Homeಎಕಾನಮಿಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ ಎನ್ನುತ್ತಿದ್ದಾರೆ ಲಕ್ಷಾಂತರ ನಿರುದ್ಯೋಗಿಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣದ ಪದವೀಧರರನ್ನು 4ನೇ ದರ್ಜೆಯ ಹುದ್ದೆಗಳಿಗೆ ನೇಮಿಸುವ ಉತ್ತರಪ್ರದೇಶ ಸರ್ಕಾರವನ್ನು ಸಹ ಗುಜರಾತ್ ರಾಜ್ಯ ಹಿಂದಿಕ್ಕಿದೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ಇತ್ತೀಚೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ1,59,278 ಅಭ್ಯರ್ಥಿಗಳು ಹಾಜರಾಗಿದ್ದರು. ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರರು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಪರೀಕ್ಷೆ ಬರೆದ 19 ವೈದ್ಯರ ಪೈಕಿ 7 ಜನ ವೈದ್ಯರು ಪಿಯುನ್ ಹುದ್ದೆಗಳನ್ನು ಒಪ್ಪಿ, ವೃತ್ತಿಗೆ ಸೇರಿಕೊಂಡಿದ್ದಾರೆ. ಬಹುತೇಕರು ದಂತ ವೈದ್ಯರು ಹಾಗೂ ಹೋಮಿಯೋಪಥಿಕ್ ವೈದ್ಯರು. ಇವರಿಗೆ ಮಾಸಿಕವಾಗಿ 30 ಸಾವಿರ ರೂ.ಗಳ ವೇತನವಿದೆ.

5446 ಸ್ನಾತಕೋತ್ತರ ಪದವೀಧರರ ಪೈಕಿ ಬಹುತೇಕರು ಕಾನೂನು, ವಾಣಿಜ್ಯ, ವಿಜ್ಞಾನ ಪದವೀಧರರು. ಇವರೆಲ್ಲರೂ ಸಣ್ಣ ಮೊತ್ತದ ವೇತನಕ್ಕಾಗಿ ಪರೀಕ್ಷೆ ಬರೆದಿದ್ದರು.

ಯುಪಿಎಸ್‍ಸಿ ಪರೀಕ್ಷೆಗಳಿಗೆ ಕೋಚಿಂಗ್ ಹಾಗೂ ತರಬೇತಿ ನೀಡುವ ಬಹುತೇಕ ಸಂಸ್ಥೆಗಳ ಮಾಲೀಕರು ಸಹ ಪರೀಕ್ಷಾರ್ಥಿಗಳಾಗಿದ್ದರು. ಪಿಯುನ್, ಬೇಲೀಫ್ ಹುದ್ದೆಗಳಿಗಾಗಿ ನಡೆಸುವ ಪರೀಕ್ಷೆಗಳಲ್ಲಿ ಯಾವ ರೀತಿಯ ಪ್ರಶ್ನೆಪತ್ರಿಕೆ ಇರುತ್ತದೆ ಎಂಬುದನ್ನು ತಿಳಿಯುವುದು ಇವರ ಉದ್ದೇಶವಾಗಿತ್ತು. ಏಕೆಂದರೆ, ಈ ರೀತಿಯ ಪರೀಕ್ಷಾರ್ಥಿಗಳ ಪೈಕಿ ಬಹುತೇಕರು ಆಯ್ಕೆಗೊಂಡಿದ್ದರೂ ಕೆಲಸಕ್ಕೆ ಸೇರಿಕೊಂಡಿಲ್ಲ.

ಸಣ್ಣ ಹುದ್ದೆಗಳಿಗಾಗಿ ಏಕೆ ಪರೀಕ್ಷೆ ಬರೆದಿದ್ದೀರಿ ಎಂಬ ಪ್ರಶ್ನೆಗೆ ಉನ್ನತ ಶಿಕ್ಷಣ ಪಡೆದ ಪರಿಕ್ಷಾರ್ಥಿಗಳ ಉತ್ತರ ಹೀಗಿದೆ; “ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ. ಅವರನ್ನು ವರ್ಗಾವಣೆ ಮಾಡುವಂತಿಲ್ಲ. ಊರಲ್ಲೇ ಶಾಶ್ವತವಾಗಿರಬಹುದು” ಎನ್ನುತ್ತಾರೆ.

ಕಳೆದ ವರ್ಷ, ಕಂದಾಯ ಇಲಾಖೆಯಲ್ಲಿ 2753 ಗ್ರಾಮಾಧಿಕಾರಿ ಹಾಗೂ ಗುಮಾಸ್ತ ಹುದ್ದೆಗಳ ಭರ್ತಿಗೆ ನಡೆದ ಪರೀಕ್ಷೆಯಲ್ಲಿ ಸುಮಾರು 1 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

2011 ರಿಂದ 2014ರವರೆಗೆ ನರೇಂದ್ರ ಮೋದಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಅವಧಿಯಲ್ಲೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಭಾರತದ ಪ್ರಧಾನಿಯಾಗಿಯೂ ಮೋದಿ ಆಯ್ಕೆಗೊಂಡಿದ್ದರು. ಅಭಿವೃದ್ಧಿ ಎಂದರೆ ಗುಜರಾತ್ ಎಂದು ಬೀಗುವ ಬಹುತೇಕ ಬಿಜೆಪಿ ನಾಯಕರಿಗೆ ಇಂತಹ ಅಂಶಗಳ ಮಾಹಿತಿಯೂ ತಿಳಿದಿರಬೇಕು, ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗುಜರಾತ್ ಮಾದರಿಯ ಅಭಿವೃದ್ಧಿ ಎಂದು ಬೊಗಳೆ ಬಿಡುತ್ತಿದ್ದವರು, ಇದರಿಂದ ಪಾಠ ಕಲಿಯಬೇಕು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...