Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...