ್ಮ ಪ್ರಭುತ್ವ ತೋರಿದ ಹೊಣೆಗೇಡಿತನವೇ ಇದಕ್ಕೆ ಕಾರಣ. ಉತ್ತರಪ್ರದೇಶ, ಬಿಹಾರ್ ರಾಜ್ಯಗಳ ಕೋವಿಡ್ ಶವಗಳು ಗಂಗೆಯಲ್ಲಿ ತೇಲಿ ಹೋಗಿದ್ದು ಕಣ್ಣಿಗೆ ರಾಚಿ ಹೋದ ದೃಶ್ಯಗಳಾಗಿದ್ದವು. ಪ್ರಧಾನಿ ಕೂಡ ಅತ್ತಂತೆ ಮಾಡಿದರು. ಆದರೆ ಇಲ್ಲಿ ಕರ್ನಾಟಕದ ಹಳ್ಳಿಗಳಲ್ಲಿ ಕೋವಿಡ್ ಸಾವುಗಳು ವರದಿಯಾಗದೇ ಹೋಗುತ್ತಿವೆ.

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳನ್ನು ಸುತ್ತಿದ ಪ್ರಜಾವಾಣಿ ವರದಿಗಾರ ಮನೋಜ್ ಕುಮಾರ್ ಗುದ್ದಿ, ‘ಹಳ್ಳಿಗಳಲ್ಲಿ ಪರೀಕ್ಷೆಯೇ ಆಗ್ತಿಲ್ಲ. ಲಸಿಕೆಯಂತೂ ದೂರದ ಮಾತು. ಕೋವಿಡ್‌ಗೆ ಅಪ್ಪ ಸತ್ತರೆ ಅಂತ್ಯಸಂಸ್ಕಾರ ಮಾಡಲು ಮಗನಿಲ್ಲ. ಏಕೆಂದರೆ ಆತನೂ ಕೋವಿಡ್ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಂದೇ ಕುಟುಂಬದಲ್ಲಿ 3-4 ಕೋವಿಡ್ ಸಾವು ಸಂಭವಿಸುತ್ತಿವೆ. ಪರಿಸ್ಥಿತಿ ಭೀಕರವಾಗಿದೆ’ ಎಂದು ನಾನುಗೌರಿ. ಕಾಂಗೆ ತಿಳಿಸಿದರು.

ಇತ್ತೀಚೆಗೆ ಪ್ರಮುಖ ದಿನಪತ್ರಿಕೆಯಲ್ಲಿ ಬಂದ ಸುದ್ದಿಯನ್ನು ಉಲ್ಲೇಖಿಸಿದ ಧಾರವಾಡದ ಸರ್ಕಾರಿ ವೈದ್ಯರು, ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಕಳೆದ 15 ದಿನಗಳಲ್ಲಿ 60 ಸಾವು ಸಂಭವಿಸಿವೆ. ಇದರಲ್ಲಿ ಕೇವಲ 4 ಸಾವುಗಳನ್ನು ಕೋವಿಡ್ ಸಾವುಗಳು ಎಂದು ದಾಖಲಿಸಲಾಗಿದೆ. ಇದನ್ನು ನಂಬಲಾಗುತ್ತದೆಯೇ? ಕೋವಿಡ್ ಸಂಬಂಧಕ್ಕೇ ಹೃದಯಾಘಾತ ಹೊಂದಿದವರ ಸಾವನ್ನು ಹೃದಯಾಘಾತ ಪಟ್ಟಿಯಲ್ಲಿ ಸೇರಿಸಲಾಗುತ್ತಿದೆ. ತಮ್ಮ ತಮ್ಮ ಜವಾಬ್ದಾರಿಗಳನ್ನು ಮರೆತ ವೈದ್ಯ ಸಿಬ್ದಂದಿ ಅಸಹಾಯಕವಾಗಿದೆಯೋ ಅಥವಾ ದಾರಿ ತಪ್ಪಿಸುತ್ತಿದೆಯೋ ಗೊತ್ತಾಗುತ್ತಿಲ್ಲ’ ಎನ್ನುತ್ತಾರೆ.

ಕಲಬುರ್ಗಿ ಕತೆ

ನಿತ್ಯ ದುಡಿದು ಮನೆಯನ್ನು ನಡೆಸುವ ಯುವಕರು, ಚಿಕ್ಕವರಿಗೆ ಮಾರ್ಗದರ್ಶನ ಮಾಡುತ್ತಿದ್ದ ಹಿರಿಯರು, ಮೊಮ್ಮಕ್ಕಳಿಗೆ ಚಂದಮಾಮನ ಕಥೆ ಹೇಳಿ ರಂಜಿಸುತ್ತಿದ್ದ ಅಜ್ಜ, ಅಜ್ಜಿ ಹೀಗೆ ಮನೆಗೆ, ಗ್ರಾಮಗಳಿಗೆ ಊರುಗೋಲಾಗಿದ್ದವರನ್ನೇ ಕೊರೋನಾದ ಎರಡನೇ ಅಲೆ ಆಪೋಶನ ತೆಗೆದುಕೊಂಡಿದೆ. ಅವರ ಬದುಕನ್ನು ನುಂಗಿ ನೀರು ಕುಡಿದಿದೆ ಎಂದು ಪ್ರಜಾವಾಣಿಯ ಮನೋಜ್ ಬರೆಯುತ್ತಾರೆ. ಹಲವಾರಿ ಹಳ್ಳಿಗಳನ್ನು ಸುತ್ತಿ ವಿಡಿಯೋ ವರದಿ ಮಾಡಿದ ಮನೋಜ್, ನಾನುಗೌರಿಯೊಂದಿಗೆ ಮಾತನಾಡುತ್ತ, 20ನೇ ಶತಮಾನದಲ್ಲಿ ಕಾಣಿಸಿಕೊಂಡ ಪ್ಲೇಗ್ ಮಹಾಮಾರಿ, 1970ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ‘ಡೌಗಿ’ ಬರದ ಬಳಿಕ ಕೊರೋನಾ ಹಾವಳಿಯಿಂದಾಗಿ ಇಷ್ಟೊಂದು ಸಾವುಗಳು ಸಂಭವಿಸಿದ್ದರಿಂದ ಗ್ರಾಮಗಳು ಅಕ್ಷರಶಃ ತತ್ತರಿಸಿ ಹೋಗಿವೆ’ ಎನ್ನುತ್ತಾರೆ.

ಆಳಂದ ತಾಲ್ಲೂಕಿನ ಗಡಿ ಗ್ರಾಮಗಳಾದ ಆಳಂಗಾ, ಖಜೂರಿ, ಅಫಜಲಪುರ ತಾಲ್ಲೂಕಿನ ಬಂದರವಾಡ, ಗೊಬ್ಬುರ (ಬಿ), ಚೌಡಾಪುರ, ಕಲಬುರ್ಗಿ ತಾಲ್ಲೂಕಿನ ಸಣ್ಣೂರ, ಹಾಗರಗಾ, ದಾರ್ಯ ನಾಯಕ ತಾಂಡಾ, ಖಾಜಾ ಕೋಟನೂರ, ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ, ಮಾಡಬೂಳ, ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಸೇಡಂ ತಾಲ್ಲೂಕಿನ ಮಳಖೇಡ, ರಾಜಶ್ರೀ ಸಿಮೆಂಟ್ ಕಾರ್ಖಾನೆಗೆ ಹೊಂದಿಕೊಂಡಂತಿರುವ ಹೂಡಾ (ಬಿ) ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಸಂಬಂಧಿಕರು, ನೆರೆ ಹೊರೆಯವರನ್ನು ಕಳೆದುಕೊಂಡ ದುಃಖ, ಬೇಸರ ಕುದಿ ಮೌನದ ರೂಪದಲ್ಲಿದೆ ಎಂದು ಮನೋಜ್ ನಮಗೆ ತಿಳಿಸಿದರು.

ವಿಚಿತ್ರ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೋವಿಡ್‌ನಿಂದ ಮೃತಪಟ್ಟ ತಂದೆಗೆ ಅಂತ್ಯಸಂಸ್ಕಾರ ಮಾಡಬೇಕಿದ್ದ ಮಗ ಆಸ್ಪತ್ರೆಯಲ್ಲಿ ಅದೇ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾನೆ. ಪತಿ ಸತ್ತ ಸುದ್ದಿ ಪಕ್ಕದ ಕೋವಿಡ್ ವಾರ್ಡ್ನಲ್ಲಿರುವ ಪತ್ನಿಗೂ ತಿಳಿಸಲಾಗದೇ ಅಂತ್ಯಸಂಸ್ಕಾರ ಮಾಡುವ ಅನಿವಾರ್ಯತೆ ಎದುರಾಗಿದೆ ಈಗ.
3 ಸಾವಿರ ಜನಸಂಖ್ಯೆ ಹೊಂದಿರುವ ಪುಟ್ಟ ಊರಲ್ಲಿ ಒಂದೇ ದಿನ ನಾಲ್ಕು ಜನ ತೀರಿಕೊಂಡ, ಬೆಳಿಗ್ಗೆ ತಂದೆ, ಸಂಜೆ ಮಗ ತೀರಿಕೊಂಡ, ಸ್ವತಃ ವೈದ್ಯ ಪತಿಯ ಕಣ್ಣೆದುರೇ ಉಸಿರುಗಟ್ಟಿ ಅಪಾರ ಯಾತನೆಯಿಂದ ಪತ್ನಿ ಮೃತಪಟ್ಟ ಉದಾಹರಣೆಗಳೂ ಇವೆ ಎನ್ನುತ್ತಾರೆ ಮನೋಜ್.

ಮಾರ್ಚ್ ಕೊನೆಯ ಹಾಗೂ ಏಪ್ರಿಲ್ ಮೊದಲ ವಾರದಲ್ಲಿ ಜಿಲ್ಲೆಯ ಗ್ರಾಮಗಳಿಗೆ ಹರಡಿದ ಕೊರೋನಾ ಸೋಂಕು ಸದ್ದಿಲ್ಲದೇ ಜನರ ಸಾವಿಗೆ ಕಾರಣವಾಯಿತು. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಆಳಂದ, ಅಫಜಲಪುರ ತಾಲ್ಲೂಕುಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಯಿತಾದರೂ ಕಟ್ಟುನಿಟ್ಟಿನ ತಪಾಸಣೆ ನಡೆಯಲಿಲ್ಲ. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಎಷ್ಟೋ ಸಂದರ್ಭಗಳಲ್ಲಿ ಜಿಲ್ಲೆಗೆ ಪ್ರವೇಶ ನೀಡಲಾಯಿತು.

ಅಲ್ಲಿ ಏರುಗತಿ, ಇಲ್ಲಿ ಚೆಕಿಂಗ್ ಇಲ್ಲ!

ಕಲಬುರಗಿ ಜಿಲ್ಲೆಯ ಕೆಲಭಾಗ ಮಹಾರಾಷ್ಟ್ರದ ಗಡಿಗಳಿಗೆ ಹೊಂದಿಕೊಂಡಿದೆ ಮತ್ತು ಎರಡೂ ಕಡೆ ಕೊಡಕೊಳ್ಳುವ ಸಂಬಂಧವಿದೆ. ಇಲ್ಲಿಯವರು ಅಲ್ಲಿ, ಅಲ್ಲಿನವರು ಇಲ್ಲಿ ಕೆಲಸ ಮಾಡುತ್ತಾರೆ. ಜೊತೆಗೆ ವೈವಾಹಿಕ ಸಂಬಂಧಗಳಂತೂ ಸಹಜವಾಗಿವೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಏರುಗತಿಯಲ್ಲಿದ್ದ ಸಂದರ್ಭದಲ್ಲಿಯೂ ಕಲಬುರ್ಗಿ ಜಿಲ್ಲೆಗೆ ಬರುವ ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಇಲ್ಲಿಂದ ಪ್ರಯಾಣ ಆರಂಭಿಸಿ ವಾಪಸ್ ಜಿಲ್ಲೆಗೆ ಮುಂಬೈ, ಪುಣೆಯಲ್ಲಿದ್ದ ಜನರನ್ನು ಕರೆತಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತಪಾಸಣೆ ಮಾಡಲೇ ಇಲ್ಲ.
ಆಳಂದ ತಾಲ್ಲೂಕಿನ ಗಡಿ ಗ್ರಾಮ ಖಜೂರಿ ಚೆಕ್‌ಪೋಸ್ಟ್‌ನಲ್ಲಿ ಹೇಳಿಕೊಳ್ಳುವಂಥ ಕಟ್ಟುನಿಟ್ಟು ಕಂಡು ಬರಲೇ ಇಲ್ಲ.

ಧಾರವಾಡ ಮತ್ತು ಬೆಳಗಾವಿ ಕೂಡ ಮಹಾರಾಷ್ಟ್ರದ ಜೊತೆ ಗಡಿ ಹಂಚಿಕೊಂಡಿವೆ ಮತ್ತು ಆಪ್ತ ಸಂಬಂಧಗಳನ್ನು ಹೊಂದಿವೆ ಎಂಬುದನ್ನು ಇಲ್ಲಿ ನೆನಪಿಡಬೇಕು. ಹತ್ತು ದಿನಗಳ ಹಿಂದೆ ಮುಂಬೈ ಕರ್ನಾಟಕದಲ್ಲಿ ಸುತ್ತಾಡಿ ಹೋದ ಆರೋಗ್ಯ ಸಚಿವರಿಗೆ ಈ ಖಬರು ಇಲ್ಲವೇ ಇಲ್ಲ.
ಇದು ಕೇವಲ ಧಾರವಾಡ, ಕಲಬುರಗಿ ವಿಷಯವಷ್ಟೇ ಅಲ್ಲ, ರಾಜ್ಯದ ಬಹುಪಾಲು ಜಿಲ್ಲೆಗಳ ಹಳ್ಳಿಗಳಿಗೆ ಕೋವಿಡ್ ಎರಡನೇ ಅಲೆ ದಾಳಿ ಇಟ್ಟಿದೆ. ಹಳ್ಳಿಗಳಲ್ಲಿ ಸಂಭವಿಸುತ್ತಿರುವ ಸಾವುಗಳು ಕೋವಿಡ್ ಸಾವು ಎಂದು ಕೌಂಟ್ ಆಗುತ್ತಿಲ್ಲ. ಒಮ್ಮಿಂದೊಮ್ಮೇಲೆ ಒಂದು ಹಳ್ಳಿಯಲ್ಲಿ ಸಾವಿನ ಸಂಖ್ಯೆ ಏರತೊಡಗಿದರೆ, ಅದು ಕೋವಿಡ್ಡೋ ಅಥವಾ ಇನ್ನೊಂದೋ ಆಗಿರಲಿ, ಸರ್ಕಾರದ ಆರೋಗ್ಯ ವ್ಯವಸ್ಥೆ ಗಮನ ಹರಿಸಬೇಕಲ್ಲವೇ?

ಜನರೇ ಜಾಗೃತರಾಗಬೇಕು. ಈ ಕೊಳಕು ವ್ಯವಸ್ಥೆಯಿಂದ ಮೂರನೇ ಅಲೆಯೂ ಬರಲಿದೆ, ನಮ್ಮ ಮಕ್ಕಳನ್ನಾದರೂ ಕಾಪಾಡಿಕೊಳ್ಳೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ:ಲಾಕ್‌ಡೌನ್‌ನ ನೀರವ ಮೌನ ಮತ್ತು ಸಾಂಕ್ರಾಮಿಕದ ಶೋಕ ಗೀತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...