Homeಕರ್ನಾಟಕಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ...

ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆ ಮತ್ತು ನವ ಉದಾರವಾದಿ ನೀತಿಗಳ ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐ-ಎಂ) ಪಾಲಿಟ್‌ ಬ್ಯೂರೋ ಸದಸ್ಯ ಪ್ರಕಾಶ್‌ ಕಾರಟ್‌ ಸೋಮವಾರ ಹೇಳಿದ್ದಾರೆ. ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನವರಿ 2 ರಿಂದ 4ರವರೆಗೆ ನಡೆಯುತ್ತಿರುವ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

“ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕೋಟ್ಯಾಂತರ ಜನ ಬಾಧಿತರಾಗಿದ್ದು ಲಕ್ಷಾಂತರ ಜನ ಅಸುನೀಗಿದ್ದಾರೆ. ಅತ್ಯಂತ ಮುಂದುವರೆದ ದೇಶಗಳಲ್ಲೂ ದಿನಂಪ್ರತಿ ಸಾವಿರಾರು ಜನ ಬಲಿಯಾಗುತ್ತಿದ್ದಾರೆ. ಇದು ಸಾರ್ವಜನಿಕ ವ್ಯವಸ್ಥೆಯನ್ನು ಬಲಪಡಿಸದೆ ಖಾಸಗೀಕರಣ ಮಾಡಿದ್ದರ ಪರಿಣಾಮ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

“ಇದಕ್ಕೆ ವಿರುದ್ಧವಾಗಿ ಸಮಾಜವಾದಿ ಕ್ಯೂಬಾದಲ್ಲಿ ಸಾಂಕ್ರಾಮಿಕವನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಿದ್ದಲ್ಲದೆ, ಆರು ರೀತಿಯ ಲಸಿಕೆಗಳನ್ನು ಬಳಸಲಾಗುತ್ತಿದೆ. ಇದು ಸ್ಪಷ್ಟವಾಗಿ ಬಂಡವಾಳಶಾಹಿ ಮತ್ತು ಸಮಾಜವಾದಿ ವ್ಯವಸ್ಥೆಯ ನಡುವಿನ ಪ್ರಧಾನ ವೈರುಧ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಡದೇಶಗಳು ಹಾಗೂ ಮುಂದುವರೆದ ದೇಶಗಳ ನಡುವಿನ ವೈರುಧ್ಯ ತೀವ್ರಗೊಳ್ಳುತ್ತಿರುವುದು ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಎದ್ದುಕಾಣುತ್ತಿದೆ. ಇಂದಿಗೂ ಆಫ್ರಿಕನ್‌ ದೇಶಗಳಲ್ಲಿ 70% ದಷ್ಟು ಜನರಿಗೆ ಲಸಿಕೆ ಲಭ್ಯವಾಗಿಲ್ಲ ಎಂಬ ವರದಿಗಳಿವೆ. ಲಸಿಕೆಯ ಪೇಟೆಂಟ್‌ ಪಡೆದಿರುವ ಕಾರ್ಪೋರೇಟ್‌ ಕಂಪನಿಗಳು ತಮ್ಮ ಲಾಭಕೋರತನದಿಂದ ದುಬಾರಿ ದರಗಳನ್ನು ನಿಗದಿ ಮಾಡಿ ಬಹುಸಂಖ್ಯಾತ ಜನ ಲಸಿಕೆಯಿಂದ ವಂಚಿತರಾಗುವಂತೆ ಮಾಡಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಹಿಂದುತ್ವ ಪ್ರತಿಪಾದನೆಯ ಅಜೆಂಡಾಗಳನ್ನು ಕೋವಿಡ್‌ ಸಾಂಕ್ರಾಮಿಕದಲ್ಲೂ ಮುಂದುವರೆಸಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ನಡೆಯಿಂದಾಗಿ ದೇಶದ ಆರ್ಥಿಕ ಸ್ಥಿತಿಗತಿ ಪಾತಾಳಕ್ಕೆ ಕುಸಿದಿದೆ. ಭಾರೀ ಪ್ರಮಾಣದ ನಿರುದ್ಯೋಗ ತಲೆದೂರಿದೆ. ಮಧ್ಯಮ ವರ್ಗದ ಜನ ಬಡತನ ರೇಖೆಗೆ ತಳ್ಳಲ್ಪಟ್ಟಿದ್ದಾರೆ. ಅಮೇರಿಕ ಪ್ರೇರಿತ ಉದಾರವಾದಿ ನೀತಿಗಳ ಫಲವಾಗಿ ಇವು ನಡೆಯುತ್ತಿವೆ. ಇದರ ಬೆನ್ನಲ್ಲೇ ಚಿಲಿ ಸೇರಿದಂತೆ ಲ್ಯಾಟಿನ್‌ ಅಮೇರಿಕ ದೇಶಗಳಲ್ಲಿ ರೈತರು ಕಾರ್ಮಿಕರು ವಿದ್ಯಾರ್ಥಿ, ಯುವಜನರ ಪ್ರಬಲ ಪ್ರತಿಭಟನೆಗಳು ನವ-ಉದಾರವಾದಿ ನೀತಿಗಳ ವಿರುದ್ಧ ಎದ್ದುಬರುತ್ತಿವೆ. ಪರಿಣಾಮ ಎಡಪಂಥೀಯ ಸರ್ಕಾರಗಳು ಅಸ್ತಿತ್ವಕ್ಕೆ ಬರುತ್ತಿರುವುದು ಬಂಡವಾಳಶಾಹಿ ವ್ಯವಸ್ಥೆಗೆ ಸಮಾಜವಾದಿ ವ್ಯವಸ್ಥೆಯೇ ಪರ್ಯಾಯ ಎಂಬುದರ ಸಂಕೇತವಾಗಿದೆ. ಬಲಪಂಥೀಯ ಸರ್ಕಾರಗಳ ವಿರುದ್ಧ ಜಗತ್ತಿನಾದ್ಯಂತ ಬೆಳೆದುಬರುತ್ತಿರುವ ಜನರ ಪ್ರತಿರೋಧ ಇತಿಹಾಸ ಚಕ್ರ ತಿರುಗುತ್ತಿರುವುದರ ಸ್ಪಷ್ಟ ಸಂದೇಶವಾಗಿದೆ” ಎಂದು ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ದೇಶ ಮತ್ತು ಏಷ್ಯಾದ ಅನೇಕ ದೇಶಗಳು ಅಮೇರಿಕಾದ ಸಾಮ್ರಾಜ್ಯಶಾಹಿ ಜೊತೆಗೆ ಮೈತ್ರಿಗೆ ಮುಂದಾಗಿವೆ. ಜಗತ್ತಿನ ಎರಡನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಚೀನಾಗೆ ಪೈಪೋಟಿ ನೀಡಲು ಹಾಗೂ ಅದರ ಆರ್ಥಿಕ ಶಕ್ತಿಯನ್ನು ದುರ್ಬಲಗೊಳಿಸಲು ಇಂತಹ ಮೈತ್ರಿ ಏರ್ಪಡುತ್ತಿದೆ. ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಹೇರುತ್ತಿದೆ. ಸಾರ್ವಜನಿಕ ರಂಗವನ್ನು ಸಂಪೂರ್ಣವಾಗಿ ನಾಶಪಡಿಸಿ, ಅವೆಲ್ಲವನ್ನು ಕಾರ್ಪೋರೇಟ್‌ ತೆಕ್ಕೆಗೆ ಸೇರಿಸುವ ಪ್ರಯತ್ನ ನಡೆದಿದೆ. ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ ಮೂಲಕ ಇಂತವುಗಳನ್ನು ಮುಂದುವರೆಸಲಾಗುತ್ತಿದೆ. ಇದು ಹಿಂದುತ್ವ ಮತ್ತು ಕಾರ್ಪೋರೇಟ್‌ ಶಕ್ತಿಗಳು ಪರಸ್ಪರ ಅನುಕೂಲತೆಗಳಿಗೆ ತಮ್ಮ ಅಜೆಂಡಾಗಳನ್ನು ಜಾರಿ ಮಾಡಲು ಇಂತಹ ಅಪವಿತ್ರ ಮೈತ್ರಿ ಏರ್ಪಟ್ಟಿದೆ ಎಂಬುದು ಸ್ಪಷ್ಟ” ಎಂದು ಅವರು ಹೇಳಿದ್ದಾರೆ.

“ದೇಶದಲ್ಲಿ ಆರಂಭಗೊಂಡ ರೈತ-ಕಾರ್ಮಿಕರ ಜಂಟಿ ಹೋರಾಟಗಳು ನವ-ಉದಾರವಾದಿ ನೀತಿಗಳನ್ನು ಸಮರೋಪಾದಿಯಲ್ಲಿ ಜಾರಿ ಮಾಡುವ ಮೋದಿ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿ ನಿಂತಿವೆ. ಜನತೆಯ ಪ್ರಬಲ ಹೋರಾಟಗಳೇ ನವ-ಉದಾರವಾದಿ ನೀತಿಗಳ ವಿರುದ್ಧದ ಅಸ್ತ್ರಗಳಾಗಿವೆ. ಹಿಂದುತ್ವ ಕಾರ್ಪೋರೇಟ್‌ ಯಜಮಾನಿಕೆಗೆ ಪರ್ಯಾಯವನ್ನು ರೂಪಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ದೇಶದ ಅವಕಾಶವಾದಿ ಪಕ್ಷಗಳು ಇದಕ್ಕೆ ಪರ್ಯಾಯವಲ್ಲ. ಅದರಲ್ಲಿರುವ ರಾಜಿ ಮನೋಭಾವ ಇದಕ್ಕೆ ಅಡ್ಡಿಯಾಗಿದೆ. ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಮಾತ್ರವೇ ಪರ್ಯಾಯವನ್ನು ರೂಪಿಸಲು ಸಾಧ್ಯ. ಇತಿಹಾಸದುದ್ದಕ್ಕೂ ಜನವಿರೋಧಿ ನೀತಿಗಳಿಗೆ ಪರ್ಯಾಯ ಶಕ್ತಿಯಾಗಿ ಹೋರಾಟದಲ್ಲಿರುವ ಸಿಪಿಐ(ಎಂ) ಪಕ್ಷವನ್ನು ಬಲಪಡಿಸದೆ, ಪರ್ಯಾಯ ರೂಪಿಸಲು ಸಾಧ್ಯವಿಲ್ಲ. ಈ ಬಗ್ಗೆ ಸಿಪಿಐ(ಎಂ)ನ ಅಖಿಲ ಭಾರತ ಸಮ್ಮೇಳನದಲ್ಲಿ ಗಂಭೀರವಾಗಿ ಚರ್ಚೆ ನಡೆಸಲಿದ್ದೇವೆ” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

“ಮೋದಿ ಸರ್ಕಾರದ ನವಭಾರತ ನಿರ್ಮಾಣದ ಮಾತುಗಳು ಕೃತಿಯಲ್ಲಿ ಕಾಣುತ್ತಿಲ್ಲ. ಹಿಂದುತ್ವವಾದಿ ಅಜೆಂಡಾಗಳನ್ನು ಜಾರಿಮಾಡುವ ಅದರ ಪ್ರಯತ್ನದಿಂದಾಗಿ ನವಭಾರತದ ಬದಲು ದೇಶ ಹಿಮ್ಮುಖ ಚಲನೆಯನ್ನು ಕಾಣುತ್ತಿದೆ. ಕಾಶ್ಮೀರದಲ್ಲಿ ಕಲಂ 370 ತೆಗೆದದ್ದು ಇದಕ್ಕೊಂದು ಉದಾಹರಣೆ. ರಾಮಮಂದಿರ ಅಡಿಗಲ್ಲು ಹಾಕುವ ಜೊತೆಯಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗಿರುವುದು ಧರ್ಮದ ಆಧಾರದಲ್ಲಿ ಪೌರತ್ವ ನೀಡುವ ನೀತಿಯು ಸಂವಿಧಾನ ವಿರೋಧಿ ನಡೆಯಾಗಿದೆ. ಸಾಂವಿಧಾನಿಕ ಸಂಸ್ಥೆಗಳಲ್ಲಿ ಹಿಂದುತ್ವ ಅಜೆಂಡಾವನ್ನು ಹೇರುತ್ತಾ ಆ ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ. ಹೊಸ ಸಂಸತ್‌ ಭವನ ನಿರ್ಮಾಣ ಮಾಡುತ್ತಿರುವಾಗಲೇ ಈಗಿರುವ ಸಂಸತ್‌ ಭವನವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಮುಂದಾಗಿದೆ. ಇದರ ಅರ್ಥ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವನ್ನು ಮ್ಯೂಸಿಯಂನಲ್ಲಿ ಬಂಧಿಸಲು ಹೊಂಚು ಹಾಕಲಾಗಿದೆ. ಈಗಾಗಲೇ ಸಂಸತ್‌ ಅನ್ನು ಅಮಾನತ್ತಿನಲ್ಲಿಟ್ಟು ಏಕಪಕ್ಷೀಯವಾಗಿ ನೀತಿಗಳನ್ನು ತರುತ್ತಿರುವುದು ಇದರ ಸ್ಪಷ್ಟ ಸಂದೇಶವಾಗಿದೆ” ಎಂದು ಪ್ರಕಾಶ್‌‌ ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

“ಕರ್ನಾಟಕ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವ ಮೂಲಕ ಕ್ರಿಶ್ಚಿಯನ್ನರ ಮೇಲೆ ಧಾಳಿ ಮಾಡಲು ಮುಂದಾಗಿದೆ. ಮುಸ್ಲಿಮರು ಕ್ರಿಶ್ಚಿಯನ್ನರು ಮತ್ತು ಕಮ್ಯೂನಿಸ್ಟರು ದೇಶದ ಆಂತರಿಕ ಶತ್ರುಗಳು ಎಂಬ ಗೋಳ್ವಾಲ್ಕರ್‌ ಧೋರಣೆಯನ್ನು ಜಾರಿ ಮಾಡಲು ಪ್ರಯತ್ನ ನಡೆದಿದೆ. ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಕರ್ನಾಟಕ ಸರ್ಕಾರದ ನೀತಿಯು ದೇವಸ್ಥಾನಗಳ ಭಾಗವಾಗಿರುವ ಅಪಾರ ಪ್ರಮಾಣದ ಭೂಮಿ-ಆಸ್ತಿಯನ್ನು ಲಪಟಾಯಿಸಲು ಅನುಕೂಲವಾಗುವಂತೆ ನೀತಿಗಳಲ್ಲಿ ಮಾರ್ಪಾಡು ಮಾಡಲಾಗುತ್ತಿದೆ. ಜೊತೆಗೆ ದೇವಸ್ಥಾನಗಳನ್ನು ಆರ್‌ಎಸ್‌ಎಸ್‌ ಹಿಡಿತಕ್ಕೆ ವಹಿಸುವ ಪ್ರಯತ್ನದ ಭಾಗವಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಬಿಜೆಪಿ ನೇತೃತ್ವದ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಮಾನೀಕೆಯ ವಿರುದ್ಧ ಹೋರಾಟಗಳನ್ನು ರೂಪಿಸಲು ರಾಜ್ಯ ಸಮ್ಮೇಳನ ಹಾಗೂ ಏಪ್ರಿಲ್‌ನಲ್ಲಿ ಕಣ್ಣೂರಿನಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದಲ್ಲಿ ತೀರ್ಮಾನಿಸಲಾಗುವುದು” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿತ್ಯಾನಂದಸ್ವಾಮಿ ವಹಿಸಿದ್ದರು. ವೇದಿಕೆಯಲ್ಲಿ ಪೊಲಿಟ್ ಬ್ಯೂರೋ ಸದಸ್ಯರಾದ ಎಂ.ಎ ಬೇಬಿ, ಬಿ.ವಿ. ರಾಘವಲು, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ,  ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಜಿ.ನಾಗರಾಜ, ರಾಜ್ಯ ಮುಖಂಡರಾದ ಎಸ್. ವರಲಕ್ಷ್ಮಿ, ಕೆ.ಶಂಕರ್, ಜೆ.ಬಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಸುಂದರಂ, ಕೆ.ಎನ್ ಉಮೇಶ್, ವಿಜೆಕೆ ನಾಯರ್, ಜಿ.ಎನ್. ನಾಗರಾಜ್, ವಸಂತ ಆಚಾರಿ, ಗಂಗಾವತಿ ತಾಲ್ಲೂಕ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಸೇರಿದಂತೆ ಅನೇಕರಿದ್ದರು.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...