Homeಎಕಾನಮಿನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ...

ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

- Advertisement -
- Advertisement -

ಭಾರತದಲ್ಲಿ ನಗರ ನಿರುದ್ಯೋಗ ದರ ಈ ವರ್ಷದ ಜನವರಿ ಮತ್ತು ಮಾರ್ಚ್ ನಲ್ಲಿ ಶೇ. 9.3ಕ್ಕೆ ಇಳಿದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಇದು ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ರಾಯಿಟರ್ಸ್ ಪರಿಶೀಲಿಸಿದ ಅಪ್ರಕಟಿತ ಸರ್ಕಾರದ ವರದಿಯ ಅಂಕಿ-ಅಂಶಗಳ ಪ್ರಕಾರ, ಸಚಿವಾಲಯದ ತ್ರೈಮಾಸಿಕ ಉದ್ಯೋಗ ವರದಿಯಲ್ಲಿ ದಾಖಲಾಗಿರುವ ಸಂಖ್ಯೆಗಳು ಪ್ರಧಾನಿ ಮೋದಿಗೆ ಸ್ವಲ್ಪ ನಿರಾಳತೆ ತಂದುಕೊಟ್ಟಿವೆ. ಏಕೆಂದರೆ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂಬ ಬಹುದೊಡ್ಡ ಆರೋಪ ಮೋದಿಯವರ ಮೇಲಿದೆ.

ನಗರ ನಿರುದ್ಯೋಗ ದರವು ಹಿಂದಿನ ತ್ರೈಮಾಸಿಕದಲ್ಲಿ ಶೇ. 9.9 ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಜನವರಿ-ಮಾರ್ಚ್ ತ್ರೈಮಾಸಿಕದ ದರ ಕಡಿಮೆಯಾಗಿದ್ದು 9.3ಗೆ ಇಳಿದಿದೆ. ಇನ್ನು 2018ರ ಏಪ್ರೀಲ್-ಜೂನ್ ಸಮೀಕ್ಷೆಯ ಮೊದಲ ತ್ರೈಮಾಸಿಕ ಅವಧಿಯ ಡೇಟಾ ಇನ್ನು ಲಭ್ಯವಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಇದರಲ್ಲಿ ಗ್ರಾಮೀಣ ನಿರುದ್ಯೋಗವನ್ನು ಅಂದಾಜು ಮಾಡಿಲ್ಲ. ಈ ಕುರಿತ ವರದಿಯನ್ನು ಸೇರಿಸಿಲ್ಲ. ಸದ್ಯದಲ್ಲೇ ಗ್ರಾಮೀಣ ನಿರುದ್ಯೋಗ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಇನ್ನು ಸಮೀಕ್ಷೆಯ ಅವಧಿಗೆ ಮೊದಲ ಏಳು ದಿನಗಳ ಅಲ್ಪಾವಧಿಯಲ್ಲಿ ನಿರುದ್ಯೋಗದ ಸರಾಸರಿ ಚಿತ್ರಣವನ್ನು ನೀಡುವ ಪ್ರಸ್ತುತ ಸಾಪ್ತಾಹಿಕ ಸ್ಥಿತಿ ವಿಧಾನ ಬಳಸಿಕೊಂಡು ಅಂದಾಜು ಮಾಡಲಾಗಿದೆ. ಒಬ್ಬ ವ್ಯಕ್ತಿಯು ವಾರದಲ್ಲಿ 1 ಗಂಟೆಯೂ ಸಹ ಕೆಲಸ ಮಾಡದಿದ್ದರೆ ಆತನನ್ನು ನಿರುದ್ಯೋಗಿ ಎಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ನಿರುದ್ಯೋಗ ಯುವ ಜನತೆ ಅಂದರೆ 15-29 ವರ್ಷ ವಯಸ್ಸಿನವರು ಭಾರತದ 1.3 ಬಿಲಿಯನ್ ಜನರಲ್ಲಿ ಸರಿಸುಮಾರು ಮೂರನೇ ಒಂದು ಭಾಗದಷ್ಟು ಇದ್ದಾರೆ ಎನ್ನಲಾಗುತ್ತಿದೆ. ಹಿಂದಿನ ತ್ರೈಮಾಸಿಕದಲ್ಲಿ ಶೇ. 23.7ರಷ್ಟು ನಿರುದ್ಯೋಗ ಪ್ರಮಾಣವಿದ್ದರೆ, ಮಾರ್ಚ್ 2019 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇ. 22.5 ರಷ್ಟಕ್ಕೆ ಇಳಿದಿದೆ.

ಆದರೂ ಉದ್ಯೋಗಕ್ಕೆ ಸಂಬಂಧಿಸಿದ ಸಮರ್ಪಕ ಡೇಟಾವನ್ನು ನಿಯಮಿತವಾಗಿ ಬಿಡುಗಡೆ ಮಾಡದಿರುವ ಕಾರಣಕ್ಕೆ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಫೆಬ್ರವರಿಯಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಜುಲೈ 2017-ಜೂನ್ 2018 ರ ಮೊದಲ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ 45 ವರ್ಷಗಳಲ್ಲಿ ನಿರುದ್ಯೋಗ ದರ ಅತಿಹೆಚ್ಚು ಎಂದು ವರದಿ ಹೇಳಿತ್ತು. ಇದು ವ್ಯಾಪಕ ಚರ್ಚೆಗೀಡಾಗಿತ್ತು. ಇದಾದ ನಂತರ ಮೋದಿ ಸರ್ಕಾರ ಮೇ ತಿಂಗಳಲ್ಲಿ ಅಧಿಕೃತ ವರದಿ ಬಿಡುಗಡೆ ಮಾಡಿತು.

ಈಗ ರಾಯಿಟರ್ಸ್ ಪರಿಶೀಲಿಸಿದ ಇತ್ತೀಚಿನ ವರದಿಯಲ್ಲಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಆಗಿರುವ ಉದ್ಯೋಗಗಳ ಮೌಲ್ಯಮಾಪನವೂ ಇದೆ. ಸಾಪ್ತಾಹಿಕ ಸ್ಥಿತಿ ಆಧರಿಸಿ ನಿರುದ್ಯೋಗ ದರ ಕುಸಿತ ಸಾಮಾನ್ಯ ವೇತನ ನೌಕರರಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗಿಗಳ ಒಂದು ಭಾಗವು ಇದೇ ಅವಧಿಯಲ್ಲಿ ಹೆಚ್ಚಿದೆ ಎಂಬುದನ್ನು ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...