Homeಕರ್ನಾಟಕ'ನಿರುದ್ಯೋಗವೇ ಭಾರತ ಬಿಟ್ಟು ತೊಲಗು': ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’: ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

- Advertisement -
- Advertisement -

ಕ್ವಿಟ್ ಇಂಡಿಯಾ ದಿನದ ನೆನಪಿನಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ “#ನಿರುದ್ಯೋಗವೇ_ಭಾರತಬಿಟ್ಟು_ತೊಲಗು
#Unemployment_QuitIndia” ಹೆಸರಿನಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಯುವಜನರಿಂದ ವಿಶಿಷ್ಟ ಆಂದೋಲನ ಆರಂಭವಾಗಿದೆ. ಉದ್ಯೋಗಕ್ಕಾಗಿ ಯುವಜನರು ಮತ್ತು ಕೆವಿಎಸ್ ಆರಂಭಿಸಿರುವ ನಿರುದ್ಯೋಗದ ವಿರುದ್ಧದ ಅಭಿಯಾನದಲ್ಲಿ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಯೂ ನಿರುದ್ಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯುವಜನರು ಉದ್ಯೋಗ ಸೃಷ್ಟಿಗಾಗಿ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿಯಿಂದಲೇ ದೇಶದ ಅಭಿವೃದ್ದಿ ಸಾಧ್ಯ ಎಂದು ವಾದಿಸಿದ್ದಾರೆ.

‘ಬದುಕುವ ಹಕ್ಕು’ ಯಾವುದೇ ಸಂವಿಧಾನ ಕೊಟ್ಟ ಹಕ್ಕಲ್ಲ. ಅದು ಪ್ರತಿಯೊಬ್ಬರಿಗೂ ಜನ್ಮದತ್ತವಾಗಿ ಬಂದಿರುವ ಹಕ್ಕು. ಎಲ್ಲರೂ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸಬೇಕಾದುದು ಪ್ರಭುತ್ವದ ಕರ್ತವ್ಯ. ಅದಕ್ಕಾಗಿ ಎಲ್ಲಾ ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಅದರ ಹೊಣೆಗಾರಿಕೆ.‌ ಪ್ರಭುತ್ವವು ನಿರುದ್ಯೋಗಿಗಳಿಗೆ ಕೆಲಸವಿಲ್ಲದಂತಹ ಮತ್ತು ಉದ್ಯೋಗಿಗಳಿಂದ ಕೆಲಸ ಕಿತ್ತುಕೊಳ್ಳುವಂತಹ ವಾತಾವರಣ ಸೃಷ್ಟಿಸುತ್ತಿದೆ ಎಂದರೆ ಅದು ಜನ್ಮದತ್ತವಾದ ನಮ್ಮ ‘ಬದುಕುವ ಹಕ್ಕ’ನ್ನು ಕಿತ್ತುಕೊಳ್ಳುತ್ತಿದೆ ಎಂದೇ ಅರ್ಥ ಎಂದು ಕಲಬುರಗಿಯ ಕುಮಾರ್ ಬುರಡಿಕಟ್ಟಿ ಪ್ರತಿಕ್ರಿಯಿಸಿದ್ದಾರೆ.

“ಪುರುಷಾಧಿಪತ್ಯ ಸಂಕೋಲೆಗಳಿಂದ ಹೊರಬಂದು ಸ್ವಾವಲಂಭಿ ಸ್ವಾಭಿಮಾನಿ ಜೀವನ ಕಟ್ಟಿಕೊಳ್ಳುತ್ತಿದ್ದ ಮಹಿಳೆಯರು, ಮತ್ತೆ ಪುರುಷಾಧಿಪತ್ಯ ಮೌಲ್ಯಗಳಲ್ಲಿ ಬಂಧಿಯಾಗುತ್ತಿರುವುದಕ್ಕೆ ನಿರುದ್ಯೋಗವು ಒಂದು ಕಾರಣ. ಉದ್ಯೋಗ ನಮ್ಮ ಹಕ್ಕು. ನಿರುದ್ಯೋಗ ಭಾರತ ಬಿಟ್ಟು ತೊಲಗಲಿ.” – ಕಾವ್ಯ ಸಮತಳ.

“ಅಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ದೇಶಬಿಟ್ಟು ತೋಲಗಿ ಎಂಬ ಘೋಷಣೆ ಕೂಗುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಸಂಕಲ್ಪ ಮಾಡಿದ್ದರು . .!

 

ಇಂದು ನಮ್ಮ ಯುವ ತಲೆಮಾರು ಜನರನ್ನು ಕಿತ್ತುತಿನ್ನುತ್ತಿರುವ ನಿರುದ್ಯೋಗ, ಬಡತನ, ಅನಕ್ಷರತೆ ಮತ್ತು ಅಸಮಾನತೆ ಎಂಬ ಸಮಸ್ಯೆಗಳು ದೇಶಬಿಟ್ಟು ತೋಲಗಲಿ ಎಂಬ ಮತ್ತೊಂದು ಘೋಷಣೆ ಕೂಗುವ ಮೂಲಕ ನಿಜವಾದ ಅರ್ಥದಲ್ಲಿ ವ್ಯಕ್ತಿಯನ್ನು ಸ್ವಾತಂತ್ರ್ಯಗೊಳಿಸಬೇಕಿದೆ” ಎಂದು ಪ್ರಾಧ್ಯಾಪಕರಾದ ಡಾ.ಕಿರಣ್ ಗಾಜನೂರುರವರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರುಣ್ ಜೋಳದ ಕೂಡ್ಲಿಗಿಯವರು “ಕ್ವಿಟ್ ಇಂಡಿಯಾ ಚಳವಳಿ’ ಯ ಸಾರ್ಥಕ ನೆನಪೆಂದರೆ, ಭಾರತ ಬಿಟ್ಟು ತೊಲಗಬೇಕಾದ ಸಂಗತಿಗಳನ್ನು ಆಯ್ದು.. ಅವುಗಳನ್ನು ತೊಲಗಿಸಲು ನಾವು ಸಕ್ರಿಯವಾಗುವುದು.

‘ನಿರುದ್ಯೋಗ’ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಆಳುವ ಸರಕಾರ ಉದ್ಯೋಗಗಳನ್ನು ಸೃಷ್ಠಿಸುತ್ತಲೇ ನಿರುದ್ಯೋಗವನ್ನು ತೊಲಗಿಸಬೇಕು. ಈ ಉದ್ಯೋಗ ಸೃಷ್ಟಿಗಾಗಿ ಸರಕಾರಗಳ ಮೇಲೆ ಗರಿಷ್ಠ ಒತ್ತಡ ತರಬೇಕಿದೆ. ಹಾಗಾದಲ್ಲಿ ‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’ ದನಿಗೆ ಬಲ ಬರುತ್ತದೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಹೋರಾಡಿದ್ದು ಸ್ವತಂತ್ರ ಮತ್ತು ಸಮೃದ್ಧ ಭಾರತಕ್ಕಾಗಿಯೇ ಹೊರತು ನಿರುದ್ಯೋಗ ಭಾರತಕ್ಕಾಗಿ ಅಲ್ಲ. ಬನ್ನಿ ನಿರುದ್ಯೋಗದ ವಿರುದ್ಧ ಸಮರಹೂಡೋಣ.

ಯುವ ಜನರೆ, ನಾವು ಬದುಕುವ ಜಗತ್ತನ್ನು ನಾವೆ ರೂಪಿಸಬೇಕು.
ತಿಳಿಯಿರಿ ನಾವು ತೊಂದರೆಯಲ್ಲ. ನಾವು ಪರಿಹಾರ ಎಂಬ ಮಾತುಗಳು ಕೇಳಿಬಂದಿವೆ.

ದಾವಣಗೆರೆ, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಿರುದ್ಯೋಗದ ಕುರಿತು ಸಂವಾದ ಕಾರ್ಯಕ್ರಮ ನಡೆದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...