Homeಕರೋನಾ ತಲ್ಲಣಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

ಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

- Advertisement -
- Advertisement -

‘ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೇಯೇ ಹಳ್ಳ ಹಿಡಿದಿದೆ ಎಂಬುದು ಸಾಬೀತಾಗುತ್ತಿದೆ’ ಎಂದು ಅದೇ ತಾನೇ ಕೋವಿಡ್ ಕೇರ್ ಸೆಂಟರ್‌ನಿಂದ ಹೊರಬಂದ ಧಾರವಾಡದ ಸರ್ಕಾರಿ ವೈದ್ಯರೊಬ್ಬರು ತುಂಬ ಕಳವಳದಲ್ಲಿ ನಾನುಗೌರಿ.ಕಾಂಗೆ ಹೇಳಿದರು.

ಈಗ ಕೋವಿಡ್ ಎರಡನೇ ಅಲೆ ಹಳ್ಳಿಗಳಿಗೆ ದಾಳಿ ಇಟ್ಟಿದೆ. ಇದೇನೂ ಅನಿರೀಕ್ಷಿತವಲ್ಲ. ನಮ್ಮ ಪ್ರಭುತ್ವ ತೋರಿದ ಹೊಣೆಗೇಡಿತನವೇ ಇದಕ್ಕೆ ಕಾರಣ. ಉತ್ತರಪ್ರದೇಶ, ಬಿಹಾರ್ ರಾಜ್ಯಗಳ ಕೋವಿಡ್ ಶವಗಳು ಗಂಗೆಯಲ್ಲಿ ತೇಲಿ ಹೋಗಿದ್ದು ಕಣ್ಣಿಗೆ ರಾಚಿ ಹೋದ ದೃಶ್ಯಗಳಾಗಿದ್ದವು. ಪ್ರಧಾನಿ ಕೂಡ ಅತ್ತಂತೆ ಮಾಡಿದರು. ಆದರೆ ಇಲ್ಲಿ ಕರ್ನಾಟಕದ ಹಳ್ಳಿಗಳಲ್ಲಿ ಕೋವಿಡ್ ಸಾವುಗಳು ವರದಿಯಾಗದೇ ಹೋಗುತ್ತಿವೆ.

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳನ್ನು ಸುತ್ತಿದ ಪ್ರಜಾವಾಣಿ ವರದಿಗಾರ ಮನೋಜ್ ಕುಮಾರ್ ಗುದ್ದಿ, ‘ಹಳ್ಳಿಗಳಲ್ಲಿ ಪರೀಕ್ಷೆಯೇ ಆಗ್ತಿಲ್ಲ. ಲಸಿಕೆಯಂತೂ ದೂರದ ಮಾತು. ಕೋವಿಡ್‌ಗೆ ಅಪ್ಪ ಸತ್ತರೆ ಅಂತ್ಯಸಂಸ್ಕಾರ ಮಾಡಲು ಮಗನಿಲ್ಲ. ಏಕೆಂದರೆ ಆತನೂ ಕೋವಿಡ್ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಂದೇ ಕುಟುಂಬದಲ್ಲಿ 3-4 ಕೋವಿಡ್ ಸಾವು ಸಂಭವಿಸುತ್ತಿವೆ. ಪರಿಸ್ಥಿತಿ ಭೀಕರವಾಗಿದೆ’ ಎಂದು ನಾನುಗೌರಿ. ಕಾಂಗೆ ತಿಳಿಸಿದರು.

ಇತ್ತೀಚೆಗೆ ಪ್ರಮುಖ ದಿನಪತ್ರಿಕೆಯಲ್ಲಿ ಬಂದ ಸುದ್ದಿಯನ್ನು ಉಲ್ಲೇಖಿಸಿದ ಧಾರವಾಡದ ಸರ್ಕಾರಿ ವೈದ್ಯರು, ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಕಳೆದ 15 ದಿನಗಳಲ್ಲಿ 60 ಸಾವು ಸಂಭವಿಸಿವೆ. ಇದರಲ್ಲಿ ಕೇವಲ 4 ಸಾವುಗಳನ್ನು ಕೋವಿಡ್ ಸಾವುಗಳು ಎಂದು ದಾಖಲಿಸಲಾಗಿದೆ. ಇದನ್ನು ನಂಬಲಾಗುತ್ತದೆಯೇ? ಕೋವಿಡ್ ಸಂಬಂಧಕ್ಕೇ ಹೃದಯಾಘಾತ ಹೊಂದಿದವರ ಸಾವನ್ನು ಹೃದಯಾಘಾತ ಪಟ್ಟಿಯಲ್ಲಿ ಸೇರಿಸಲಾಗುತ್ತಿದೆ. ತಮ್ಮ ತಮ್ಮ ಜವಾಬ್ದಾರಿಗಳನ್ನು ಮರೆತ ವೈದ್ಯ ಸಿಬ್ದಂದಿ ಅಸಹಾಯಕವಾಗಿದೆಯೋ ಅಥವಾ ದಾರಿ ತಪ್ಪಿಸುತ್ತಿದೆಯೋ ಗೊತ್ತಾಗುತ್ತಿಲ್ಲ’ ಎನ್ನುತ್ತಾರೆ.

ಕಲಬುರ್ಗಿ ಕತೆ

ನಿತ್ಯ ದುಡಿದು ಮನೆಯನ್ನು ನಡೆಸುವ ಯುವಕರು, ಚಿಕ್ಕವರಿಗೆ ಮಾರ್ಗದರ್ಶನ ಮಾಡುತ್ತಿದ್ದ ಹಿರಿಯರು, ಮೊಮ್ಮಕ್ಕಳಿಗೆ ಚಂದಮಾಮನ ಕಥೆ ಹೇಳಿ ರಂಜಿಸುತ್ತಿದ್ದ ಅಜ್ಜ, ಅಜ್ಜಿ ಹೀಗೆ ಮನೆಗೆ, ಗ್ರಾಮಗಳಿಗೆ ಊರುಗೋಲಾಗಿದ್ದವರನ್ನೇ ಕೊರೋನಾದ ಎರಡನೇ ಅಲೆ ಆಪೋಶನ ತೆಗೆದುಕೊಂಡಿದೆ. ಅವರ ಬದುಕನ್ನು ನುಂಗಿ ನೀರು ಕುಡಿದಿದೆ ಎಂದು ಪ್ರಜಾವಾಣಿಯ ಮನೋಜ್ ಬರೆಯುತ್ತಾರೆ. ಹಲವಾರಿ ಹಳ್ಳಿಗಳನ್ನು ಸುತ್ತಿ ವಿಡಿಯೋ ವರದಿ ಮಾಡಿದ ಮನೋಜ್, ನಾನುಗೌರಿಯೊಂದಿಗೆ ಮಾತನಾಡುತ್ತ, 20ನೇ ಶತಮಾನದಲ್ಲಿ ಕಾಣಿಸಿಕೊಂಡ ಪ್ಲೇಗ್ ಮಹಾಮಾರಿ, 1970ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ‘ಡೌಗಿ’ ಬರದ ಬಳಿಕ ಕೊರೋನಾ ಹಾವಳಿಯಿಂದಾಗಿ ಇಷ್ಟೊಂದು ಸಾವುಗಳು ಸಂಭವಿಸಿದ್ದರಿಂದ ಗ್ರಾಮಗಳು ಅಕ್ಷರಶಃ ತತ್ತರಿಸಿ ಹೋಗಿವೆ’ ಎನ್ನುತ್ತಾರೆ.

ಆಳಂದ ತಾಲ್ಲೂಕಿನ ಗಡಿ ಗ್ರಾಮಗಳಾದ ಆಳಂಗಾ, ಖಜೂರಿ, ಅಫಜಲಪುರ ತಾಲ್ಲೂಕಿನ ಬಂದರವಾಡ, ಗೊಬ್ಬುರ (ಬಿ), ಚೌಡಾಪುರ, ಕಲಬುರ್ಗಿ ತಾಲ್ಲೂಕಿನ ಸಣ್ಣೂರ, ಹಾಗರಗಾ, ದಾರ್ಯ ನಾಯಕ ತಾಂಡಾ, ಖಾಜಾ ಕೋಟನೂರ, ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ, ಮಾಡಬೂಳ, ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಸೇಡಂ ತಾಲ್ಲೂಕಿನ ಮಳಖೇಡ, ರಾಜಶ್ರೀ ಸಿಮೆಂಟ್ ಕಾರ್ಖಾನೆಗೆ ಹೊಂದಿಕೊಂಡಂತಿರುವ ಹೂಡಾ (ಬಿ) ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಸಂಬಂಧಿಕರು, ನೆರೆ ಹೊರೆಯವರನ್ನು ಕಳೆದುಕೊಂಡ ದುಃಖ, ಬೇಸರ ಕುದಿ ಮೌನದ ರೂಪದಲ್ಲಿದೆ ಎಂದು ಮನೋಜ್ ನಮಗೆ ತಿಳಿಸಿದರು.

ವಿಚಿತ್ರ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೋವಿಡ್‌ನಿಂದ ಮೃತಪಟ್ಟ ತಂದೆಗೆ ಅಂತ್ಯಸಂಸ್ಕಾರ ಮಾಡಬೇಕಿದ್ದ ಮಗ ಆಸ್ಪತ್ರೆಯಲ್ಲಿ ಅದೇ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾನೆ. ಪತಿ ಸತ್ತ ಸುದ್ದಿ ಪಕ್ಕದ ಕೋವಿಡ್ ವಾರ್ಡ್ನಲ್ಲಿರುವ ಪತ್ನಿಗೂ ತಿಳಿಸಲಾಗದೇ ಅಂತ್ಯಸಂಸ್ಕಾರ ಮಾಡುವ ಅನಿವಾರ್ಯತೆ ಎದುರಾಗಿದೆ ಈಗ.
3 ಸಾವಿರ ಜನಸಂಖ್ಯೆ ಹೊಂದಿರುವ ಪುಟ್ಟ ಊರಲ್ಲಿ ಒಂದೇ ದಿನ ನಾಲ್ಕು ಜನ ತೀರಿಕೊಂಡ, ಬೆಳಿಗ್ಗೆ ತಂದೆ, ಸಂಜೆ ಮಗ ತೀರಿಕೊಂಡ, ಸ್ವತಃ ವೈದ್ಯ ಪತಿಯ ಕಣ್ಣೆದುರೇ ಉಸಿರುಗಟ್ಟಿ ಅಪಾರ ಯಾತನೆಯಿಂದ ಪತ್ನಿ ಮೃತಪಟ್ಟ ಉದಾಹರಣೆಗಳೂ ಇವೆ ಎನ್ನುತ್ತಾರೆ ಮನೋಜ್.

ಮಾರ್ಚ್ ಕೊನೆಯ ಹಾಗೂ ಏಪ್ರಿಲ್ ಮೊದಲ ವಾರದಲ್ಲಿ ಜಿಲ್ಲೆಯ ಗ್ರಾಮಗಳಿಗೆ ಹರಡಿದ ಕೊರೋನಾ ಸೋಂಕು ಸದ್ದಿಲ್ಲದೇ ಜನರ ಸಾವಿಗೆ ಕಾರಣವಾಯಿತು. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಆಳಂದ, ಅಫಜಲಪುರ ತಾಲ್ಲೂಕುಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಯಿತಾದರೂ ಕಟ್ಟುನಿಟ್ಟಿನ ತಪಾಸಣೆ ನಡೆಯಲಿಲ್ಲ. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಎಷ್ಟೋ ಸಂದರ್ಭಗಳಲ್ಲಿ ಜಿಲ್ಲೆಗೆ ಪ್ರವೇಶ ನೀಡಲಾಯಿತು.

ಅಲ್ಲಿ ಏರುಗತಿ, ಇಲ್ಲಿ ಚೆಕಿಂಗ್ ಇಲ್ಲ!

ಕಲಬುರಗಿ ಜಿಲ್ಲೆಯ ಕೆಲಭಾಗ ಮಹಾರಾಷ್ಟ್ರದ ಗಡಿಗಳಿಗೆ ಹೊಂದಿಕೊಂಡಿದೆ ಮತ್ತು ಎರಡೂ ಕಡೆ ಕೊಡಕೊಳ್ಳುವ ಸಂಬಂಧವಿದೆ. ಇಲ್ಲಿಯವರು ಅಲ್ಲಿ, ಅಲ್ಲಿನವರು ಇಲ್ಲಿ ಕೆಲಸ ಮಾಡುತ್ತಾರೆ. ಜೊತೆಗೆ ವೈವಾಹಿಕ ಸಂಬಂಧಗಳಂತೂ ಸಹಜವಾಗಿವೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಏರುಗತಿಯಲ್ಲಿದ್ದ ಸಂದರ್ಭದಲ್ಲಿಯೂ ಕಲಬುರ್ಗಿ ಜಿಲ್ಲೆಗೆ ಬರುವ ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಇಲ್ಲಿಂದ ಪ್ರಯಾಣ ಆರಂಭಿಸಿ ವಾಪಸ್ ಜಿಲ್ಲೆಗೆ ಮುಂಬೈ, ಪುಣೆಯಲ್ಲಿದ್ದ ಜನರನ್ನು ಕರೆತಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತಪಾಸಣೆ ಮಾಡಲೇ ಇಲ್ಲ.
ಆಳಂದ ತಾಲ್ಲೂಕಿನ ಗಡಿ ಗ್ರಾಮ ಖಜೂರಿ ಚೆಕ್‌ಪೋಸ್ಟ್‌ನಲ್ಲಿ ಹೇಳಿಕೊಳ್ಳುವಂಥ ಕಟ್ಟುನಿಟ್ಟು ಕಂಡು ಬರಲೇ ಇಲ್ಲ.

ಧಾರವಾಡ ಮತ್ತು ಬೆಳಗಾವಿ ಕೂಡ ಮಹಾರಾಷ್ಟ್ರದ ಜೊತೆ ಗಡಿ ಹಂಚಿಕೊಂಡಿವೆ ಮತ್ತು ಆಪ್ತ ಸಂಬಂಧಗಳನ್ನು ಹೊಂದಿವೆ ಎಂಬುದನ್ನು ಇಲ್ಲಿ ನೆನಪಿಡಬೇಕು. ಹತ್ತು ದಿನಗಳ ಹಿಂದೆ ಮುಂಬೈ ಕರ್ನಾಟಕದಲ್ಲಿ ಸುತ್ತಾಡಿ ಹೋದ ಆರೋಗ್ಯ ಸಚಿವರಿಗೆ ಈ ಖಬರು ಇಲ್ಲವೇ ಇಲ್ಲ.
ಇದು ಕೇವಲ ಧಾರವಾಡ, ಕಲಬುರಗಿ ವಿಷಯವಷ್ಟೇ ಅಲ್ಲ, ರಾಜ್ಯದ ಬಹುಪಾಲು ಜಿಲ್ಲೆಗಳ ಹಳ್ಳಿಗಳಿಗೆ ಕೋವಿಡ್ ಎರಡನೇ ಅಲೆ ದಾಳಿ ಇಟ್ಟಿದೆ. ಹಳ್ಳಿಗಳಲ್ಲಿ ಸಂಭವಿಸುತ್ತಿರುವ ಸಾವುಗಳು ಕೋವಿಡ್ ಸಾವು ಎಂದು ಕೌಂಟ್ ಆಗುತ್ತಿಲ್ಲ. ಒಮ್ಮಿಂದೊಮ್ಮೇಲೆ ಒಂದು ಹಳ್ಳಿಯಲ್ಲಿ ಸಾವಿನ ಸಂಖ್ಯೆ ಏರತೊಡಗಿದರೆ, ಅದು ಕೋವಿಡ್ಡೋ ಅಥವಾ ಇನ್ನೊಂದೋ ಆಗಿರಲಿ, ಸರ್ಕಾರದ ಆರೋಗ್ಯ ವ್ಯವಸ್ಥೆ ಗಮನ ಹರಿಸಬೇಕಲ್ಲವೇ?

ಜನರೇ ಜಾಗೃತರಾಗಬೇಕು. ಈ ಕೊಳಕು ವ್ಯವಸ್ಥೆಯಿಂದ ಮೂರನೇ ಅಲೆಯೂ ಬರಲಿದೆ, ನಮ್ಮ ಮಕ್ಕಳನ್ನಾದರೂ ಕಾಪಾಡಿಕೊಳ್ಳೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ:ಲಾಕ್‌ಡೌನ್‌ನ ನೀರವ ಮೌನ ಮತ್ತು ಸಾಂಕ್ರಾಮಿಕದ ಶೋಕ ಗೀತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...