Homeಕರ್ನಾಟಕಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ...

ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆ ಮತ್ತು ನವ ಉದಾರವಾದಿ ನೀತಿಗಳ ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐ-ಎಂ) ಪಾಲಿಟ್‌ ಬ್ಯೂರೋ ಸದಸ್ಯ ಪ್ರಕಾಶ್‌ ಕಾರಟ್‌ ಸೋಮವಾರ ಹೇಳಿದ್ದಾರೆ. ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನವರಿ 2 ರಿಂದ 4ರವರೆಗೆ ನಡೆಯುತ್ತಿರುವ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

“ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕೋಟ್ಯಾಂತರ ಜನ ಬಾಧಿತರಾಗಿದ್ದು ಲಕ್ಷಾಂತರ ಜನ ಅಸುನೀಗಿದ್ದಾರೆ. ಅತ್ಯಂತ ಮುಂದುವರೆದ ದೇಶಗಳಲ್ಲೂ ದಿನಂಪ್ರತಿ ಸಾವಿರಾರು ಜನ ಬಲಿಯಾಗುತ್ತಿದ್ದಾರೆ. ಇದು ಸಾರ್ವಜನಿಕ ವ್ಯವಸ್ಥೆಯನ್ನು ಬಲಪಡಿಸದೆ ಖಾಸಗೀಕರಣ ಮಾಡಿದ್ದರ ಪರಿಣಾಮ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

“ಇದಕ್ಕೆ ವಿರುದ್ಧವಾಗಿ ಸಮಾಜವಾದಿ ಕ್ಯೂಬಾದಲ್ಲಿ ಸಾಂಕ್ರಾಮಿಕವನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಿದ್ದಲ್ಲದೆ, ಆರು ರೀತಿಯ ಲಸಿಕೆಗಳನ್ನು ಬಳಸಲಾಗುತ್ತಿದೆ. ಇದು ಸ್ಪಷ್ಟವಾಗಿ ಬಂಡವಾಳಶಾಹಿ ಮತ್ತು ಸಮಾಜವಾದಿ ವ್ಯವಸ್ಥೆಯ ನಡುವಿನ ಪ್ರಧಾನ ವೈರುಧ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಡದೇಶಗಳು ಹಾಗೂ ಮುಂದುವರೆದ ದೇಶಗಳ ನಡುವಿನ ವೈರುಧ್ಯ ತೀವ್ರಗೊಳ್ಳುತ್ತಿರುವುದು ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಎದ್ದುಕಾಣುತ್ತಿದೆ. ಇಂದಿಗೂ ಆಫ್ರಿಕನ್‌ ದೇಶಗಳಲ್ಲಿ 70% ದಷ್ಟು ಜನರಿಗೆ ಲಸಿಕೆ ಲಭ್ಯವಾಗಿಲ್ಲ ಎಂಬ ವರದಿಗಳಿವೆ. ಲಸಿಕೆಯ ಪೇಟೆಂಟ್‌ ಪಡೆದಿರುವ ಕಾರ್ಪೋರೇಟ್‌ ಕಂಪನಿಗಳು ತಮ್ಮ ಲಾಭಕೋರತನದಿಂದ ದುಬಾರಿ ದರಗಳನ್ನು ನಿಗದಿ ಮಾಡಿ ಬಹುಸಂಖ್ಯಾತ ಜನ ಲಸಿಕೆಯಿಂದ ವಂಚಿತರಾಗುವಂತೆ ಮಾಡಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಹಿಂದುತ್ವ ಪ್ರತಿಪಾದನೆಯ ಅಜೆಂಡಾಗಳನ್ನು ಕೋವಿಡ್‌ ಸಾಂಕ್ರಾಮಿಕದಲ್ಲೂ ಮುಂದುವರೆಸಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ನಡೆಯಿಂದಾಗಿ ದೇಶದ ಆರ್ಥಿಕ ಸ್ಥಿತಿಗತಿ ಪಾತಾಳಕ್ಕೆ ಕುಸಿದಿದೆ. ಭಾರೀ ಪ್ರಮಾಣದ ನಿರುದ್ಯೋಗ ತಲೆದೂರಿದೆ. ಮಧ್ಯಮ ವರ್ಗದ ಜನ ಬಡತನ ರೇಖೆಗೆ ತಳ್ಳಲ್ಪಟ್ಟಿದ್ದಾರೆ. ಅಮೇರಿಕ ಪ್ರೇರಿತ ಉದಾರವಾದಿ ನೀತಿಗಳ ಫಲವಾಗಿ ಇವು ನಡೆಯುತ್ತಿವೆ. ಇದರ ಬೆನ್ನಲ್ಲೇ ಚಿಲಿ ಸೇರಿದಂತೆ ಲ್ಯಾಟಿನ್‌ ಅಮೇರಿಕ ದೇಶಗಳಲ್ಲಿ ರೈತರು ಕಾರ್ಮಿಕರು ವಿದ್ಯಾರ್ಥಿ, ಯುವಜನರ ಪ್ರಬಲ ಪ್ರತಿಭಟನೆಗಳು ನವ-ಉದಾರವಾದಿ ನೀತಿಗಳ ವಿರುದ್ಧ ಎದ್ದುಬರುತ್ತಿವೆ. ಪರಿಣಾಮ ಎಡಪಂಥೀಯ ಸರ್ಕಾರಗಳು ಅಸ್ತಿತ್ವಕ್ಕೆ ಬರುತ್ತಿರುವುದು ಬಂಡವಾಳಶಾಹಿ ವ್ಯವಸ್ಥೆಗೆ ಸಮಾಜವಾದಿ ವ್ಯವಸ್ಥೆಯೇ ಪರ್ಯಾಯ ಎಂಬುದರ ಸಂಕೇತವಾಗಿದೆ. ಬಲಪಂಥೀಯ ಸರ್ಕಾರಗಳ ವಿರುದ್ಧ ಜಗತ್ತಿನಾದ್ಯಂತ ಬೆಳೆದುಬರುತ್ತಿರುವ ಜನರ ಪ್ರತಿರೋಧ ಇತಿಹಾಸ ಚಕ್ರ ತಿರುಗುತ್ತಿರುವುದರ ಸ್ಪಷ್ಟ ಸಂದೇಶವಾಗಿದೆ” ಎಂದು ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ದೇಶ ಮತ್ತು ಏಷ್ಯಾದ ಅನೇಕ ದೇಶಗಳು ಅಮೇರಿಕಾದ ಸಾಮ್ರಾಜ್ಯಶಾಹಿ ಜೊತೆಗೆ ಮೈತ್ರಿಗೆ ಮುಂದಾಗಿವೆ. ಜಗತ್ತಿನ ಎರಡನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಚೀನಾಗೆ ಪೈಪೋಟಿ ನೀಡಲು ಹಾಗೂ ಅದರ ಆರ್ಥಿಕ ಶಕ್ತಿಯನ್ನು ದುರ್ಬಲಗೊಳಿಸಲು ಇಂತಹ ಮೈತ್ರಿ ಏರ್ಪಡುತ್ತಿದೆ. ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಹೇರುತ್ತಿದೆ. ಸಾರ್ವಜನಿಕ ರಂಗವನ್ನು ಸಂಪೂರ್ಣವಾಗಿ ನಾಶಪಡಿಸಿ, ಅವೆಲ್ಲವನ್ನು ಕಾರ್ಪೋರೇಟ್‌ ತೆಕ್ಕೆಗೆ ಸೇರಿಸುವ ಪ್ರಯತ್ನ ನಡೆದಿದೆ. ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ ಮೂಲಕ ಇಂತವುಗಳನ್ನು ಮುಂದುವರೆಸಲಾಗುತ್ತಿದೆ. ಇದು ಹಿಂದುತ್ವ ಮತ್ತು ಕಾರ್ಪೋರೇಟ್‌ ಶಕ್ತಿಗಳು ಪರಸ್ಪರ ಅನುಕೂಲತೆಗಳಿಗೆ ತಮ್ಮ ಅಜೆಂಡಾಗಳನ್ನು ಜಾರಿ ಮಾಡಲು ಇಂತಹ ಅಪವಿತ್ರ ಮೈತ್ರಿ ಏರ್ಪಟ್ಟಿದೆ ಎಂಬುದು ಸ್ಪಷ್ಟ” ಎಂದು ಅವರು ಹೇಳಿದ್ದಾರೆ.

“ದೇಶದಲ್ಲಿ ಆರಂಭಗೊಂಡ ರೈತ-ಕಾರ್ಮಿಕರ ಜಂಟಿ ಹೋರಾಟಗಳು ನವ-ಉದಾರವಾದಿ ನೀತಿಗಳನ್ನು ಸಮರೋಪಾದಿಯಲ್ಲಿ ಜಾರಿ ಮಾಡುವ ಮೋದಿ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿ ನಿಂತಿವೆ. ಜನತೆಯ ಪ್ರಬಲ ಹೋರಾಟಗಳೇ ನವ-ಉದಾರವಾದಿ ನೀತಿಗಳ ವಿರುದ್ಧದ ಅಸ್ತ್ರಗಳಾಗಿವೆ. ಹಿಂದುತ್ವ ಕಾರ್ಪೋರೇಟ್‌ ಯಜಮಾನಿಕೆಗೆ ಪರ್ಯಾಯವನ್ನು ರೂಪಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ದೇಶದ ಅವಕಾಶವಾದಿ ಪಕ್ಷಗಳು ಇದಕ್ಕೆ ಪರ್ಯಾಯವಲ್ಲ. ಅದರಲ್ಲಿರುವ ರಾಜಿ ಮನೋಭಾವ ಇದಕ್ಕೆ ಅಡ್ಡಿಯಾಗಿದೆ. ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಮಾತ್ರವೇ ಪರ್ಯಾಯವನ್ನು ರೂಪಿಸಲು ಸಾಧ್ಯ. ಇತಿಹಾಸದುದ್ದಕ್ಕೂ ಜನವಿರೋಧಿ ನೀತಿಗಳಿಗೆ ಪರ್ಯಾಯ ಶಕ್ತಿಯಾಗಿ ಹೋರಾಟದಲ್ಲಿರುವ ಸಿಪಿಐ(ಎಂ) ಪಕ್ಷವನ್ನು ಬಲಪಡಿಸದೆ, ಪರ್ಯಾಯ ರೂಪಿಸಲು ಸಾಧ್ಯವಿಲ್ಲ. ಈ ಬಗ್ಗೆ ಸಿಪಿಐ(ಎಂ)ನ ಅಖಿಲ ಭಾರತ ಸಮ್ಮೇಳನದಲ್ಲಿ ಗಂಭೀರವಾಗಿ ಚರ್ಚೆ ನಡೆಸಲಿದ್ದೇವೆ” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

“ಮೋದಿ ಸರ್ಕಾರದ ನವಭಾರತ ನಿರ್ಮಾಣದ ಮಾತುಗಳು ಕೃತಿಯಲ್ಲಿ ಕಾಣುತ್ತಿಲ್ಲ. ಹಿಂದುತ್ವವಾದಿ ಅಜೆಂಡಾಗಳನ್ನು ಜಾರಿಮಾಡುವ ಅದರ ಪ್ರಯತ್ನದಿಂದಾಗಿ ನವಭಾರತದ ಬದಲು ದೇಶ ಹಿಮ್ಮುಖ ಚಲನೆಯನ್ನು ಕಾಣುತ್ತಿದೆ. ಕಾಶ್ಮೀರದಲ್ಲಿ ಕಲಂ 370 ತೆಗೆದದ್ದು ಇದಕ್ಕೊಂದು ಉದಾಹರಣೆ. ರಾಮಮಂದಿರ ಅಡಿಗಲ್ಲು ಹಾಕುವ ಜೊತೆಯಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗಿರುವುದು ಧರ್ಮದ ಆಧಾರದಲ್ಲಿ ಪೌರತ್ವ ನೀಡುವ ನೀತಿಯು ಸಂವಿಧಾನ ವಿರೋಧಿ ನಡೆಯಾಗಿದೆ. ಸಾಂವಿಧಾನಿಕ ಸಂಸ್ಥೆಗಳಲ್ಲಿ ಹಿಂದುತ್ವ ಅಜೆಂಡಾವನ್ನು ಹೇರುತ್ತಾ ಆ ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ. ಹೊಸ ಸಂಸತ್‌ ಭವನ ನಿರ್ಮಾಣ ಮಾಡುತ್ತಿರುವಾಗಲೇ ಈಗಿರುವ ಸಂಸತ್‌ ಭವನವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಮುಂದಾಗಿದೆ. ಇದರ ಅರ್ಥ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವನ್ನು ಮ್ಯೂಸಿಯಂನಲ್ಲಿ ಬಂಧಿಸಲು ಹೊಂಚು ಹಾಕಲಾಗಿದೆ. ಈಗಾಗಲೇ ಸಂಸತ್‌ ಅನ್ನು ಅಮಾನತ್ತಿನಲ್ಲಿಟ್ಟು ಏಕಪಕ್ಷೀಯವಾಗಿ ನೀತಿಗಳನ್ನು ತರುತ್ತಿರುವುದು ಇದರ ಸ್ಪಷ್ಟ ಸಂದೇಶವಾಗಿದೆ” ಎಂದು ಪ್ರಕಾಶ್‌‌ ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

“ಕರ್ನಾಟಕ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವ ಮೂಲಕ ಕ್ರಿಶ್ಚಿಯನ್ನರ ಮೇಲೆ ಧಾಳಿ ಮಾಡಲು ಮುಂದಾಗಿದೆ. ಮುಸ್ಲಿಮರು ಕ್ರಿಶ್ಚಿಯನ್ನರು ಮತ್ತು ಕಮ್ಯೂನಿಸ್ಟರು ದೇಶದ ಆಂತರಿಕ ಶತ್ರುಗಳು ಎಂಬ ಗೋಳ್ವಾಲ್ಕರ್‌ ಧೋರಣೆಯನ್ನು ಜಾರಿ ಮಾಡಲು ಪ್ರಯತ್ನ ನಡೆದಿದೆ. ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಕರ್ನಾಟಕ ಸರ್ಕಾರದ ನೀತಿಯು ದೇವಸ್ಥಾನಗಳ ಭಾಗವಾಗಿರುವ ಅಪಾರ ಪ್ರಮಾಣದ ಭೂಮಿ-ಆಸ್ತಿಯನ್ನು ಲಪಟಾಯಿಸಲು ಅನುಕೂಲವಾಗುವಂತೆ ನೀತಿಗಳಲ್ಲಿ ಮಾರ್ಪಾಡು ಮಾಡಲಾಗುತ್ತಿದೆ. ಜೊತೆಗೆ ದೇವಸ್ಥಾನಗಳನ್ನು ಆರ್‌ಎಸ್‌ಎಸ್‌ ಹಿಡಿತಕ್ಕೆ ವಹಿಸುವ ಪ್ರಯತ್ನದ ಭಾಗವಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಬಿಜೆಪಿ ನೇತೃತ್ವದ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಮಾನೀಕೆಯ ವಿರುದ್ಧ ಹೋರಾಟಗಳನ್ನು ರೂಪಿಸಲು ರಾಜ್ಯ ಸಮ್ಮೇಳನ ಹಾಗೂ ಏಪ್ರಿಲ್‌ನಲ್ಲಿ ಕಣ್ಣೂರಿನಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದಲ್ಲಿ ತೀರ್ಮಾನಿಸಲಾಗುವುದು” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿತ್ಯಾನಂದಸ್ವಾಮಿ ವಹಿಸಿದ್ದರು. ವೇದಿಕೆಯಲ್ಲಿ ಪೊಲಿಟ್ ಬ್ಯೂರೋ ಸದಸ್ಯರಾದ ಎಂ.ಎ ಬೇಬಿ, ಬಿ.ವಿ. ರಾಘವಲು, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ,  ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಜಿ.ನಾಗರಾಜ, ರಾಜ್ಯ ಮುಖಂಡರಾದ ಎಸ್. ವರಲಕ್ಷ್ಮಿ, ಕೆ.ಶಂಕರ್, ಜೆ.ಬಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಸುಂದರಂ, ಕೆ.ಎನ್ ಉಮೇಶ್, ವಿಜೆಕೆ ನಾಯರ್, ಜಿ.ಎನ್. ನಾಗರಾಜ್, ವಸಂತ ಆಚಾರಿ, ಗಂಗಾವತಿ ತಾಲ್ಲೂಕ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಸೇರಿದಂತೆ ಅನೇಕರಿದ್ದರು.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...