Homeಕರ್ನಾಟಕಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ...

ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆ ಮತ್ತು ನವ ಉದಾರವಾದಿ ನೀತಿಗಳ ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐ-ಎಂ) ಪಾಲಿಟ್‌ ಬ್ಯೂರೋ ಸದಸ್ಯ ಪ್ರಕಾಶ್‌ ಕಾರಟ್‌ ಸೋಮವಾರ ಹೇಳಿದ್ದಾರೆ. ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನವರಿ 2 ರಿಂದ 4ರವರೆಗೆ ನಡೆಯುತ್ತಿರುವ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

“ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕೋಟ್ಯಾಂತರ ಜನ ಬಾಧಿತರಾಗಿದ್ದು ಲಕ್ಷಾಂತರ ಜನ ಅಸುನೀಗಿದ್ದಾರೆ. ಅತ್ಯಂತ ಮುಂದುವರೆದ ದೇಶಗಳಲ್ಲೂ ದಿನಂಪ್ರತಿ ಸಾವಿರಾರು ಜನ ಬಲಿಯಾಗುತ್ತಿದ್ದಾರೆ. ಇದು ಸಾರ್ವಜನಿಕ ವ್ಯವಸ್ಥೆಯನ್ನು ಬಲಪಡಿಸದೆ ಖಾಸಗೀಕರಣ ಮಾಡಿದ್ದರ ಪರಿಣಾಮ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

“ಇದಕ್ಕೆ ವಿರುದ್ಧವಾಗಿ ಸಮಾಜವಾದಿ ಕ್ಯೂಬಾದಲ್ಲಿ ಸಾಂಕ್ರಾಮಿಕವನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಿದ್ದಲ್ಲದೆ, ಆರು ರೀತಿಯ ಲಸಿಕೆಗಳನ್ನು ಬಳಸಲಾಗುತ್ತಿದೆ. ಇದು ಸ್ಪಷ್ಟವಾಗಿ ಬಂಡವಾಳಶಾಹಿ ಮತ್ತು ಸಮಾಜವಾದಿ ವ್ಯವಸ್ಥೆಯ ನಡುವಿನ ಪ್ರಧಾನ ವೈರುಧ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಡದೇಶಗಳು ಹಾಗೂ ಮುಂದುವರೆದ ದೇಶಗಳ ನಡುವಿನ ವೈರುಧ್ಯ ತೀವ್ರಗೊಳ್ಳುತ್ತಿರುವುದು ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಎದ್ದುಕಾಣುತ್ತಿದೆ. ಇಂದಿಗೂ ಆಫ್ರಿಕನ್‌ ದೇಶಗಳಲ್ಲಿ 70% ದಷ್ಟು ಜನರಿಗೆ ಲಸಿಕೆ ಲಭ್ಯವಾಗಿಲ್ಲ ಎಂಬ ವರದಿಗಳಿವೆ. ಲಸಿಕೆಯ ಪೇಟೆಂಟ್‌ ಪಡೆದಿರುವ ಕಾರ್ಪೋರೇಟ್‌ ಕಂಪನಿಗಳು ತಮ್ಮ ಲಾಭಕೋರತನದಿಂದ ದುಬಾರಿ ದರಗಳನ್ನು ನಿಗದಿ ಮಾಡಿ ಬಹುಸಂಖ್ಯಾತ ಜನ ಲಸಿಕೆಯಿಂದ ವಂಚಿತರಾಗುವಂತೆ ಮಾಡಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಹಿಂದುತ್ವ ಪ್ರತಿಪಾದನೆಯ ಅಜೆಂಡಾಗಳನ್ನು ಕೋವಿಡ್‌ ಸಾಂಕ್ರಾಮಿಕದಲ್ಲೂ ಮುಂದುವರೆಸಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ನಡೆಯಿಂದಾಗಿ ದೇಶದ ಆರ್ಥಿಕ ಸ್ಥಿತಿಗತಿ ಪಾತಾಳಕ್ಕೆ ಕುಸಿದಿದೆ. ಭಾರೀ ಪ್ರಮಾಣದ ನಿರುದ್ಯೋಗ ತಲೆದೂರಿದೆ. ಮಧ್ಯಮ ವರ್ಗದ ಜನ ಬಡತನ ರೇಖೆಗೆ ತಳ್ಳಲ್ಪಟ್ಟಿದ್ದಾರೆ. ಅಮೇರಿಕ ಪ್ರೇರಿತ ಉದಾರವಾದಿ ನೀತಿಗಳ ಫಲವಾಗಿ ಇವು ನಡೆಯುತ್ತಿವೆ. ಇದರ ಬೆನ್ನಲ್ಲೇ ಚಿಲಿ ಸೇರಿದಂತೆ ಲ್ಯಾಟಿನ್‌ ಅಮೇರಿಕ ದೇಶಗಳಲ್ಲಿ ರೈತರು ಕಾರ್ಮಿಕರು ವಿದ್ಯಾರ್ಥಿ, ಯುವಜನರ ಪ್ರಬಲ ಪ್ರತಿಭಟನೆಗಳು ನವ-ಉದಾರವಾದಿ ನೀತಿಗಳ ವಿರುದ್ಧ ಎದ್ದುಬರುತ್ತಿವೆ. ಪರಿಣಾಮ ಎಡಪಂಥೀಯ ಸರ್ಕಾರಗಳು ಅಸ್ತಿತ್ವಕ್ಕೆ ಬರುತ್ತಿರುವುದು ಬಂಡವಾಳಶಾಹಿ ವ್ಯವಸ್ಥೆಗೆ ಸಮಾಜವಾದಿ ವ್ಯವಸ್ಥೆಯೇ ಪರ್ಯಾಯ ಎಂಬುದರ ಸಂಕೇತವಾಗಿದೆ. ಬಲಪಂಥೀಯ ಸರ್ಕಾರಗಳ ವಿರುದ್ಧ ಜಗತ್ತಿನಾದ್ಯಂತ ಬೆಳೆದುಬರುತ್ತಿರುವ ಜನರ ಪ್ರತಿರೋಧ ಇತಿಹಾಸ ಚಕ್ರ ತಿರುಗುತ್ತಿರುವುದರ ಸ್ಪಷ್ಟ ಸಂದೇಶವಾಗಿದೆ” ಎಂದು ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ದೇಶ ಮತ್ತು ಏಷ್ಯಾದ ಅನೇಕ ದೇಶಗಳು ಅಮೇರಿಕಾದ ಸಾಮ್ರಾಜ್ಯಶಾಹಿ ಜೊತೆಗೆ ಮೈತ್ರಿಗೆ ಮುಂದಾಗಿವೆ. ಜಗತ್ತಿನ ಎರಡನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಚೀನಾಗೆ ಪೈಪೋಟಿ ನೀಡಲು ಹಾಗೂ ಅದರ ಆರ್ಥಿಕ ಶಕ್ತಿಯನ್ನು ದುರ್ಬಲಗೊಳಿಸಲು ಇಂತಹ ಮೈತ್ರಿ ಏರ್ಪಡುತ್ತಿದೆ. ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಹೇರುತ್ತಿದೆ. ಸಾರ್ವಜನಿಕ ರಂಗವನ್ನು ಸಂಪೂರ್ಣವಾಗಿ ನಾಶಪಡಿಸಿ, ಅವೆಲ್ಲವನ್ನು ಕಾರ್ಪೋರೇಟ್‌ ತೆಕ್ಕೆಗೆ ಸೇರಿಸುವ ಪ್ರಯತ್ನ ನಡೆದಿದೆ. ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ ಮೂಲಕ ಇಂತವುಗಳನ್ನು ಮುಂದುವರೆಸಲಾಗುತ್ತಿದೆ. ಇದು ಹಿಂದುತ್ವ ಮತ್ತು ಕಾರ್ಪೋರೇಟ್‌ ಶಕ್ತಿಗಳು ಪರಸ್ಪರ ಅನುಕೂಲತೆಗಳಿಗೆ ತಮ್ಮ ಅಜೆಂಡಾಗಳನ್ನು ಜಾರಿ ಮಾಡಲು ಇಂತಹ ಅಪವಿತ್ರ ಮೈತ್ರಿ ಏರ್ಪಟ್ಟಿದೆ ಎಂಬುದು ಸ್ಪಷ್ಟ” ಎಂದು ಅವರು ಹೇಳಿದ್ದಾರೆ.

“ದೇಶದಲ್ಲಿ ಆರಂಭಗೊಂಡ ರೈತ-ಕಾರ್ಮಿಕರ ಜಂಟಿ ಹೋರಾಟಗಳು ನವ-ಉದಾರವಾದಿ ನೀತಿಗಳನ್ನು ಸಮರೋಪಾದಿಯಲ್ಲಿ ಜಾರಿ ಮಾಡುವ ಮೋದಿ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿ ನಿಂತಿವೆ. ಜನತೆಯ ಪ್ರಬಲ ಹೋರಾಟಗಳೇ ನವ-ಉದಾರವಾದಿ ನೀತಿಗಳ ವಿರುದ್ಧದ ಅಸ್ತ್ರಗಳಾಗಿವೆ. ಹಿಂದುತ್ವ ಕಾರ್ಪೋರೇಟ್‌ ಯಜಮಾನಿಕೆಗೆ ಪರ್ಯಾಯವನ್ನು ರೂಪಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ದೇಶದ ಅವಕಾಶವಾದಿ ಪಕ್ಷಗಳು ಇದಕ್ಕೆ ಪರ್ಯಾಯವಲ್ಲ. ಅದರಲ್ಲಿರುವ ರಾಜಿ ಮನೋಭಾವ ಇದಕ್ಕೆ ಅಡ್ಡಿಯಾಗಿದೆ. ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಮಾತ್ರವೇ ಪರ್ಯಾಯವನ್ನು ರೂಪಿಸಲು ಸಾಧ್ಯ. ಇತಿಹಾಸದುದ್ದಕ್ಕೂ ಜನವಿರೋಧಿ ನೀತಿಗಳಿಗೆ ಪರ್ಯಾಯ ಶಕ್ತಿಯಾಗಿ ಹೋರಾಟದಲ್ಲಿರುವ ಸಿಪಿಐ(ಎಂ) ಪಕ್ಷವನ್ನು ಬಲಪಡಿಸದೆ, ಪರ್ಯಾಯ ರೂಪಿಸಲು ಸಾಧ್ಯವಿಲ್ಲ. ಈ ಬಗ್ಗೆ ಸಿಪಿಐ(ಎಂ)ನ ಅಖಿಲ ಭಾರತ ಸಮ್ಮೇಳನದಲ್ಲಿ ಗಂಭೀರವಾಗಿ ಚರ್ಚೆ ನಡೆಸಲಿದ್ದೇವೆ” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

“ಮೋದಿ ಸರ್ಕಾರದ ನವಭಾರತ ನಿರ್ಮಾಣದ ಮಾತುಗಳು ಕೃತಿಯಲ್ಲಿ ಕಾಣುತ್ತಿಲ್ಲ. ಹಿಂದುತ್ವವಾದಿ ಅಜೆಂಡಾಗಳನ್ನು ಜಾರಿಮಾಡುವ ಅದರ ಪ್ರಯತ್ನದಿಂದಾಗಿ ನವಭಾರತದ ಬದಲು ದೇಶ ಹಿಮ್ಮುಖ ಚಲನೆಯನ್ನು ಕಾಣುತ್ತಿದೆ. ಕಾಶ್ಮೀರದಲ್ಲಿ ಕಲಂ 370 ತೆಗೆದದ್ದು ಇದಕ್ಕೊಂದು ಉದಾಹರಣೆ. ರಾಮಮಂದಿರ ಅಡಿಗಲ್ಲು ಹಾಕುವ ಜೊತೆಯಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗಿರುವುದು ಧರ್ಮದ ಆಧಾರದಲ್ಲಿ ಪೌರತ್ವ ನೀಡುವ ನೀತಿಯು ಸಂವಿಧಾನ ವಿರೋಧಿ ನಡೆಯಾಗಿದೆ. ಸಾಂವಿಧಾನಿಕ ಸಂಸ್ಥೆಗಳಲ್ಲಿ ಹಿಂದುತ್ವ ಅಜೆಂಡಾವನ್ನು ಹೇರುತ್ತಾ ಆ ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ. ಹೊಸ ಸಂಸತ್‌ ಭವನ ನಿರ್ಮಾಣ ಮಾಡುತ್ತಿರುವಾಗಲೇ ಈಗಿರುವ ಸಂಸತ್‌ ಭವನವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಮುಂದಾಗಿದೆ. ಇದರ ಅರ್ಥ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವನ್ನು ಮ್ಯೂಸಿಯಂನಲ್ಲಿ ಬಂಧಿಸಲು ಹೊಂಚು ಹಾಕಲಾಗಿದೆ. ಈಗಾಗಲೇ ಸಂಸತ್‌ ಅನ್ನು ಅಮಾನತ್ತಿನಲ್ಲಿಟ್ಟು ಏಕಪಕ್ಷೀಯವಾಗಿ ನೀತಿಗಳನ್ನು ತರುತ್ತಿರುವುದು ಇದರ ಸ್ಪಷ್ಟ ಸಂದೇಶವಾಗಿದೆ” ಎಂದು ಪ್ರಕಾಶ್‌‌ ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

“ಕರ್ನಾಟಕ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವ ಮೂಲಕ ಕ್ರಿಶ್ಚಿಯನ್ನರ ಮೇಲೆ ಧಾಳಿ ಮಾಡಲು ಮುಂದಾಗಿದೆ. ಮುಸ್ಲಿಮರು ಕ್ರಿಶ್ಚಿಯನ್ನರು ಮತ್ತು ಕಮ್ಯೂನಿಸ್ಟರು ದೇಶದ ಆಂತರಿಕ ಶತ್ರುಗಳು ಎಂಬ ಗೋಳ್ವಾಲ್ಕರ್‌ ಧೋರಣೆಯನ್ನು ಜಾರಿ ಮಾಡಲು ಪ್ರಯತ್ನ ನಡೆದಿದೆ. ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಕರ್ನಾಟಕ ಸರ್ಕಾರದ ನೀತಿಯು ದೇವಸ್ಥಾನಗಳ ಭಾಗವಾಗಿರುವ ಅಪಾರ ಪ್ರಮಾಣದ ಭೂಮಿ-ಆಸ್ತಿಯನ್ನು ಲಪಟಾಯಿಸಲು ಅನುಕೂಲವಾಗುವಂತೆ ನೀತಿಗಳಲ್ಲಿ ಮಾರ್ಪಾಡು ಮಾಡಲಾಗುತ್ತಿದೆ. ಜೊತೆಗೆ ದೇವಸ್ಥಾನಗಳನ್ನು ಆರ್‌ಎಸ್‌ಎಸ್‌ ಹಿಡಿತಕ್ಕೆ ವಹಿಸುವ ಪ್ರಯತ್ನದ ಭಾಗವಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಬಿಜೆಪಿ ನೇತೃತ್ವದ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಮಾನೀಕೆಯ ವಿರುದ್ಧ ಹೋರಾಟಗಳನ್ನು ರೂಪಿಸಲು ರಾಜ್ಯ ಸಮ್ಮೇಳನ ಹಾಗೂ ಏಪ್ರಿಲ್‌ನಲ್ಲಿ ಕಣ್ಣೂರಿನಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದಲ್ಲಿ ತೀರ್ಮಾನಿಸಲಾಗುವುದು” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿತ್ಯಾನಂದಸ್ವಾಮಿ ವಹಿಸಿದ್ದರು. ವೇದಿಕೆಯಲ್ಲಿ ಪೊಲಿಟ್ ಬ್ಯೂರೋ ಸದಸ್ಯರಾದ ಎಂ.ಎ ಬೇಬಿ, ಬಿ.ವಿ. ರಾಘವಲು, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ,  ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಜಿ.ನಾಗರಾಜ, ರಾಜ್ಯ ಮುಖಂಡರಾದ ಎಸ್. ವರಲಕ್ಷ್ಮಿ, ಕೆ.ಶಂಕರ್, ಜೆ.ಬಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಸುಂದರಂ, ಕೆ.ಎನ್ ಉಮೇಶ್, ವಿಜೆಕೆ ನಾಯರ್, ಜಿ.ಎನ್. ನಾಗರಾಜ್, ವಸಂತ ಆಚಾರಿ, ಗಂಗಾವತಿ ತಾಲ್ಲೂಕ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಸೇರಿದಂತೆ ಅನೇಕರಿದ್ದರು.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....