Homeಎಕಾನಮಿಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ ಎನ್ನುತ್ತಿದ್ದಾರೆ ಲಕ್ಷಾಂತರ ನಿರುದ್ಯೋಗಿಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಉನ್ನತ ಶಿಕ್ಷಣದ ಪದವೀಧರರನ್ನು 4ನೇ ದರ್ಜೆಯ ಹುದ್ದೆಗಳಿಗೆ ನೇಮಿಸುವ ಉತ್ತರಪ್ರದೇಶ ಸರ್ಕಾರವನ್ನು ಸಹ ಗುಜರಾತ್ ರಾಜ್ಯ ಹಿಂದಿಕ್ಕಿದೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ಇತ್ತೀಚೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ1,59,278 ಅಭ್ಯರ್ಥಿಗಳು ಹಾಜರಾಗಿದ್ದರು. ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರರು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಪರೀಕ್ಷೆ ಬರೆದ 19 ವೈದ್ಯರ ಪೈಕಿ 7 ಜನ ವೈದ್ಯರು ಪಿಯುನ್ ಹುದ್ದೆಗಳನ್ನು ಒಪ್ಪಿ, ವೃತ್ತಿಗೆ ಸೇರಿಕೊಂಡಿದ್ದಾರೆ. ಬಹುತೇಕರು ದಂತ ವೈದ್ಯರು ಹಾಗೂ ಹೋಮಿಯೋಪಥಿಕ್ ವೈದ್ಯರು. ಇವರಿಗೆ ಮಾಸಿಕವಾಗಿ 30 ಸಾವಿರ ರೂ.ಗಳ ವೇತನವಿದೆ.

5446 ಸ್ನಾತಕೋತ್ತರ ಪದವೀಧರರ ಪೈಕಿ ಬಹುತೇಕರು ಕಾನೂನು, ವಾಣಿಜ್ಯ, ವಿಜ್ಞಾನ ಪದವೀಧರರು. ಇವರೆಲ್ಲರೂ ಸಣ್ಣ ಮೊತ್ತದ ವೇತನಕ್ಕಾಗಿ ಪರೀಕ್ಷೆ ಬರೆದಿದ್ದರು.

ಯುಪಿಎಸ್‍ಸಿ ಪರೀಕ್ಷೆಗಳಿಗೆ ಕೋಚಿಂಗ್ ಹಾಗೂ ತರಬೇತಿ ನೀಡುವ ಬಹುತೇಕ ಸಂಸ್ಥೆಗಳ ಮಾಲೀಕರು ಸಹ ಪರೀಕ್ಷಾರ್ಥಿಗಳಾಗಿದ್ದರು. ಪಿಯುನ್, ಬೇಲೀಫ್ ಹುದ್ದೆಗಳಿಗಾಗಿ ನಡೆಸುವ ಪರೀಕ್ಷೆಗಳಲ್ಲಿ ಯಾವ ರೀತಿಯ ಪ್ರಶ್ನೆಪತ್ರಿಕೆ ಇರುತ್ತದೆ ಎಂಬುದನ್ನು ತಿಳಿಯುವುದು ಇವರ ಉದ್ದೇಶವಾಗಿತ್ತು. ಏಕೆಂದರೆ, ಈ ರೀತಿಯ ಪರೀಕ್ಷಾರ್ಥಿಗಳ ಪೈಕಿ ಬಹುತೇಕರು ಆಯ್ಕೆಗೊಂಡಿದ್ದರೂ ಕೆಲಸಕ್ಕೆ ಸೇರಿಕೊಂಡಿಲ್ಲ.

ಸಣ್ಣ ಹುದ್ದೆಗಳಿಗಾಗಿ ಏಕೆ ಪರೀಕ್ಷೆ ಬರೆದಿದ್ದೀರಿ ಎಂಬ ಪ್ರಶ್ನೆಗೆ ಉನ್ನತ ಶಿಕ್ಷಣ ಪಡೆದ ಪರಿಕ್ಷಾರ್ಥಿಗಳ ಉತ್ತರ ಹೀಗಿದೆ; “ಕೆಲಸವಿಲ್ಲದೇ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಸಣ್ಣ ಹುದ್ದೆಯ ಸರಕಾರಿ ನೌಕರಿ ಉತ್ತಮ. ಅವರನ್ನು ವರ್ಗಾವಣೆ ಮಾಡುವಂತಿಲ್ಲ. ಊರಲ್ಲೇ ಶಾಶ್ವತವಾಗಿರಬಹುದು” ಎನ್ನುತ್ತಾರೆ.

ಕಳೆದ ವರ್ಷ, ಕಂದಾಯ ಇಲಾಖೆಯಲ್ಲಿ 2753 ಗ್ರಾಮಾಧಿಕಾರಿ ಹಾಗೂ ಗುಮಾಸ್ತ ಹುದ್ದೆಗಳ ಭರ್ತಿಗೆ ನಡೆದ ಪರೀಕ್ಷೆಯಲ್ಲಿ ಸುಮಾರು 1 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

2011 ರಿಂದ 2014ರವರೆಗೆ ನರೇಂದ್ರ ಮೋದಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ಅವಧಿಯಲ್ಲೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಭಾರತದ ಪ್ರಧಾನಿಯಾಗಿಯೂ ಮೋದಿ ಆಯ್ಕೆಗೊಂಡಿದ್ದರು. ಅಭಿವೃದ್ಧಿ ಎಂದರೆ ಗುಜರಾತ್ ಎಂದು ಬೀಗುವ ಬಹುತೇಕ ಬಿಜೆಪಿ ನಾಯಕರಿಗೆ ಇಂತಹ ಅಂಶಗಳ ಮಾಹಿತಿಯೂ ತಿಳಿದಿರಬೇಕು, ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗುಜರಾತ್ ಮಾದರಿಯ ಅಭಿವೃದ್ಧಿ ಎಂದು ಬೊಗಳೆ ಬಿಡುತ್ತಿದ್ದವರು, ಇದರಿಂದ ಪಾಠ ಕಲಿಯಬೇಕು.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...