Homeಎಕಾನಮಿಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ ಎನ್ನುತ್ತಿದ್ದಾರೆ ಲಕ್ಷಾಂತರ ನಿರುದ್ಯೋಗಿಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣದ ಪದವೀಧರರನ್ನು 4ನೇ ದರ್ಜೆಯ ಹುದ್ದೆಗಳಿಗೆ ನೇಮಿಸುವ ಉತ್ತರಪ್ರದೇಶ ಸರ್ಕಾರವನ್ನು ಸಹ ಗುಜರಾತ್ ರಾಜ್ಯ ಹಿಂದಿಕ್ಕಿದೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ಇತ್ತೀಚೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ1,59,278 ಅಭ್ಯರ್ಥಿಗಳು ಹಾಜರಾಗಿದ್ದರು. ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರರು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಪರೀಕ್ಷೆ ಬರೆದ 19 ವೈದ್ಯರ ಪೈಕಿ 7 ಜನ ವೈದ್ಯರು ಪಿಯುನ್ ಹುದ್ದೆಗಳನ್ನು ಒಪ್ಪಿ, ವೃತ್ತಿಗೆ ಸೇರಿಕೊಂಡಿದ್ದಾರೆ. ಬಹುತೇಕರು ದಂತ ವೈದ್ಯರು ಹಾಗೂ ಹೋಮಿಯೋಪಥಿಕ್ ವೈದ್ಯರು. ಇವರಿಗೆ ಮಾಸಿಕವಾಗಿ 30 ಸಾವಿರ ರೂ.ಗಳ ವೇತನವಿದೆ.

5446 ಸ್ನಾತಕೋತ್ತರ ಪದವೀಧರರ ಪೈಕಿ ಬಹುತೇಕರು ಕಾನೂನು, ವಾಣಿಜ್ಯ, ವಿಜ್ಞಾನ ಪದವೀಧರರು. ಇವರೆಲ್ಲರೂ ಸಣ್ಣ ಮೊತ್ತದ ವೇತನಕ್ಕಾಗಿ ಪರೀಕ್ಷೆ ಬರೆದಿದ್ದರು.

ಯುಪಿಎಸ್‍ಸಿ ಪರೀಕ್ಷೆಗಳಿಗೆ ಕೋಚಿಂಗ್ ಹಾಗೂ ತರಬೇತಿ ನೀಡುವ ಬಹುತೇಕ ಸಂಸ್ಥೆಗಳ ಮಾಲೀಕರು ಸಹ ಪರೀಕ್ಷಾರ್ಥಿಗಳಾಗಿದ್ದರು. ಪಿಯುನ್, ಬೇಲೀಫ್ ಹುದ್ದೆಗಳಿಗಾಗಿ ನಡೆಸುವ ಪರೀಕ್ಷೆಗಳಲ್ಲಿ ಯಾವ ರೀತಿಯ ಪ್ರಶ್ನೆಪತ್ರಿಕೆ ಇರುತ್ತದೆ ಎಂಬುದನ್ನು ತಿಳಿಯುವುದು ಇವರ ಉದ್ದೇಶವಾಗಿತ್ತು. ಏಕೆಂದರೆ, ಈ ರೀತಿಯ ಪರೀಕ್ಷಾರ್ಥಿಗಳ ಪೈಕಿ ಬಹುತೇಕರು ಆಯ್ಕೆಗೊಂಡಿದ್ದರೂ ಕೆಲಸಕ್ಕೆ ಸೇರಿಕೊಂಡಿಲ್ಲ.

ಸಣ್ಣ ಹುದ್ದೆಗಳಿಗಾಗಿ ಏಕೆ ಪರೀಕ್ಷೆ ಬರೆದಿದ್ದೀರಿ ಎಂಬ ಪ್ರಶ್ನೆಗೆ ಉನ್ನತ ಶಿಕ್ಷಣ ಪಡೆದ ಪರಿಕ್ಷಾರ್ಥಿಗಳ ಉತ್ತರ ಹೀಗಿದೆ; “ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ. ಅವರನ್ನು ವರ್ಗಾವಣೆ ಮಾಡುವಂತಿಲ್ಲ. ಊರಲ್ಲೇ ಶಾಶ್ವತವಾಗಿರಬಹುದು” ಎನ್ನುತ್ತಾರೆ.

ಕಳೆದ ವರ್ಷ, ಕಂದಾಯ ಇಲಾಖೆಯಲ್ಲಿ 2753 ಗ್ರಾಮಾಧಿಕಾರಿ ಹಾಗೂ ಗುಮಾಸ್ತ ಹುದ್ದೆಗಳ ಭರ್ತಿಗೆ ನಡೆದ ಪರೀಕ್ಷೆಯಲ್ಲಿ ಸುಮಾರು 1 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

2011 ರಿಂದ 2014ರವರೆಗೆ ನರೇಂದ್ರ ಮೋದಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಅವಧಿಯಲ್ಲೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಭಾರತದ ಪ್ರಧಾನಿಯಾಗಿಯೂ ಮೋದಿ ಆಯ್ಕೆಗೊಂಡಿದ್ದರು. ಅಭಿವೃದ್ಧಿ ಎಂದರೆ ಗುಜರಾತ್ ಎಂದು ಬೀಗುವ ಬಹುತೇಕ ಬಿಜೆಪಿ ನಾಯಕರಿಗೆ ಇಂತಹ ಅಂಶಗಳ ಮಾಹಿತಿಯೂ ತಿಳಿದಿರಬೇಕು, ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗುಜರಾತ್ ಮಾದರಿಯ ಅಭಿವೃದ್ಧಿ ಎಂದು ಬೊಗಳೆ ಬಿಡುತ್ತಿದ್ದವರು, ಇದರಿಂದ ಪಾಠ ಕಲಿಯಬೇಕು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...