Homeಎಕಾನಮಿಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ ಎನ್ನುತ್ತಿದ್ದಾರೆ ಲಕ್ಷಾಂತರ ನಿರುದ್ಯೋಗಿಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣದ ಪದವೀಧರರನ್ನು 4ನೇ ದರ್ಜೆಯ ಹುದ್ದೆಗಳಿಗೆ ನೇಮಿಸುವ ಉತ್ತರಪ್ರದೇಶ ಸರ್ಕಾರವನ್ನು ಸಹ ಗುಜರಾತ್ ರಾಜ್ಯ ಹಿಂದಿಕ್ಕಿದೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ಇತ್ತೀಚೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ1,59,278 ಅಭ್ಯರ್ಥಿಗಳು ಹಾಜರಾಗಿದ್ದರು. ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರರು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಪರೀಕ್ಷೆ ಬರೆದ 19 ವೈದ್ಯರ ಪೈಕಿ 7 ಜನ ವೈದ್ಯರು ಪಿಯುನ್ ಹುದ್ದೆಗಳನ್ನು ಒಪ್ಪಿ, ವೃತ್ತಿಗೆ ಸೇರಿಕೊಂಡಿದ್ದಾರೆ. ಬಹುತೇಕರು ದಂತ ವೈದ್ಯರು ಹಾಗೂ ಹೋಮಿಯೋಪಥಿಕ್ ವೈದ್ಯರು. ಇವರಿಗೆ ಮಾಸಿಕವಾಗಿ 30 ಸಾವಿರ ರೂ.ಗಳ ವೇತನವಿದೆ.

5446 ಸ್ನಾತಕೋತ್ತರ ಪದವೀಧರರ ಪೈಕಿ ಬಹುತೇಕರು ಕಾನೂನು, ವಾಣಿಜ್ಯ, ವಿಜ್ಞಾನ ಪದವೀಧರರು. ಇವರೆಲ್ಲರೂ ಸಣ್ಣ ಮೊತ್ತದ ವೇತನಕ್ಕಾಗಿ ಪರೀಕ್ಷೆ ಬರೆದಿದ್ದರು.

ಯುಪಿಎಸ್‍ಸಿ ಪರೀಕ್ಷೆಗಳಿಗೆ ಕೋಚಿಂಗ್ ಹಾಗೂ ತರಬೇತಿ ನೀಡುವ ಬಹುತೇಕ ಸಂಸ್ಥೆಗಳ ಮಾಲೀಕರು ಸಹ ಪರೀಕ್ಷಾರ್ಥಿಗಳಾಗಿದ್ದರು. ಪಿಯುನ್, ಬೇಲೀಫ್ ಹುದ್ದೆಗಳಿಗಾಗಿ ನಡೆಸುವ ಪರೀಕ್ಷೆಗಳಲ್ಲಿ ಯಾವ ರೀತಿಯ ಪ್ರಶ್ನೆಪತ್ರಿಕೆ ಇರುತ್ತದೆ ಎಂಬುದನ್ನು ತಿಳಿಯುವುದು ಇವರ ಉದ್ದೇಶವಾಗಿತ್ತು. ಏಕೆಂದರೆ, ಈ ರೀತಿಯ ಪರೀಕ್ಷಾರ್ಥಿಗಳ ಪೈಕಿ ಬಹುತೇಕರು ಆಯ್ಕೆಗೊಂಡಿದ್ದರೂ ಕೆಲಸಕ್ಕೆ ಸೇರಿಕೊಂಡಿಲ್ಲ.

ಸಣ್ಣ ಹುದ್ದೆಗಳಿಗಾಗಿ ಏಕೆ ಪರೀಕ್ಷೆ ಬರೆದಿದ್ದೀರಿ ಎಂಬ ಪ್ರಶ್ನೆಗೆ ಉನ್ನತ ಶಿಕ್ಷಣ ಪಡೆದ ಪರಿಕ್ಷಾರ್ಥಿಗಳ ಉತ್ತರ ಹೀಗಿದೆ; “ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ. ಅವರನ್ನು ವರ್ಗಾವಣೆ ಮಾಡುವಂತಿಲ್ಲ. ಊರಲ್ಲೇ ಶಾಶ್ವತವಾಗಿರಬಹುದು” ಎನ್ನುತ್ತಾರೆ.

ಕಳೆದ ವರ್ಷ, ಕಂದಾಯ ಇಲಾಖೆಯಲ್ಲಿ 2753 ಗ್ರಾಮಾಧಿಕಾರಿ ಹಾಗೂ ಗುಮಾಸ್ತ ಹುದ್ದೆಗಳ ಭರ್ತಿಗೆ ನಡೆದ ಪರೀಕ್ಷೆಯಲ್ಲಿ ಸುಮಾರು 1 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

2011 ರಿಂದ 2014ರವರೆಗೆ ನರೇಂದ್ರ ಮೋದಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಅವಧಿಯಲ್ಲೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಭಾರತದ ಪ್ರಧಾನಿಯಾಗಿಯೂ ಮೋದಿ ಆಯ್ಕೆಗೊಂಡಿದ್ದರು. ಅಭಿವೃದ್ಧಿ ಎಂದರೆ ಗುಜರಾತ್ ಎಂದು ಬೀಗುವ ಬಹುತೇಕ ಬಿಜೆಪಿ ನಾಯಕರಿಗೆ ಇಂತಹ ಅಂಶಗಳ ಮಾಹಿತಿಯೂ ತಿಳಿದಿರಬೇಕು, ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗುಜರಾತ್ ಮಾದರಿಯ ಅಭಿವೃದ್ಧಿ ಎಂದು ಬೊಗಳೆ ಬಿಡುತ್ತಿದ್ದವರು, ಇದರಿಂದ ಪಾಠ ಕಲಿಯಬೇಕು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...