Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...