Homeಕರ್ನಾಟಕ'ನಿರುದ್ಯೋಗವೇ ಭಾರತ ಬಿಟ್ಟು ತೊಲಗು': ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’: ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

- Advertisement -
- Advertisement -

ಕ್ವಿಟ್ ಇಂಡಿಯಾ ದಿನದ ನೆನಪಿನಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ “#ನಿರುದ್ಯೋಗವೇ_ಭಾರತಬಿಟ್ಟು_ತೊಲಗು
#Unemployment_QuitIndia” ಹೆಸರಿನಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಯುವಜನರಿಂದ ವಿಶಿಷ್ಟ ಆಂದೋಲನ ಆರಂಭವಾಗಿದೆ. ಉದ್ಯೋಗಕ್ಕಾಗಿ ಯುವಜನರು ಮತ್ತು ಕೆವಿಎಸ್ ಆರಂಭಿಸಿರುವ ನಿರುದ್ಯೋಗದ ವಿರುದ್ಧದ ಅಭಿಯಾನದಲ್ಲಿ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಯೂ ನಿರುದ್ಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯುವಜನರು ಉದ್ಯೋಗ ಸೃಷ್ಟಿಗಾಗಿ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿಯಿಂದಲೇ ದೇಶದ ಅಭಿವೃದ್ದಿ ಸಾಧ್ಯ ಎಂದು ವಾದಿಸಿದ್ದಾರೆ.

‘ಬದುಕುವ ಹಕ್ಕು’ ಯಾವುದೇ ಸಂವಿಧಾನ ಕೊಟ್ಟ ಹಕ್ಕಲ್ಲ. ಅದು ಪ್ರತಿಯೊಬ್ಬರಿಗೂ ಜನ್ಮದತ್ತವಾಗಿ ಬಂದಿರುವ ಹಕ್ಕು. ಎಲ್ಲರೂ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸಬೇಕಾದುದು ಪ್ರಭುತ್ವದ ಕರ್ತವ್ಯ. ಅದಕ್ಕಾಗಿ ಎಲ್ಲಾ ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಅದರ ಹೊಣೆಗಾರಿಕೆ.‌ ಪ್ರಭುತ್ವವು ನಿರುದ್ಯೋಗಿಗಳಿಗೆ ಕೆಲಸವಿಲ್ಲದಂತಹ ಮತ್ತು ಉದ್ಯೋಗಿಗಳಿಂದ ಕೆಲಸ ಕಿತ್ತುಕೊಳ್ಳುವಂತಹ ವಾತಾವರಣ ಸೃಷ್ಟಿಸುತ್ತಿದೆ ಎಂದರೆ ಅದು ಜನ್ಮದತ್ತವಾದ ನಮ್ಮ ‘ಬದುಕುವ ಹಕ್ಕ’ನ್ನು ಕಿತ್ತುಕೊಳ್ಳುತ್ತಿದೆ ಎಂದೇ ಅರ್ಥ ಎಂದು ಕಲಬುರಗಿಯ ಕುಮಾರ್ ಬುರಡಿಕಟ್ಟಿ ಪ್ರತಿಕ್ರಿಯಿಸಿದ್ದಾರೆ.

“ಪುರುಷಾಧಿಪತ್ಯ ಸಂಕೋಲೆಗಳಿಂದ ಹೊರಬಂದು ಸ್ವಾವಲಂಭಿ ಸ್ವಾಭಿಮಾನಿ ಜೀವನ ಕಟ್ಟಿಕೊಳ್ಳುತ್ತಿದ್ದ ಮಹಿಳೆಯರು, ಮತ್ತೆ ಪುರುಷಾಧಿಪತ್ಯ ಮೌಲ್ಯಗಳಲ್ಲಿ ಬಂಧಿಯಾಗುತ್ತಿರುವುದಕ್ಕೆ ನಿರುದ್ಯೋಗವು ಒಂದು ಕಾರಣ. ಉದ್ಯೋಗ ನಮ್ಮ ಹಕ್ಕು. ನಿರುದ್ಯೋಗ ಭಾರತ ಬಿಟ್ಟು ತೊಲಗಲಿ.” – ಕಾವ್ಯ ಸಮತಳ.

“ಅಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ದೇಶಬಿಟ್ಟು ತೋಲಗಿ ಎಂಬ ಘೋಷಣೆ ಕೂಗುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಸಂಕಲ್ಪ ಮಾಡಿದ್ದರು . .!

 

ಇಂದು ನಮ್ಮ ಯುವ ತಲೆಮಾರು ಜನರನ್ನು ಕಿತ್ತುತಿನ್ನುತ್ತಿರುವ ನಿರುದ್ಯೋಗ, ಬಡತನ, ಅನಕ್ಷರತೆ ಮತ್ತು ಅಸಮಾನತೆ ಎಂಬ ಸಮಸ್ಯೆಗಳು ದೇಶಬಿಟ್ಟು ತೋಲಗಲಿ ಎಂಬ ಮತ್ತೊಂದು ಘೋಷಣೆ ಕೂಗುವ ಮೂಲಕ ನಿಜವಾದ ಅರ್ಥದಲ್ಲಿ ವ್ಯಕ್ತಿಯನ್ನು ಸ್ವಾತಂತ್ರ್ಯಗೊಳಿಸಬೇಕಿದೆ” ಎಂದು ಪ್ರಾಧ್ಯಾಪಕರಾದ ಡಾ.ಕಿರಣ್ ಗಾಜನೂರುರವರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರುಣ್ ಜೋಳದ ಕೂಡ್ಲಿಗಿಯವರು “ಕ್ವಿಟ್ ಇಂಡಿಯಾ ಚಳವಳಿ’ ಯ ಸಾರ್ಥಕ ನೆನಪೆಂದರೆ, ಭಾರತ ಬಿಟ್ಟು ತೊಲಗಬೇಕಾದ ಸಂಗತಿಗಳನ್ನು ಆಯ್ದು.. ಅವುಗಳನ್ನು ತೊಲಗಿಸಲು ನಾವು ಸಕ್ರಿಯವಾಗುವುದು.

‘ನಿರುದ್ಯೋಗ’ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಆಳುವ ಸರಕಾರ ಉದ್ಯೋಗಗಳನ್ನು ಸೃಷ್ಠಿಸುತ್ತಲೇ ನಿರುದ್ಯೋಗವನ್ನು ತೊಲಗಿಸಬೇಕು. ಈ ಉದ್ಯೋಗ ಸೃಷ್ಟಿಗಾಗಿ ಸರಕಾರಗಳ ಮೇಲೆ ಗರಿಷ್ಠ ಒತ್ತಡ ತರಬೇಕಿದೆ. ಹಾಗಾದಲ್ಲಿ ‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’ ದನಿಗೆ ಬಲ ಬರುತ್ತದೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಹೋರಾಡಿದ್ದು ಸ್ವತಂತ್ರ ಮತ್ತು ಸಮೃದ್ಧ ಭಾರತಕ್ಕಾಗಿಯೇ ಹೊರತು ನಿರುದ್ಯೋಗ ಭಾರತಕ್ಕಾಗಿ ಅಲ್ಲ. ಬನ್ನಿ ನಿರುದ್ಯೋಗದ ವಿರುದ್ಧ ಸಮರಹೂಡೋಣ.

ಯುವ ಜನರೆ, ನಾವು ಬದುಕುವ ಜಗತ್ತನ್ನು ನಾವೆ ರೂಪಿಸಬೇಕು.
ತಿಳಿಯಿರಿ ನಾವು ತೊಂದರೆಯಲ್ಲ. ನಾವು ಪರಿಹಾರ ಎಂಬ ಮಾತುಗಳು ಕೇಳಿಬಂದಿವೆ.

ದಾವಣಗೆರೆ, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಿರುದ್ಯೋಗದ ಕುರಿತು ಸಂವಾದ ಕಾರ್ಯಕ್ರಮ ನಡೆದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...