Homeಮುಖಪುಟಮಧ್ಯಪ್ರದೇಶದಲ್ಲಿ ಹೆಚ್ಚಾದ ನಿರುದ್ಯೋಗ: 3 ವರ್ಷಗಳಲ್ಲಿ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ಕೆಲಸ

ಮಧ್ಯಪ್ರದೇಶದಲ್ಲಿ ಹೆಚ್ಚಾದ ನಿರುದ್ಯೋಗ: 3 ವರ್ಷಗಳಲ್ಲಿ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ಕೆಲಸ

- Advertisement -
- Advertisement -

ಮಧ್ಯಪ್ರದೇಶ ಸರ್ಕಾರದ ಉದ್ಯೋಗ ಕಛೇರಿಗಳಲ್ಲಿ ನೋಂದಾಯಿಸಿಕೊಂಡಿರುವ 37.8 ಲಕ್ಷ ವಿದ್ಯಾವಂತರ ಪೈಕಿ ಕಳೆದ ಮೂರು ವರ್ಷಗಳಲ್ಲಿ 21 ಜನ ಮಾತ್ರ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿದ್ದರೆ. 2.51 ಲಕ್ಷ ಜನರು ಖಾಸಗಿ ವಲಯದಿಂದ ಆಫರ್‌ಗಳನ್ನು ಪಡೆದಿದ್ದಾರೆ ಎನ್ನುವ ವಿಚಾರ ಸರ್ಕಾರವೇ ಹೇಳಿಕೊಂಡಿದೆ.

ಮಾರ್ಚ್ 1ರಂದು ಎಂಪಿ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಶಾಸಕ ಮೇವರಾಂ ಜಾತವ್ ಅವರು ಕೇಳಿದ್ದ ಪ್ರಶ್ನೆಗೆ ಮಂಗಳವಾರ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಲಿಖಿತ ಉತ್ತರ ನೀಡಲಾಗಿದ್ದು, ”2021-22ರ ಹಣಕಾಸು ವರ್ಷದಲ್ಲಿ ರಾಜ್ಯ ಸರ್ಕಾರವು ತನ್ನ ಉದ್ಯೋಗ ಕಚೇರಿಗಳಿಗೆ 1,674 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ” ಎಂದು ತಿಳಿಸಲಾಗಿದೆ. ಈ ಲೆಕ್ಕದ ಪ್ರಕಾರ, ಉದ್ಯೋಗ ಕಚೇರಿಗಳ ವೆಚ್ಚವನ್ನು ಲೆಕ್ಕಹಾಕಿದರೆ, ಅದು ಒಬ್ಬ ವ್ಯಕ್ತಿಗೆ 80 ಲಕ್ಷ ರೂ. ವೆಚ್ಚ ಮಾಡಿದಂತಾಗುತ್ತದೆ ಎನ್ನುವ ಆತಂಕಕಾರಿ ಅಂಶ ಹೊರಬಂದಿದೆ.

”ಏಪ್ರಿಲ್ 2020ರಿಂದ ಪ್ರಶ್ನೆಯ ದಿನಾಂಕ (ಜನವರಿ-ಫೆಬ್ರವರಿ 2023)ವರೆಗೆ ಒಟ್ಟು 37,80,679 ವಿದ್ಯಾವಂತರು ಮತ್ತು 1,12,470 ಅವಿದ್ಯಾವಂತರು ಎಂಪಿ ಎಂಪ್ಲಾಯ್‌ಮೆಂಟ್ ಪೋರ್ಟಲ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ” ಎಂದು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವೆ ಯಶೋಧರ ರಾಜೇ ಸಿಂಧಿಯಾ ಅವರು ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

”ಈ ಅವಧಿಯಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ 21 ಜನರಿಗೆ ಉದ್ಯೋಗ ನೀಡಲಾಗಿದ್ದು, 2,51,577 ಮಂದಿ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳಿಂದ ಆಫರ್ ಲೆಟರ್ ಪಡೆದಿದ್ದಾರೆ” ಎಂದು ಅವರು ಹೇಳಿದ್ದಾರೆ.

2021-22ರ ಆರ್ಥಿಕ ವರ್ಷದಲ್ಲಿ ಉದ್ಯೋಗ ಕಚೇರಿಗಳನ್ನು ನಡೆಸಲು 1,674.73 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್‌ ನಿರಂತರ ಆರೋಪಗಳನ್ನು ಮಾಡುತ್ತಿದೆ.

”ರಾಜ್ಯ ಬಿಜೆಪಿ ಸರ್ಕಾರ ಹಣ ಪೋಲು ಮಾಡುತ್ತಿದೆ, ಅವರು ಸಾಲ ಮಾಡಿ ತುಪ್ಪ ಕುಡಿಯುತ್ತಿದ್ದಾರೆ. ಮಧ್ಯಪ್ರದೇಶದಲ್ಲಿ ವ್ಯವಸ್ಥೆ ಕುಸಿದಿದೆ. ಇದು ಸರಕಾರವಲ್ಲ ಸರ್ಕಸ್. ಇಲ್ಲಿ ಕಾನೂನು ಸುವ್ಯವಸ್ಥೆಗೆ ಅರ್ಥವಿಲ್ಲ” ಎಂದು ಕಾಂಗ್ರೆಸ್ ನ ಪಿ.ಸಿ.ಶರ್ಮಾ ಹೇಳಿದ್ದಾರೆ.

ಕಾಂಗ್ರೆಸ್ ಆರೋಪಗಳನ್ನು ತಳ್ಳಿ ಹಾಕಿರುವ ಬಿಜೆಪಿ ಶಾಸಕ ಗೌರಿಶಂಕರ್ ಬಿಸೆನ್ ಅವರು ”ಐದನೇ ಬಾರಿಗೆ ಶಿವರಾಜ್ ಮುಖ್ಯಮಂತ್ರಿಯಾಗಲಿದ್ದಾರೆ… ನಮ್ಮ ಸರಕಾರದ ಭರವಸೆಗಳನ್ನು ಈಡೇರಿಸುವುದರಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಉತ್ತರ ನೀಡಿದ್ದಾರೆ. ನಾವು ಉದ್ಯೋಗ ನೀಡುತ್ತೇವೆ ಎಂದು ಹೇಳುತ್ತಿದ್ದೇವೆ” ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂಜಿನಿಯರ್‌ಗಳು ಮತ್ತು ಡಾಕ್ಟರೇಟ್ ಹೊಂದಿರುವವರು ಸೇರಿದಂತೆ 12 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಸರಿಸುಮಾರು 6,000 ಪಟ್ವಾರಿ (ಭೂ ಕಂದಾಯ ಅಧಿಕಾರಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ವರ್ಷ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಪ್ರಸ್ತುತಪಡಿಸಿದ ನಿರುದ್ಯೋಗ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 1, 2022 ರವರೆಗೆ 25.8 ಲಕ್ಷಕ್ಕೂ ಹೆಚ್ಚು ನೋಂದಾಯಿತ ನಿರುದ್ಯೋಗಿ ಯುವಕರು ಇದ್ದರು. ಈ ಅಂಕಿ ಅಂಶವು 1 ಜನವರಿ 2023 ರಂದು 38,92,949 ಕ್ಕೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...