Homeಎಕಾನಮಿಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ ಎನ್ನುತ್ತಿದ್ದಾರೆ ಲಕ್ಷಾಂತರ ನಿರುದ್ಯೋಗಿಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣದ ಪದವೀಧರರನ್ನು 4ನೇ ದರ್ಜೆಯ ಹುದ್ದೆಗಳಿಗೆ ನೇಮಿಸುವ ಉತ್ತರಪ್ರದೇಶ ಸರ್ಕಾರವನ್ನು ಸಹ ಗುಜರಾತ್ ರಾಜ್ಯ ಹಿಂದಿಕ್ಕಿದೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ಇತ್ತೀಚೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ1,59,278 ಅಭ್ಯರ್ಥಿಗಳು ಹಾಜರಾಗಿದ್ದರು. ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರರು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಪರೀಕ್ಷೆ ಬರೆದ 19 ವೈದ್ಯರ ಪೈಕಿ 7 ಜನ ವೈದ್ಯರು ಪಿಯುನ್ ಹುದ್ದೆಗಳನ್ನು ಒಪ್ಪಿ, ವೃತ್ತಿಗೆ ಸೇರಿಕೊಂಡಿದ್ದಾರೆ. ಬಹುತೇಕರು ದಂತ ವೈದ್ಯರು ಹಾಗೂ ಹೋಮಿಯೋಪಥಿಕ್ ವೈದ್ಯರು. ಇವರಿಗೆ ಮಾಸಿಕವಾಗಿ 30 ಸಾವಿರ ರೂ.ಗಳ ವೇತನವಿದೆ.

5446 ಸ್ನಾತಕೋತ್ತರ ಪದವೀಧರರ ಪೈಕಿ ಬಹುತೇಕರು ಕಾನೂನು, ವಾಣಿಜ್ಯ, ವಿಜ್ಞಾನ ಪದವೀಧರರು. ಇವರೆಲ್ಲರೂ ಸಣ್ಣ ಮೊತ್ತದ ವೇತನಕ್ಕಾಗಿ ಪರೀಕ್ಷೆ ಬರೆದಿದ್ದರು.

ಯುಪಿಎಸ್‍ಸಿ ಪರೀಕ್ಷೆಗಳಿಗೆ ಕೋಚಿಂಗ್ ಹಾಗೂ ತರಬೇತಿ ನೀಡುವ ಬಹುತೇಕ ಸಂಸ್ಥೆಗಳ ಮಾಲೀಕರು ಸಹ ಪರೀಕ್ಷಾರ್ಥಿಗಳಾಗಿದ್ದರು. ಪಿಯುನ್, ಬೇಲೀಫ್ ಹುದ್ದೆಗಳಿಗಾಗಿ ನಡೆಸುವ ಪರೀಕ್ಷೆಗಳಲ್ಲಿ ಯಾವ ರೀತಿಯ ಪ್ರಶ್ನೆಪತ್ರಿಕೆ ಇರುತ್ತದೆ ಎಂಬುದನ್ನು ತಿಳಿಯುವುದು ಇವರ ಉದ್ದೇಶವಾಗಿತ್ತು. ಏಕೆಂದರೆ, ಈ ರೀತಿಯ ಪರೀಕ್ಷಾರ್ಥಿಗಳ ಪೈಕಿ ಬಹುತೇಕರು ಆಯ್ಕೆಗೊಂಡಿದ್ದರೂ ಕೆಲಸಕ್ಕೆ ಸೇರಿಕೊಂಡಿಲ್ಲ.

ಸಣ್ಣ ಹುದ್ದೆಗಳಿಗಾಗಿ ಏಕೆ ಪರೀಕ್ಷೆ ಬರೆದಿದ್ದೀರಿ ಎಂಬ ಪ್ರಶ್ನೆಗೆ ಉನ್ನತ ಶಿಕ್ಷಣ ಪಡೆದ ಪರಿಕ್ಷಾರ್ಥಿಗಳ ಉತ್ತರ ಹೀಗಿದೆ; “ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ. ಅವರನ್ನು ವರ್ಗಾವಣೆ ಮಾಡುವಂತಿಲ್ಲ. ಊರಲ್ಲೇ ಶಾಶ್ವತವಾಗಿರಬಹುದು” ಎನ್ನುತ್ತಾರೆ.

ಕಳೆದ ವರ್ಷ, ಕಂದಾಯ ಇಲಾಖೆಯಲ್ಲಿ 2753 ಗ್ರಾಮಾಧಿಕಾರಿ ಹಾಗೂ ಗುಮಾಸ್ತ ಹುದ್ದೆಗಳ ಭರ್ತಿಗೆ ನಡೆದ ಪರೀಕ್ಷೆಯಲ್ಲಿ ಸುಮಾರು 1 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

2011 ರಿಂದ 2014ರವರೆಗೆ ನರೇಂದ್ರ ಮೋದಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಅವಧಿಯಲ್ಲೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಭಾರತದ ಪ್ರಧಾನಿಯಾಗಿಯೂ ಮೋದಿ ಆಯ್ಕೆಗೊಂಡಿದ್ದರು. ಅಭಿವೃದ್ಧಿ ಎಂದರೆ ಗುಜರಾತ್ ಎಂದು ಬೀಗುವ ಬಹುತೇಕ ಬಿಜೆಪಿ ನಾಯಕರಿಗೆ ಇಂತಹ ಅಂಶಗಳ ಮಾಹಿತಿಯೂ ತಿಳಿದಿರಬೇಕು, ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗುಜರಾತ್ ಮಾದರಿಯ ಅಭಿವೃದ್ಧಿ ಎಂದು ಬೊಗಳೆ ಬಿಡುತ್ತಿದ್ದವರು, ಇದರಿಂದ ಪಾಠ ಕಲಿಯಬೇಕು.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...