Homeಕರ್ನಾಟಕ'ನಿರುದ್ಯೋಗವೇ ಭಾರತ ಬಿಟ್ಟು ತೊಲಗು': ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’: ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

- Advertisement -
- Advertisement -

ಕ್ವಿಟ್ ಇಂಡಿಯಾ ದಿನದ ನೆನಪಿನಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ “#ನಿರುದ್ಯೋಗವೇ_ಭಾರತಬಿಟ್ಟು_ತೊಲಗು
#Unemployment_QuitIndia” ಹೆಸರಿನಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಯುವಜನರಿಂದ ವಿಶಿಷ್ಟ ಆಂದೋಲನ ಆರಂಭವಾಗಿದೆ. ಉದ್ಯೋಗಕ್ಕಾಗಿ ಯುವಜನರು ಮತ್ತು ಕೆವಿಎಸ್ ಆರಂಭಿಸಿರುವ ನಿರುದ್ಯೋಗದ ವಿರುದ್ಧದ ಅಭಿಯಾನದಲ್ಲಿ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಯೂ ನಿರುದ್ಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯುವಜನರು ಉದ್ಯೋಗ ಸೃಷ್ಟಿಗಾಗಿ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿಯಿಂದಲೇ ದೇಶದ ಅಭಿವೃದ್ದಿ ಸಾಧ್ಯ ಎಂದು ವಾದಿಸಿದ್ದಾರೆ.

‘ಬದುಕುವ ಹಕ್ಕು’ ಯಾವುದೇ ಸಂವಿಧಾನ ಕೊಟ್ಟ ಹಕ್ಕಲ್ಲ. ಅದು ಪ್ರತಿಯೊಬ್ಬರಿಗೂ ಜನ್ಮದತ್ತವಾಗಿ ಬಂದಿರುವ ಹಕ್ಕು. ಎಲ್ಲರೂ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸಬೇಕಾದುದು ಪ್ರಭುತ್ವದ ಕರ್ತವ್ಯ. ಅದಕ್ಕಾಗಿ ಎಲ್ಲಾ ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಅದರ ಹೊಣೆಗಾರಿಕೆ.‌ ಪ್ರಭುತ್ವವು ನಿರುದ್ಯೋಗಿಗಳಿಗೆ ಕೆಲಸವಿಲ್ಲದಂತಹ ಮತ್ತು ಉದ್ಯೋಗಿಗಳಿಂದ ಕೆಲಸ ಕಿತ್ತುಕೊಳ್ಳುವಂತಹ ವಾತಾವರಣ ಸೃಷ್ಟಿಸುತ್ತಿದೆ ಎಂದರೆ ಅದು ಜನ್ಮದತ್ತವಾದ ನಮ್ಮ ‘ಬದುಕುವ ಹಕ್ಕ’ನ್ನು ಕಿತ್ತುಕೊಳ್ಳುತ್ತಿದೆ ಎಂದೇ ಅರ್ಥ ಎಂದು ಕಲಬುರಗಿಯ ಕುಮಾರ್ ಬುರಡಿಕಟ್ಟಿ ಪ್ರತಿಕ್ರಿಯಿಸಿದ್ದಾರೆ.

“ಪುರುಷಾಧಿಪತ್ಯ ಸಂಕೋಲೆಗಳಿಂದ ಹೊರಬಂದು ಸ್ವಾವಲಂಭಿ ಸ್ವಾಭಿಮಾನಿ ಜೀವನ ಕಟ್ಟಿಕೊಳ್ಳುತ್ತಿದ್ದ ಮಹಿಳೆಯರು, ಮತ್ತೆ ಪುರುಷಾಧಿಪತ್ಯ ಮೌಲ್ಯಗಳಲ್ಲಿ ಬಂಧಿಯಾಗುತ್ತಿರುವುದಕ್ಕೆ ನಿರುದ್ಯೋಗವು ಒಂದು ಕಾರಣ. ಉದ್ಯೋಗ ನಮ್ಮ ಹಕ್ಕು. ನಿರುದ್ಯೋಗ ಭಾರತ ಬಿಟ್ಟು ತೊಲಗಲಿ.” – ಕಾವ್ಯ ಸಮತಳ.

“ಅಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ದೇಶಬಿಟ್ಟು ತೋಲಗಿ ಎಂಬ ಘೋಷಣೆ ಕೂಗುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಸಂಕಲ್ಪ ಮಾಡಿದ್ದರು . .!

 

ಇಂದು ನಮ್ಮ ಯುವ ತಲೆಮಾರು ಜನರನ್ನು ಕಿತ್ತುತಿನ್ನುತ್ತಿರುವ ನಿರುದ್ಯೋಗ, ಬಡತನ, ಅನಕ್ಷರತೆ ಮತ್ತು ಅಸಮಾನತೆ ಎಂಬ ಸಮಸ್ಯೆಗಳು ದೇಶಬಿಟ್ಟು ತೋಲಗಲಿ ಎಂಬ ಮತ್ತೊಂದು ಘೋಷಣೆ ಕೂಗುವ ಮೂಲಕ ನಿಜವಾದ ಅರ್ಥದಲ್ಲಿ ವ್ಯಕ್ತಿಯನ್ನು ಸ್ವಾತಂತ್ರ್ಯಗೊಳಿಸಬೇಕಿದೆ” ಎಂದು ಪ್ರಾಧ್ಯಾಪಕರಾದ ಡಾ.ಕಿರಣ್ ಗಾಜನೂರುರವರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರುಣ್ ಜೋಳದ ಕೂಡ್ಲಿಗಿಯವರು “ಕ್ವಿಟ್ ಇಂಡಿಯಾ ಚಳವಳಿ’ ಯ ಸಾರ್ಥಕ ನೆನಪೆಂದರೆ, ಭಾರತ ಬಿಟ್ಟು ತೊಲಗಬೇಕಾದ ಸಂಗತಿಗಳನ್ನು ಆಯ್ದು.. ಅವುಗಳನ್ನು ತೊಲಗಿಸಲು ನಾವು ಸಕ್ರಿಯವಾಗುವುದು.

‘ನಿರುದ್ಯೋಗ’ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಆಳುವ ಸರಕಾರ ಉದ್ಯೋಗಗಳನ್ನು ಸೃಷ್ಠಿಸುತ್ತಲೇ ನಿರುದ್ಯೋಗವನ್ನು ತೊಲಗಿಸಬೇಕು. ಈ ಉದ್ಯೋಗ ಸೃಷ್ಟಿಗಾಗಿ ಸರಕಾರಗಳ ಮೇಲೆ ಗರಿಷ್ಠ ಒತ್ತಡ ತರಬೇಕಿದೆ. ಹಾಗಾದಲ್ಲಿ ‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’ ದನಿಗೆ ಬಲ ಬರುತ್ತದೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಹೋರಾಡಿದ್ದು ಸ್ವತಂತ್ರ ಮತ್ತು ಸಮೃದ್ಧ ಭಾರತಕ್ಕಾಗಿಯೇ ಹೊರತು ನಿರುದ್ಯೋಗ ಭಾರತಕ್ಕಾಗಿ ಅಲ್ಲ. ಬನ್ನಿ ನಿರುದ್ಯೋಗದ ವಿರುದ್ಧ ಸಮರಹೂಡೋಣ.

ಯುವ ಜನರೆ, ನಾವು ಬದುಕುವ ಜಗತ್ತನ್ನು ನಾವೆ ರೂಪಿಸಬೇಕು.
ತಿಳಿಯಿರಿ ನಾವು ತೊಂದರೆಯಲ್ಲ. ನಾವು ಪರಿಹಾರ ಎಂಬ ಮಾತುಗಳು ಕೇಳಿಬಂದಿವೆ.

ದಾವಣಗೆರೆ, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಿರುದ್ಯೋಗದ ಕುರಿತು ಸಂವಾದ ಕಾರ್ಯಕ್ರಮ ನಡೆದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...