Homeಕರ್ನಾಟಕ'ನಿರುದ್ಯೋಗವೇ ಭಾರತ ಬಿಟ್ಟು ತೊಲಗು': ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’: ಉದ್ಯೋಗಕ್ಕಾಗಿ ಯುವಜನರಿಂದ ಆಂದೋಲನ

- Advertisement -
- Advertisement -

ಕ್ವಿಟ್ ಇಂಡಿಯಾ ದಿನದ ನೆನಪಿನಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ “#ನಿರುದ್ಯೋಗವೇ_ಭಾರತಬಿಟ್ಟು_ತೊಲಗು
#Unemployment_QuitIndia” ಹೆಸರಿನಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ ಯುವಜನರಿಂದ ವಿಶಿಷ್ಟ ಆಂದೋಲನ ಆರಂಭವಾಗಿದೆ. ಉದ್ಯೋಗಕ್ಕಾಗಿ ಯುವಜನರು ಮತ್ತು ಕೆವಿಎಸ್ ಆರಂಭಿಸಿರುವ ನಿರುದ್ಯೋಗದ ವಿರುದ್ಧದ ಅಭಿಯಾನದಲ್ಲಿ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಯೂ ನಿರುದ್ಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯುವಜನರು ಉದ್ಯೋಗ ಸೃಷ್ಟಿಗಾಗಿ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿಯಿಂದಲೇ ದೇಶದ ಅಭಿವೃದ್ದಿ ಸಾಧ್ಯ ಎಂದು ವಾದಿಸಿದ್ದಾರೆ.

‘ಬದುಕುವ ಹಕ್ಕು’ ಯಾವುದೇ ಸಂವಿಧಾನ ಕೊಟ್ಟ ಹಕ್ಕಲ್ಲ. ಅದು ಪ್ರತಿಯೊಬ್ಬರಿಗೂ ಜನ್ಮದತ್ತವಾಗಿ ಬಂದಿರುವ ಹಕ್ಕು. ಎಲ್ಲರೂ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸಬೇಕಾದುದು ಪ್ರಭುತ್ವದ ಕರ್ತವ್ಯ. ಅದಕ್ಕಾಗಿ ಎಲ್ಲಾ ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಅದರ ಹೊಣೆಗಾರಿಕೆ.‌ ಪ್ರಭುತ್ವವು ನಿರುದ್ಯೋಗಿಗಳಿಗೆ ಕೆಲಸವಿಲ್ಲದಂತಹ ಮತ್ತು ಉದ್ಯೋಗಿಗಳಿಂದ ಕೆಲಸ ಕಿತ್ತುಕೊಳ್ಳುವಂತಹ ವಾತಾವರಣ ಸೃಷ್ಟಿಸುತ್ತಿದೆ ಎಂದರೆ ಅದು ಜನ್ಮದತ್ತವಾದ ನಮ್ಮ ‘ಬದುಕುವ ಹಕ್ಕ’ನ್ನು ಕಿತ್ತುಕೊಳ್ಳುತ್ತಿದೆ ಎಂದೇ ಅರ್ಥ ಎಂದು ಕಲಬುರಗಿಯ ಕುಮಾರ್ ಬುರಡಿಕಟ್ಟಿ ಪ್ರತಿಕ್ರಿಯಿಸಿದ್ದಾರೆ.

“ಪುರುಷಾಧಿಪತ್ಯ ಸಂಕೋಲೆಗಳಿಂದ ಹೊರಬಂದು ಸ್ವಾವಲಂಭಿ ಸ್ವಾಭಿಮಾನಿ ಜೀವನ ಕಟ್ಟಿಕೊಳ್ಳುತ್ತಿದ್ದ ಮಹಿಳೆಯರು, ಮತ್ತೆ ಪುರುಷಾಧಿಪತ್ಯ ಮೌಲ್ಯಗಳಲ್ಲಿ ಬಂಧಿಯಾಗುತ್ತಿರುವುದಕ್ಕೆ ನಿರುದ್ಯೋಗವು ಒಂದು ಕಾರಣ. ಉದ್ಯೋಗ ನಮ್ಮ ಹಕ್ಕು. ನಿರುದ್ಯೋಗ ಭಾರತ ಬಿಟ್ಟು ತೊಲಗಲಿ.” – ಕಾವ್ಯ ಸಮತಳ.

“ಅಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ದೇಶಬಿಟ್ಟು ತೋಲಗಿ ಎಂಬ ಘೋಷಣೆ ಕೂಗುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಸಂಕಲ್ಪ ಮಾಡಿದ್ದರು . .!

 

ಇಂದು ನಮ್ಮ ಯುವ ತಲೆಮಾರು ಜನರನ್ನು ಕಿತ್ತುತಿನ್ನುತ್ತಿರುವ ನಿರುದ್ಯೋಗ, ಬಡತನ, ಅನಕ್ಷರತೆ ಮತ್ತು ಅಸಮಾನತೆ ಎಂಬ ಸಮಸ್ಯೆಗಳು ದೇಶಬಿಟ್ಟು ತೋಲಗಲಿ ಎಂಬ ಮತ್ತೊಂದು ಘೋಷಣೆ ಕೂಗುವ ಮೂಲಕ ನಿಜವಾದ ಅರ್ಥದಲ್ಲಿ ವ್ಯಕ್ತಿಯನ್ನು ಸ್ವಾತಂತ್ರ್ಯಗೊಳಿಸಬೇಕಿದೆ” ಎಂದು ಪ್ರಾಧ್ಯಾಪಕರಾದ ಡಾ.ಕಿರಣ್ ಗಾಜನೂರುರವರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರುಣ್ ಜೋಳದ ಕೂಡ್ಲಿಗಿಯವರು “ಕ್ವಿಟ್ ಇಂಡಿಯಾ ಚಳವಳಿ’ ಯ ಸಾರ್ಥಕ ನೆನಪೆಂದರೆ, ಭಾರತ ಬಿಟ್ಟು ತೊಲಗಬೇಕಾದ ಸಂಗತಿಗಳನ್ನು ಆಯ್ದು.. ಅವುಗಳನ್ನು ತೊಲಗಿಸಲು ನಾವು ಸಕ್ರಿಯವಾಗುವುದು.

‘ನಿರುದ್ಯೋಗ’ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಆಳುವ ಸರಕಾರ ಉದ್ಯೋಗಗಳನ್ನು ಸೃಷ್ಠಿಸುತ್ತಲೇ ನಿರುದ್ಯೋಗವನ್ನು ತೊಲಗಿಸಬೇಕು. ಈ ಉದ್ಯೋಗ ಸೃಷ್ಟಿಗಾಗಿ ಸರಕಾರಗಳ ಮೇಲೆ ಗರಿಷ್ಠ ಒತ್ತಡ ತರಬೇಕಿದೆ. ಹಾಗಾದಲ್ಲಿ ‘ನಿರುದ್ಯೋಗವೇ ಭಾರತ ಬಿಟ್ಟು ತೊಲಗು’ ದನಿಗೆ ಬಲ ಬರುತ್ತದೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಭಗತ್ ಸಿಂಗ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಹೋರಾಡಿದ್ದು ಸ್ವತಂತ್ರ ಮತ್ತು ಸಮೃದ್ಧ ಭಾರತಕ್ಕಾಗಿಯೇ ಹೊರತು ನಿರುದ್ಯೋಗ ಭಾರತಕ್ಕಾಗಿ ಅಲ್ಲ. ಬನ್ನಿ ನಿರುದ್ಯೋಗದ ವಿರುದ್ಧ ಸಮರಹೂಡೋಣ.

ಯುವ ಜನರೆ, ನಾವು ಬದುಕುವ ಜಗತ್ತನ್ನು ನಾವೆ ರೂಪಿಸಬೇಕು.
ತಿಳಿಯಿರಿ ನಾವು ತೊಂದರೆಯಲ್ಲ. ನಾವು ಪರಿಹಾರ ಎಂಬ ಮಾತುಗಳು ಕೇಳಿಬಂದಿವೆ.

ದಾವಣಗೆರೆ, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಿರುದ್ಯೋಗದ ಕುರಿತು ಸಂವಾದ ಕಾರ್ಯಕ್ರಮ ನಡೆದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...