Homeಎಕಾನಮಿನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ...

ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

- Advertisement -
- Advertisement -

ಭಾರತದಲ್ಲಿ ನಗರ ನಿರುದ್ಯೋಗ ದರ ಈ ವರ್ಷದ ಜನವರಿ ಮತ್ತು ಮಾರ್ಚ್ ನಲ್ಲಿ ಶೇ. 9.3ಕ್ಕೆ ಇಳಿದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಇದು ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ರಾಯಿಟರ್ಸ್ ಪರಿಶೀಲಿಸಿದ ಅಪ್ರಕಟಿತ ಸರ್ಕಾರದ ವರದಿಯ ಅಂಕಿ-ಅಂಶಗಳ ಪ್ರಕಾರ, ಸಚಿವಾಲಯದ ತ್ರೈಮಾಸಿಕ ಉದ್ಯೋಗ ವರದಿಯಲ್ಲಿ ದಾಖಲಾಗಿರುವ ಸಂಖ್ಯೆಗಳು ಪ್ರಧಾನಿ ಮೋದಿಗೆ ಸ್ವಲ್ಪ ನಿರಾಳತೆ ತಂದುಕೊಟ್ಟಿವೆ. ಏಕೆಂದರೆ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂಬ ಬಹುದೊಡ್ಡ ಆರೋಪ ಮೋದಿಯವರ ಮೇಲಿದೆ.

ನಗರ ನಿರುದ್ಯೋಗ ದರವು ಹಿಂದಿನ ತ್ರೈಮಾಸಿಕದಲ್ಲಿ ಶೇ. 9.9 ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಜನವರಿ-ಮಾರ್ಚ್ ತ್ರೈಮಾಸಿಕದ ದರ ಕಡಿಮೆಯಾಗಿದ್ದು 9.3ಗೆ ಇಳಿದಿದೆ. ಇನ್ನು 2018ರ ಏಪ್ರೀಲ್-ಜೂನ್ ಸಮೀಕ್ಷೆಯ ಮೊದಲ ತ್ರೈಮಾಸಿಕ ಅವಧಿಯ ಡೇಟಾ ಇನ್ನು ಲಭ್ಯವಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಇದರಲ್ಲಿ ಗ್ರಾಮೀಣ ನಿರುದ್ಯೋಗವನ್ನು ಅಂದಾಜು ಮಾಡಿಲ್ಲ. ಈ ಕುರಿತ ವರದಿಯನ್ನು ಸೇರಿಸಿಲ್ಲ. ಸದ್ಯದಲ್ಲೇ ಗ್ರಾಮೀಣ ನಿರುದ್ಯೋಗ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಇನ್ನು ಸಮೀಕ್ಷೆಯ ಅವಧಿಗೆ ಮೊದಲ ಏಳು ದಿನಗಳ ಅಲ್ಪಾವಧಿಯಲ್ಲಿ ನಿರುದ್ಯೋಗದ ಸರಾಸರಿ ಚಿತ್ರಣವನ್ನು ನೀಡುವ ಪ್ರಸ್ತುತ ಸಾಪ್ತಾಹಿಕ ಸ್ಥಿತಿ ವಿಧಾನ ಬಳಸಿಕೊಂಡು ಅಂದಾಜು ಮಾಡಲಾಗಿದೆ. ಒಬ್ಬ ವ್ಯಕ್ತಿಯು ವಾರದಲ್ಲಿ 1 ಗಂಟೆಯೂ ಸಹ ಕೆಲಸ ಮಾಡದಿದ್ದರೆ ಆತನನ್ನು ನಿರುದ್ಯೋಗಿ ಎಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ನಿರುದ್ಯೋಗ ಯುವ ಜನತೆ ಅಂದರೆ 15-29 ವರ್ಷ ವಯಸ್ಸಿನವರು ಭಾರತದ 1.3 ಬಿಲಿಯನ್ ಜನರಲ್ಲಿ ಸರಿಸುಮಾರು ಮೂರನೇ ಒಂದು ಭಾಗದಷ್ಟು ಇದ್ದಾರೆ ಎನ್ನಲಾಗುತ್ತಿದೆ. ಹಿಂದಿನ ತ್ರೈಮಾಸಿಕದಲ್ಲಿ ಶೇ. 23.7ರಷ್ಟು ನಿರುದ್ಯೋಗ ಪ್ರಮಾಣವಿದ್ದರೆ, ಮಾರ್ಚ್ 2019 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇ. 22.5 ರಷ್ಟಕ್ಕೆ ಇಳಿದಿದೆ.

ಆದರೂ ಉದ್ಯೋಗಕ್ಕೆ ಸಂಬಂಧಿಸಿದ ಸಮರ್ಪಕ ಡೇಟಾವನ್ನು ನಿಯಮಿತವಾಗಿ ಬಿಡುಗಡೆ ಮಾಡದಿರುವ ಕಾರಣಕ್ಕೆ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಫೆಬ್ರವರಿಯಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಜುಲೈ 2017-ಜೂನ್ 2018 ರ ಮೊದಲ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ 45 ವರ್ಷಗಳಲ್ಲಿ ನಿರುದ್ಯೋಗ ದರ ಅತಿಹೆಚ್ಚು ಎಂದು ವರದಿ ಹೇಳಿತ್ತು. ಇದು ವ್ಯಾಪಕ ಚರ್ಚೆಗೀಡಾಗಿತ್ತು. ಇದಾದ ನಂತರ ಮೋದಿ ಸರ್ಕಾರ ಮೇ ತಿಂಗಳಲ್ಲಿ ಅಧಿಕೃತ ವರದಿ ಬಿಡುಗಡೆ ಮಾಡಿತು.

ಈಗ ರಾಯಿಟರ್ಸ್ ಪರಿಶೀಲಿಸಿದ ಇತ್ತೀಚಿನ ವರದಿಯಲ್ಲಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಆಗಿರುವ ಉದ್ಯೋಗಗಳ ಮೌಲ್ಯಮಾಪನವೂ ಇದೆ. ಸಾಪ್ತಾಹಿಕ ಸ್ಥಿತಿ ಆಧರಿಸಿ ನಿರುದ್ಯೋಗ ದರ ಕುಸಿತ ಸಾಮಾನ್ಯ ವೇತನ ನೌಕರರಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗಿಗಳ ಒಂದು ಭಾಗವು ಇದೇ ಅವಧಿಯಲ್ಲಿ ಹೆಚ್ಚಿದೆ ಎಂಬುದನ್ನು ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...