Homeಕರ್ನಾಟಕ'ನಿರುದ್ಯೋಗವೇ ಭಾರತ ಬಿಟ್ಟು ತೊಲಗು': ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’: ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

- Advertisement -
- Advertisement -

ಕ್ವಿಟ್ ಇಂಡಿಯಾ ದಿನದ ನೆನಪಿನಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ “#ನಿರುದ್ಯೋಗವೇ_ಭಾರತಬಿಟ್ಟು_ತೊಲಗು
#Unemployment_QuitIndia” ಹೆಸರಿನಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಯುವಜನರಿಂದ ವಿಶಿಷ್ಟ ಆಂದೋಲನ ಆರಂಭವಾಗಿದೆ. ಉದ್ಯೋಗಕ್ಕಾಗಿ ಯುವಜನರು ಮತ್ತು ಕೆವಿಎಸ್ ಆರಂಭಿಸಿರುವ ನಿರುದ್ಯೋಗದ ವಿರುದ್ಧದ ಅಭಿಯಾನದಲ್ಲಿ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಯೂ ನಿರುದ್ಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯುವಜನರು ಉದ್ಯೋಗ ಸೃಷ್ಟಿಗಾಗಿ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿಯಿಂದಲೇ ದೇಶದ ಅಭಿವೃದ್ದಿ ಸಾಧ್ಯ ಎಂದು ವಾದಿಸಿದ್ದಾರೆ.

‘ಬದುಕುವ ಹಕ್ಕು’ ಯಾವುದೇ ಸಂವಿಧಾನ ಕೊಟ್ಟ ಹಕ್ಕಲ್ಲ. ಅದು ಪ್ರತಿಯೊಬ್ಬರಿಗೂ ಜನ್ಮದತ್ತವಾಗಿ ಬಂದಿರುವ ಹಕ್ಕು. ಎಲ್ಲರೂ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸಬೇಕಾದುದು ಪ್ರಭುತ್ವದ ಕರ್ತವ್ಯ. ಅದಕ್ಕಾಗಿ ಎಲ್ಲಾ ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಅದರ ಹೊಣೆಗಾರಿಕೆ.‌ ಪ್ರಭುತ್ವವು ನಿರುದ್ಯೋಗಿಗಳಿಗೆ ಕೆಲಸವಿಲ್ಲದಂತಹ ಮತ್ತು ಉದ್ಯೋಗಿಗಳಿಂದ ಕೆಲಸ ಕಿತ್ತುಕೊಳ್ಳುವಂತಹ ವಾತಾವರಣ ಸೃಷ್ಟಿಸುತ್ತಿದೆ ಎಂದರೆ ಅದು ಜನ್ಮದತ್ತವಾದ ನಮ್ಮ ‘ಬದುಕುವ ಹಕ್ಕ’ನ್ನು ಕಿತ್ತುಕೊಳ್ಳುತ್ತಿದೆ ಎಂದೇ ಅರ್ಥ ಎಂದು ಕಲಬುರಗಿಯ ಕುಮಾರ್ ಬುರಡಿಕಟ್ಟಿ ಪ್ರತಿಕ್ರಿಯಿಸಿದ್ದಾರೆ.

“ಪುರುಷಾಧಿಪತ್ಯ ಸಂಕೋಲೆಗಳಿಂದ ಹೊರಬಂದು ಸ್ವಾವಲಂಭಿ ಸ್ವಾಭಿಮಾನಿ ಜೀವನ ಕಟ್ಟಿಕೊಳ್ಳುತ್ತಿದ್ದ ಮಹಿಳೆಯರು, ಮತ್ತೆ ಪುರುಷಾಧಿಪತ್ಯ ಮೌಲ್ಯಗಳಲ್ಲಿ ಬಂಧಿಯಾಗುತ್ತಿರುವುದಕ್ಕೆ ನಿರುದ್ಯೋಗವು ಒಂದು ಕಾರಣ. ಉದ್ಯೋಗ ನಮ್ಮ ಹಕ್ಕು. ನಿರುದ್ಯೋಗ ಭಾರತ ಬಿಟ್ಟು ತೊಲಗಲಿ.” – ಕಾವ್ಯ ಸಮತಳ.

“ಅಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ದೇಶಬಿಟ್ಟು ತೋಲಗಿ ಎಂಬ ಘೋಷಣೆ ಕೂಗುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಸಂಕಲ್ಪ ಮಾಡಿದ್ದರು . .!

 

ಇಂದು ನಮ್ಮ ಯುವ ತಲೆಮಾರು ಜನರನ್ನು ಕಿತ್ತುತಿನ್ನುತ್ತಿರುವ ನಿರುದ್ಯೋಗ, ಬಡತನ, ಅನಕ್ಷರತೆ ಮತ್ತು ಅಸಮಾನತೆ ಎಂಬ ಸಮಸ್ಯೆಗಳು ದೇಶಬಿಟ್ಟು ತೋಲಗಲಿ ಎಂಬ ಮತ್ತೊಂದು ಘೋಷಣೆ ಕೂಗುವ ಮೂಲಕ ನಿಜವಾದ ಅರ್ಥದಲ್ಲಿ ವ್ಯಕ್ತಿಯನ್ನು ಸ್ವಾತಂತ್ರ್ಯಗೊಳಿಸಬೇಕಿದೆ” ಎಂದು ಪ್ರಾಧ್ಯಾಪಕರಾದ ಡಾ.ಕಿರಣ್ ಗಾಜನೂರುರವರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರುಣ್ ಜೋಳದ ಕೂಡ್ಲಿಗಿಯವರು “ಕ್ವಿಟ್ ಇಂಡಿಯಾ ಚಳವಳಿ’ ಯ ಸಾರ್ಥಕ ನೆನಪೆಂದರೆ, ಭಾರತ ಬಿಟ್ಟು ತೊಲಗಬೇಕಾದ ಸಂಗತಿಗಳನ್ನು ಆಯ್ದು.. ಅವುಗಳನ್ನು ತೊಲಗಿಸಲು ನಾವು ಸಕ್ರಿಯವಾಗುವುದು.

‘ನಿರುದ್ಯೋಗ’ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಆಳುವ ಸರಕಾರ ಉದ್ಯೋಗಗಳನ್ನು ಸೃಷ್ಠಿಸುತ್ತಲೇ ನಿರುದ್ಯೋಗವನ್ನು ತೊಲಗಿಸಬೇಕು. ಈ ಉದ್ಯೋಗ ಸೃಷ್ಟಿಗಾಗಿ ಸರಕಾರಗಳ ಮೇಲೆ ಗರಿಷ್ಠ ಒತ್ತಡ ತರಬೇಕಿದೆ. ಹಾಗಾದಲ್ಲಿ ‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’ ದನಿಗೆ ಬಲ ಬರುತ್ತದೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಹೋರಾಡಿದ್ದು ಸ್ವತಂತ್ರ ಮತ್ತು ಸಮೃದ್ಧ ಭಾರತಕ್ಕಾಗಿಯೇ ಹೊರತು ನಿರುದ್ಯೋಗ ಭಾರತಕ್ಕಾಗಿ ಅಲ್ಲ. ಬನ್ನಿ ನಿರುದ್ಯೋಗದ ವಿರುದ್ಧ ಸಮರಹೂಡೋಣ.

ಯುವ ಜನರೆ, ನಾವು ಬದುಕುವ ಜಗತ್ತನ್ನು ನಾವೆ ರೂಪಿಸಬೇಕು.
ತಿಳಿಯಿರಿ ನಾವು ತೊಂದರೆಯಲ್ಲ. ನಾವು ಪರಿಹಾರ ಎಂಬ ಮಾತುಗಳು ಕೇಳಿಬಂದಿವೆ.

ದಾವಣಗೆರೆ, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಿರುದ್ಯೋಗದ ಕುರಿತು ಸಂವಾದ ಕಾರ್ಯಕ್ರಮ ನಡೆದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...