Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...