Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...