Homeಮುಖಪುಟಉತ್ತರ ಪ್ರದೇಶ| ವಿವಸ್ತ್ರಗೊಳಿಸಿ ಹಲ್ಲೆ, ಮೂತ್ರ ವಿಸರ್ಜಿಸಿ ಅವಮಾನ: ಮನನೊಂದ ದಲಿತ ಬಾಲಕ ಆತ್ಮಹತ್ಯೆಗೆ ಶರಣು

ಉತ್ತರ ಪ್ರದೇಶ| ವಿವಸ್ತ್ರಗೊಳಿಸಿ ಹಲ್ಲೆ, ಮೂತ್ರ ವಿಸರ್ಜಿಸಿ ಅವಮಾನ: ಮನನೊಂದ ದಲಿತ ಬಾಲಕ ಆತ್ಮಹತ್ಯೆಗೆ ಶರಣು

- Advertisement -
- Advertisement -

ತನ್ನ ಗ್ರಾಮದಲ್ಲಿ ತೀವ್ರ ಜಾತಿ ತಾರತಮ್ಯ ಮತ್ತು ಕಿರುಕುಳವನ್ನು ಎದುರಿಸಿದ ಅಪ್ರಾಪ್ತ ಬಾಲಕ ಆದಿತ್ಯ ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. ಘಟನೆಯ ನಂತರ, ರಾಜ್ಯ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸರ್ಕಲ್ ಆಫೀಸರ್ (ಸಿಒ) ಪ್ರದೀಪ್ ಕುಮಾರ್ ತ್ರಿಪಾಠಿ, “ಆದಿತ್ಯ ಎಂಬ ಬಾಲಕ ನೇಣು ಬಿಗಿದುಕೊಂಡಿದ್ದಾನೆ; ಪಿಎಸ್ ಕಪ್ತಂಗಂಜ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂಬಂಧಿತ ವಿಭಾಗಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಪರಸ್ಪರ ಭಿನ್ನಾಭಿಪ್ರಾಯ ಕಾರಣ ಎಂದು ಶಂಕಿಸಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಸಾವಿಗೂ ಮುನ್ನ ಆದಿತ್ಯನಿಗೆ ತೀವ್ರ ಕಿರುಕುಳ ನೀಡಿದ್ದರು ಎಂದು ಸಂತ್ರಸ್ತನ ಕುಟುಂಬದವರು ಆರೋಪಿಸಿದ್ದಾರೆ.

ಆತನ ಚಿಕ್ಕಪ್ಪ ವಿಜಯ್ ಕುಮಾರ್ ಪ್ರಕಾರ, ಅಪ್ರಾಪ್ತ ಬಾಲಕನನ್ನು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಲಾಗಿತ್ತು, ಅಲ್ಲಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ.

“ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಆತನನ್ನು ಆಹ್ವಾನಿಸಲಾಗಿತ್ತು, ಇದೆಲ್ಲ ಪೂರ್ವ ಯೋಜಿತವೋ ಗೊತ್ತಿಲ್ಲ. ಆದರೆ, ಆತನನ್ನು ವಿವಸ್ತ್ರಗೊಳಿಸಿ ಥಳಿಸಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ನಮ್ಮ ದೂರು ದಾಖಲಿಸಿಕೊಂಡಿಲ್ಲ” ಎಂದು ಮೃತ ಬಾಲಕನ ಚಿಕ್ಕಪ್ಪ ಆರೋಪಿಸಿದ್ದಾರೆ.

ಔಪಚಾರಿಕವಾಗಿ ದೂರು ಸಲ್ಲಿಸಲು ತಮ್ಮ ಪ್ರಯತ್ನಗಳನ್ನು ಆರಂಭದಲ್ಲಿ ನಿರ್ಲಕ್ಷಿಸಲಾಗಿದೆ ಎಂದು ವಿಜಯ್ ಆರೋಪಿಸಿದರು.

“ಡಿಸೆಂಬರ್ 20 ರಂದು ಘಟನೆ ಸಂಭವಿಸಿದೆ. ಆದರೆ, ಮರುದಿನ ನಮಗೆ ವಿಷಯ ತಿಳಿಯಿತು. ಆದಿತ್ಯ ತಡರಾತ್ರಿ ಮನೆಗೆ ಬಂದು ಮರುದಿನ ಬೆಳಿಗ್ಗೆ ಕಿರುಕುಳದ ಬಗ್ಗೆ ವಿವರಿಸಿದ್ದಾನೆ. ನಾವು ಪ್ರಯತ್ನಪಟ್ಟರೂ ಅಧಿಕಾರಿಗಳು ಮೂರು ದಿನಗಳಾದರೂ ನಮ್ಮ ದೂರು ದಾಖಲಿಸಲಿಲ್ಲ. ಅವರು ಮತ್ತೆ ಕಿರುಕುಳ ನೀಡಿದ್ದು, ಅದು ಬಾಲಕನ ಆತ್ಮಹತ್ಯೆಗೆ ಕಾರಣವಾಯಿತು” ಎಂದು ಹೇಳಿದರು.

ಇದನ್ನೂ ಓದಿ; ಬಿಹಾರ | ಮುಸ್ಲಿಂ ಯುವಕನಿಗೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ; ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...