Homeಕರ್ನಾಟಕ'ನಿರುದ್ಯೋಗವೇ ಭಾರತ ಬಿಟ್ಟು ತೊಲಗು': ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’: ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

- Advertisement -
- Advertisement -

ಕ್ವಿಟ್ ಇಂಡಿಯಾ ದಿನದ ನೆನಪಿನಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ “#ನಿರುದ್ಯೋಗವೇ_ಭಾರತಬಿಟ್ಟು_ತೊಲಗು
#Unemployment_QuitIndia” ಹೆಸರಿನಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಯುವಜನರಿಂದ ವಿಶಿಷ್ಟ ಆಂದೋಲನ ಆರಂಭವಾಗಿದೆ. ಉದ್ಯೋಗಕ್ಕಾಗಿ ಯುವಜನರು ಮತ್ತು ಕೆವಿಎಸ್ ಆರಂಭಿಸಿರುವ ನಿರುದ್ಯೋಗದ ವಿರುದ್ಧದ ಅಭಿಯಾನದಲ್ಲಿ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಯೂ ನಿರುದ್ಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯುವಜನರು ಉದ್ಯೋಗ ಸೃಷ್ಟಿಗಾಗಿ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿಯಿಂದಲೇ ದೇಶದ ಅಭಿವೃದ್ದಿ ಸಾಧ್ಯ ಎಂದು ವಾದಿಸಿದ್ದಾರೆ.

‘ಬದುಕುವ ಹಕ್ಕು’ ಯಾವುದೇ ಸಂವಿಧಾನ ಕೊಟ್ಟ ಹಕ್ಕಲ್ಲ. ಅದು ಪ್ರತಿಯೊಬ್ಬರಿಗೂ ಜನ್ಮದತ್ತವಾಗಿ ಬಂದಿರುವ ಹಕ್ಕು. ಎಲ್ಲರೂ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸಬೇಕಾದುದು ಪ್ರಭುತ್ವದ ಕರ್ತವ್ಯ. ಅದಕ್ಕಾಗಿ ಎಲ್ಲಾ ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಅದರ ಹೊಣೆಗಾರಿಕೆ.‌ ಪ್ರಭುತ್ವವು ನಿರುದ್ಯೋಗಿಗಳಿಗೆ ಕೆಲಸವಿಲ್ಲದಂತಹ ಮತ್ತು ಉದ್ಯೋಗಿಗಳಿಂದ ಕೆಲಸ ಕಿತ್ತುಕೊಳ್ಳುವಂತಹ ವಾತಾವರಣ ಸೃಷ್ಟಿಸುತ್ತಿದೆ ಎಂದರೆ ಅದು ಜನ್ಮದತ್ತವಾದ ನಮ್ಮ ‘ಬದುಕುವ ಹಕ್ಕ’ನ್ನು ಕಿತ್ತುಕೊಳ್ಳುತ್ತಿದೆ ಎಂದೇ ಅರ್ಥ ಎಂದು ಕಲಬುರಗಿಯ ಕುಮಾರ್ ಬುರಡಿಕಟ್ಟಿ ಪ್ರತಿಕ್ರಿಯಿಸಿದ್ದಾರೆ.

“ಪುರುಷಾಧಿಪತ್ಯ ಸಂಕೋಲೆಗಳಿಂದ ಹೊರಬಂದು ಸ್ವಾವಲಂಭಿ ಸ್ವಾಭಿಮಾನಿ ಜೀವನ ಕಟ್ಟಿಕೊಳ್ಳುತ್ತಿದ್ದ ಮಹಿಳೆಯರು, ಮತ್ತೆ ಪುರುಷಾಧಿಪತ್ಯ ಮೌಲ್ಯಗಳಲ್ಲಿ ಬಂಧಿಯಾಗುತ್ತಿರುವುದಕ್ಕೆ ನಿರುದ್ಯೋಗವು ಒಂದು ಕಾರಣ. ಉದ್ಯೋಗ ನಮ್ಮ ಹಕ್ಕು. ನಿರುದ್ಯೋಗ ಭಾರತ ಬಿಟ್ಟು ತೊಲಗಲಿ.” – ಕಾವ್ಯ ಸಮತಳ.

“ಅಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ದೇಶಬಿಟ್ಟು ತೋಲಗಿ ಎಂಬ ಘೋಷಣೆ ಕೂಗುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಸಂಕಲ್ಪ ಮಾಡಿದ್ದರು . .!

 

ಇಂದು ನಮ್ಮ ಯುವ ತಲೆಮಾರು ಜನರನ್ನು ಕಿತ್ತುತಿನ್ನುತ್ತಿರುವ ನಿರುದ್ಯೋಗ, ಬಡತನ, ಅನಕ್ಷರತೆ ಮತ್ತು ಅಸಮಾನತೆ ಎಂಬ ಸಮಸ್ಯೆಗಳು ದೇಶಬಿಟ್ಟು ತೋಲಗಲಿ ಎಂಬ ಮತ್ತೊಂದು ಘೋಷಣೆ ಕೂಗುವ ಮೂಲಕ ನಿಜವಾದ ಅರ್ಥದಲ್ಲಿ ವ್ಯಕ್ತಿಯನ್ನು ಸ್ವಾತಂತ್ರ್ಯಗೊಳಿಸಬೇಕಿದೆ” ಎಂದು ಪ್ರಾಧ್ಯಾಪಕರಾದ ಡಾ.ಕಿರಣ್ ಗಾಜನೂರುರವರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರುಣ್ ಜೋಳದ ಕೂಡ್ಲಿಗಿಯವರು “ಕ್ವಿಟ್ ಇಂಡಿಯಾ ಚಳವಳಿ’ ಯ ಸಾರ್ಥಕ ನೆನಪೆಂದರೆ, ಭಾರತ ಬಿಟ್ಟು ತೊಲಗಬೇಕಾದ ಸಂಗತಿಗಳನ್ನು ಆಯ್ದು.. ಅವುಗಳನ್ನು ತೊಲಗಿಸಲು ನಾವು ಸಕ್ರಿಯವಾಗುವುದು.

‘ನಿರುದ್ಯೋಗ’ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಆಳುವ ಸರಕಾರ ಉದ್ಯೋಗಗಳನ್ನು ಸೃಷ್ಠಿಸುತ್ತಲೇ ನಿರುದ್ಯೋಗವನ್ನು ತೊಲಗಿಸಬೇಕು. ಈ ಉದ್ಯೋಗ ಸೃಷ್ಟಿಗಾಗಿ ಸರಕಾರಗಳ ಮೇಲೆ ಗರಿಷ್ಠ ಒತ್ತಡ ತರಬೇಕಿದೆ. ಹಾಗಾದಲ್ಲಿ ‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’ ದನಿಗೆ ಬಲ ಬರುತ್ತದೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಹೋರಾಡಿದ್ದು ಸ್ವತಂತ್ರ ಮತ್ತು ಸಮೃದ್ಧ ಭಾರತಕ್ಕಾಗಿಯೇ ಹೊರತು ನಿರುದ್ಯೋಗ ಭಾರತಕ್ಕಾಗಿ ಅಲ್ಲ. ಬನ್ನಿ ನಿರುದ್ಯೋಗದ ವಿರುದ್ಧ ಸಮರಹೂಡೋಣ.

ಯುವ ಜನರೆ, ನಾವು ಬದುಕುವ ಜಗತ್ತನ್ನು ನಾವೆ ರೂಪಿಸಬೇಕು.
ತಿಳಿಯಿರಿ ನಾವು ತೊಂದರೆಯಲ್ಲ. ನಾವು ಪರಿಹಾರ ಎಂಬ ಮಾತುಗಳು ಕೇಳಿಬಂದಿವೆ.

ದಾವಣಗೆರೆ, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಿರುದ್ಯೋಗದ ಕುರಿತು ಸಂವಾದ ಕಾರ್ಯಕ್ರಮ ನಡೆದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...