Homeಎಕಾನಮಿಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ ಎನ್ನುತ್ತಿದ್ದಾರೆ ಲಕ್ಷಾಂತರ ನಿರುದ್ಯೋಗಿಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣದ ಪದವೀಧರರನ್ನು 4ನೇ ದರ್ಜೆಯ ಹುದ್ದೆಗಳಿಗೆ ನೇಮಿಸುವ ಉತ್ತರಪ್ರದೇಶ ಸರ್ಕಾರವನ್ನು ಸಹ ಗುಜರಾತ್ ರಾಜ್ಯ ಹಿಂದಿಕ್ಕಿದೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ಇತ್ತೀಚೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ1,59,278 ಅಭ್ಯರ್ಥಿಗಳು ಹಾಜರಾಗಿದ್ದರು. ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರರು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಪರೀಕ್ಷೆ ಬರೆದ 19 ವೈದ್ಯರ ಪೈಕಿ 7 ಜನ ವೈದ್ಯರು ಪಿಯುನ್ ಹುದ್ದೆಗಳನ್ನು ಒಪ್ಪಿ, ವೃತ್ತಿಗೆ ಸೇರಿಕೊಂಡಿದ್ದಾರೆ. ಬಹುತೇಕರು ದಂತ ವೈದ್ಯರು ಹಾಗೂ ಹೋಮಿಯೋಪಥಿಕ್ ವೈದ್ಯರು. ಇವರಿಗೆ ಮಾಸಿಕವಾಗಿ 30 ಸಾವಿರ ರೂ.ಗಳ ವೇತನವಿದೆ.

5446 ಸ್ನಾತಕೋತ್ತರ ಪದವೀಧರರ ಪೈಕಿ ಬಹುತೇಕರು ಕಾನೂನು, ವಾಣಿಜ್ಯ, ವಿಜ್ಞಾನ ಪದವೀಧರರು. ಇವರೆಲ್ಲರೂ ಸಣ್ಣ ಮೊತ್ತದ ವೇತನಕ್ಕಾಗಿ ಪರೀಕ್ಷೆ ಬರೆದಿದ್ದರು.

ಯುಪಿಎಸ್‍ಸಿ ಪರೀಕ್ಷೆಗಳಿಗೆ ಕೋಚಿಂಗ್ ಹಾಗೂ ತರಬೇತಿ ನೀಡುವ ಬಹುತೇಕ ಸಂಸ್ಥೆಗಳ ಮಾಲೀಕರು ಸಹ ಪರೀಕ್ಷಾರ್ಥಿಗಳಾಗಿದ್ದರು. ಪಿಯುನ್, ಬೇಲೀಫ್ ಹುದ್ದೆಗಳಿಗಾಗಿ ನಡೆಸುವ ಪರೀಕ್ಷೆಗಳಲ್ಲಿ ಯಾವ ರೀತಿಯ ಪ್ರಶ್ನೆಪತ್ರಿಕೆ ಇರುತ್ತದೆ ಎಂಬುದನ್ನು ತಿಳಿಯುವುದು ಇವರ ಉದ್ದೇಶವಾಗಿತ್ತು. ಏಕೆಂದರೆ, ಈ ರೀತಿಯ ಪರೀಕ್ಷಾರ್ಥಿಗಳ ಪೈಕಿ ಬಹುತೇಕರು ಆಯ್ಕೆಗೊಂಡಿದ್ದರೂ ಕೆಲಸಕ್ಕೆ ಸೇರಿಕೊಂಡಿಲ್ಲ.

ಸಣ್ಣ ಹುದ್ದೆಗಳಿಗಾಗಿ ಏಕೆ ಪರೀಕ್ಷೆ ಬರೆದಿದ್ದೀರಿ ಎಂಬ ಪ್ರಶ್ನೆಗೆ ಉನ್ನತ ಶಿಕ್ಷಣ ಪಡೆದ ಪರಿಕ್ಷಾರ್ಥಿಗಳ ಉತ್ತರ ಹೀಗಿದೆ; “ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ. ಅವರನ್ನು ವರ್ಗಾವಣೆ ಮಾಡುವಂತಿಲ್ಲ. ಊರಲ್ಲೇ ಶಾಶ್ವತವಾಗಿರಬಹುದು” ಎನ್ನುತ್ತಾರೆ.

ಕಳೆದ ವರ್ಷ, ಕಂದಾಯ ಇಲಾಖೆಯಲ್ಲಿ 2753 ಗ್ರಾಮಾಧಿಕಾರಿ ಹಾಗೂ ಗುಮಾಸ್ತ ಹುದ್ದೆಗಳ ಭರ್ತಿಗೆ ನಡೆದ ಪರೀಕ್ಷೆಯಲ್ಲಿ ಸುಮಾರು 1 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

2011 ರಿಂದ 2014ರವರೆಗೆ ನರೇಂದ್ರ ಮೋದಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಅವಧಿಯಲ್ಲೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಭಾರತದ ಪ್ರಧಾನಿಯಾಗಿಯೂ ಮೋದಿ ಆಯ್ಕೆಗೊಂಡಿದ್ದರು. ಅಭಿವೃದ್ಧಿ ಎಂದರೆ ಗುಜರಾತ್ ಎಂದು ಬೀಗುವ ಬಹುತೇಕ ಬಿಜೆಪಿ ನಾಯಕರಿಗೆ ಇಂತಹ ಅಂಶಗಳ ಮಾಹಿತಿಯೂ ತಿಳಿದಿರಬೇಕು, ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗುಜರಾತ್ ಮಾದರಿಯ ಅಭಿವೃದ್ಧಿ ಎಂದು ಬೊಗಳೆ ಬಿಡುತ್ತಿದ್ದವರು, ಇದರಿಂದ ಪಾಠ ಕಲಿಯಬೇಕು.

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...